ಧಾರವಾಡದ ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನ

ಧಾರವಾಡದಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಸುದ್ದಿಗೋಷ್ಠಿ ಮಾಡಿದ್ದು, ಮುಸ್ಲಿಂ ಹುಡುಗರಿಂದಲೇ ಮುಸ್ಲಿಂ ನಾಯಕರನ್ನು ಹೊಡೆಸುವ ಪ್ಲ್ಯಾನ್ ಇದು. ನಮಗೆ ಜೀವ ಬೆದರಿಕೆ ಹಾಕಿದ್ದಾರೆ. ಮಣಕಿಲ್ಲಾ, ರಸೂಲಪುರ ಗಲ್ಲಿಯಲ್ಲಿ ಚಾಕು ಹಿಡಿದುಕೊಂಡು ನಿನ್ನೆ ಓಡಾಡಿದ್ದಾರೆ. ಪೊಲೀಸರು ಮತ್ತು ಪೊಲೀಸ್ ಕಮಿಷನರ್ ಮೇಲೆ ನಂಬಿಕೆ ಇದೆ ಎಂದು ಹೇಳಿದ್ದಾರೆ.

ಧಾರವಾಡದ ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಧಾರವಾಡದ ಅಂಜುಮನ್ ಸಂಸ್ಥೆ ಅಧ್ಯಕ್ಷನ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
Edited By:

Updated on: Aug 11, 2024 | 3:13 PM

ಧಾರವಾಡ, ಆಗಸ್ಟ್​ 11: ಅಂಜುಮನ್ (Anjuman) ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ (ismail tamatgar) ಮನೆಗೆ ನುಗ್ಗಿ ಕಿಡಿಗೇಡಿಗಳು ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. 18-20 ವರ್ಷದ ಹುಡುಗರು ನನ್ನನ್ನು ಹೊಡೆಯೋಕೆ ಪ್ಲ್ಯಾನ್ ಮಾಡಿರುವುದಾಗಿ ಆರೋಪಿಸಲಾಗಿದೆ. ಕಿಡಿಗೇಡಿಗಳ ಗ್ಯಾಂಗ್​ ಮೊದಲಿಗೆ ಅಂಜುಮನ್ ಸಂಸ್ಥೆಯ ಕಚೇರಿ ಬಳಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಆದರೆ ಅಲ್ಲಿ ಇಸ್ಮಾಯಿಲ್ ತಮಟಗಾರ ಸಿಕ್ಕಿಲ್ಲ. ಹಾಗಾಗಿ ಮನೆಗೆ ನುಗ್ಗಿದ್ದಾರೆ. ಅಲ್ಲಿಯೂ ಇಸ್ಮಾಯಿಲ್​ ಇಲ್ಲದಿದ್ದರಿಂದ ಮನೆಯವರೊಂದಿಗೆ ಗಲಾಟೆ ಮಾಡಿದ್ದಾರೆ.

ಮುಸ್ಲಿಂ ಹುಡುಗರಿಂದಲೇ ಮುಸ್ಲಿಂ ನಾಯಕರನ್ನು ಹೊಡೆಸುವ ಪ್ಲ್ಯಾನ್

ಸದ್ಯ ಘಟನೆ ಬಗ್ಗೆ ಧಾರವಾಡದಲ್ಲಿ ಅಂಜುಮನ್ ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ ಸುದ್ದಿಗೋಷ್ಠಿ ಮಾಡಿದ್ದು, ಮುಸ್ಲಿಂ ಹುಡುಗರಿಂದಲೇ ಮುಸ್ಲಿಂ ನಾಯಕರನ್ನು ಹೊಡೆಸುವ ಪ್ಲ್ಯಾನ್ ಇದು. ನಮಗೆ ಜೀವ ಬೆದರಿಕೆ ಹಾಕಿದ್ದಾರೆ. ಮಣಕಿಲ್ಲಾ, ರಸೂಲಪುರ ಗಲ್ಲಿಯಲ್ಲಿ ಚಾಕು ಹಿಡಿದುಕೊಂಡು ನಿನ್ನೆ ಓಡಾಡಿದ್ದಾರೆ. ಪೊಲೀಸರು ಮತ್ತು ಪೊಲೀಸ್ ಕಮಿಷನರ್ ಮೇಲೆ ನಂಬಿಕೆ ಇದೆ. ಇದರ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಧಾರವಾಡ ಕೆಐಎಡಿಬಿ ಅಕ್ರಮ ಪ್ರಕರಣ; ಸಿಐಡಿ ತನಿಖೆ ಬೆನ್ನಲ್ಲೇ ಎಂಟ್ರಿ ಕೊಟ್ಟ ಇಡಿ

ಧಾರವಾಡ ವಿದ್ಯಾಕಾಶಿ. ಇಲ್ಲಿ ಶಾಂತಿ ಕಾಪಾಡುವುದು ಎಲ್ಲರ ಕರ್ತವ್ಯ. ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕು. ಯಾರ ಜೊತೆಯೂ ವೈಯಕ್ತಿಕ ದ್ವೇಷ ಇಲ್ಲ. 18-20 ವರ್ಷದ ಹುಡುಗರು ಬೆದರಿಕೆ ಹಾಕಿದ್ದಾರೆ. ಅವರ ತಂದೆ ಆಟೋ ಹೊಡೆಯುತ್ತಾರೆ. ಇಂತಹ ‌ಹುಡುಗರಿಗೆ ಪ್ರಚೋದನೆ ಕೊಟ್ಟವರು ಯಾರು? ನಾನು ಅವರೆಲ್ಲರ ಕುಟುಂಬಗಳಿಗೆ ಕಷ್ಟ ಇದ್ದಾಗ ಸಹಾಯ ಮಾಡಿದ್ದೇನೆ. ಆ ಹುಡುಗರ ತಪ್ಪಿಲ್ಲದೇ ಇರಬಹುದು ಆದರೆ ಹಿಂದೆ ಇರೋರು ಯಾರು ಅಂತಾ ಪತ್ತೆ ಮಾಡಬೇಕು. ಯಾರು ಯಾರು ಪ್ಲ್ಯಾನ್ ಮಾಡಿದ್ದಾರೆ ಎಲ್ಲ ನನಗೆ ಗೊತ್ತಿದೆ. ಕಾಲ್ ರೆಕಾರ್ಡ್ಸ್​, ವಿಡಿಯೋ ಎಲ್ಲ ಇವೆ. ಅದನ್ನೆಲ್ಲಾ ಪೊಲೀಸರಿಗೆ ಒಪ್ಪಿಸುವೆ ಎಂದಿದ್ದಾರೆ.

ಒಂದು ವರ್ಷದ ಹಿಂದೆ ನನ್ನ ಮುಗಿಸಲು ಪ್ಲ್ಯಾನ್ ನಡೆದಿದೆ. ಮುಸಲ್ಮಾನ ಹುಡುಗರೇ ನನ್ನನ್ನು ಹೊಡೆಯುವಂತೆ ಪ್ಲ್ಯಾನ್ ಮಾಡಿದ್ದಾರೆ. ಈ ಹಿಂದೆ ಮುಸ್ಲಿಂ ಹುಡುಗರನ್ನೇ 8-10 ಜನರನ್ನು ಕ್ಯಾಚ್ ಮಾಡಿದ್ದರು. ಅದೇ ಹುಡುಗರು ನಮ್ಮ ಮನೆಗೆ ಬಂದು ಹೇಳಿದ್ದಾರೆ. ಈಗ ನಾವು ಹೊಡೆಯದೇ ಇರಬಹುದು. ಮುಂದೆ ಯಾರಾದ್ರೂ ಹೊಡೆಯಬಹುದು ಅಂತಾ ಎಚ್ಚರಿಕೆ ಕೊಟ್ಟಿದ್ದಾರೆ ಎಂದರು.

ನನಗೇನಾದರೂ ಆದರೆ ಇಂಥವರೇ ಕಾರಣ

ಸಣ್ಣ ಸಣ್ಣ ಮುಸ್ಲಿಂ ಹುಡುಗರಿಂದ ನನ್ನನ್ನು ಹೊಡೆಸಬೇಕು? ನಶೆಯಲ್ಲಿರುವ ಹುಡುಗರಿಂದ ಹೊಡೆಸಬೇಕು. ಬಳಿಕ ಆ ಹುಡುಗರನ್ನು ಎನ್‌ಕೌಂಟರ್ ಮಾಡಿಸಬೇಕು ಅಂತಾ ಪ್ಲ್ಯಾನ್ ನಡೆದಿದೆ. ನನಗೇನಾದರೂ ಆದರೆ ಇಂಥವರೇ ಕಾರಣ ಅಂತಾ ನಾನು ಮನೆಯಲ್ಲಿ ಹೇಳಿಟ್ಟಿದ್ದೇನೆ. ವರ್ಷದ ಹಿಂದೆಯೇ ಮನೆಯವರಿಗೆ ಹೇಳಿಟ್ಟಿದ್ದೇನೆ. ನಾನು ಸಂಶಯ ಇದ್ದವರ ಬಗ್ಗೆ ಪೊಲೀಸ್ ಕಮಿಷನರ್​ಗೆ ಮಾಹಿತಿ ಕೊಟ್ಟಿದ್ದೇನೆ. ಇದರಲ್ಲಿ ರಾಜಕೀಯವಾಗಿ ಮುಗಿಸುವ ಷಡ್ಯಂತ್ರ ಇದೆ. ನನ್ನ ಮುಗಿಸುವ ಪ್ಲ್ಯಾನ್​ದಲ್ಲಿ ರಾಜಕೀಯವೇ ಇದೆ.

ಇದನ್ನೂ ಓದಿ: ಮಾನವೀಯ ಕಾರ್ಯಕ್ಕೆ ಸಾಕ್ಷಿ ಆಯ್ತು ಹುಬ್ಬಳ್ಳಿ ವಿಮಾನ ನಿಲ್ದಾಣ

ಅಂಜುಮನ್ ಚುನಾವಣೆ, ಎಂಎಲ್ಎ ಚುನಾವಣೆ, ಪಾಲಿಕೆ ಚುನಾವಣೆ ಯಾವುದೋ ಒಂದು ರಾಜಕೀಯವೇ ಇದೆ. ಈ ಸಂಬಂಧ ನಾನು ಕಮಿಷನರ್​ಗೆ ದೂರು ಕೊಡಲಿದ್ದೇನೆ. ಮುಸ್ಲಿಂರೇ ಹೊಡೆಯಬೇಕು ಅಂತಾ ಪ್ಲ್ಯಾನ್ ಮಾಡಿದ್ದಾರೆ. ಮುಸ್ಲಿಂರನ್ನು ಬಿಟ್ಟರೆ ಬೇರೆಯವರಿಗೆ ಕೊಟ್ಟರೆ ನನ್ನನ್ನು ಯಾವಾಗ್ಲೋ ಹೊಡೆತ್ತಿದ್ದರು. ಇಷ್ಟು ದಿನ ರಕ್ಷಣೆ ಕೇಳಬೇಕು ಅನಿಸಿರಲಿಲ್ಲ ಆದರೆ ಈಗ ಪೊಲೀಸ್ ರಕ್ಷಣೆ ಬೇಕಾಗಿದೆ. ಈ ಸಂಬಂಧ ನಾನು ಪೊಲೀಸ್ ರಕ್ಷಣೆ ಕೇಳುವೆ. ಈ ಹಿಂದೆಯೂ ನನ್ನ ವಿರುದ್ಧ ಪ್ಲ್ಯಾನ್ ಆಗಿದ್ದರ ಬಗ್ಗೆ ಪೊಲೀಸ್ ಕಮಿಷನರ್​ಗೆ ಮಾಹಿತಿ ಕೊಟ್ಟಿದ್ದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us