AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂದಗತಿಯಲ್ಲಿ ಸಾಗುತ್ತಿರುವ ಧಾರವಾಡ ಬಸ್​ ಸೇತುವೆ ಕಾಮಗಾರಿ; ಸ್ಥಳೀಯರ ಆಕ್ರೋಶ

ಕಳೆದ ವರ್ಷ ಧಾರವಾಡದ ನವಲೂರು ಬಡಾವಣೆ ಬಳಿಯ ಸೇತುವೆ ಬಸ್ ಓಡಾಡುವ ಮುಂಚೆಯೇ ಕುಸಿದು ಬೀಳುವುದಕ್ಕೆ ಶುರುವಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಖುದ್ದು ಸಿಎಂ ಯಡಿಯೂರಪ್ಪನವರೇ ಆದೇಶ ನೀಡಿದರೂ ಕಿವಿಗೊಡದ ಅಧಿಕಾರಿಗಳು ಈಗ ಸದ್ದಿಲ್ಲದೇ ಸೇತುವೆಗೆ ತರಾತುರಿಯಲ್ಲಿ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ.

ಮಂದಗತಿಯಲ್ಲಿ ಸಾಗುತ್ತಿರುವ ಧಾರವಾಡ ಬಸ್​ ಸೇತುವೆ ಕಾಮಗಾರಿ; ಸ್ಥಳೀಯರ ಆಕ್ರೋಶ
ಸೇತುವೆ ಕಾಮಗಾರಿ
Follow us
preethi shettigar
| Updated By: ಆಯೇಷಾ ಬಾನು

Updated on: Apr 12, 2021 | 7:00 AM

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಧ್ಯೆ ತ್ವರಿತಗತಿ ಬಸ್ ಸೇವೆ ನೀಡುವ ಬಿಆರ್​ಟಿಎಸ್ ಯೋಜನೆಗೆ ಕೊನೆಯೇ ಇಲ್ಲದಂತಾಗಿದೆ. ಕಳೆದ ವರ್ಷ ಧಾರವಾಡದ ನವಲೂರು ಬಡಾವಣೆ ಬಳಿಯ ಸೇತುವೆ, ಬಸ್ ಓಡಾಡುವ ಮುಂಚೆಯೇ ಕುಸಿದು ಬೀಳುವುದಕ್ಕೆ ಶುರುವಾಗಿತ್ತು. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಖುದ್ದು ಸಿಎಂ ಯಡಿಯೂರಪ್ಪನವರೇ ಆದೇಶ ನೀಡಿದರೂ ಕಿವಿಗೊಡದ ಅಧಿಕಾರಿಗಳು ಈಗ ಸದ್ದಿಲ್ಲದೇ ಸೇತುವೆಗೆ ತರಾತುರಿಯಲ್ಲಿ ತೇಪೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ.

ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಮಧ್ಯೆ ತ್ವರಿತಗತಿ ಬಸ್ ಸೇವೆ ನೀಡುವ ಉದ್ದೇಶದಿಂದ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿ ಆರಂಭಿಸಲಾಗಿರುವ ಈ ಯೋಜನೆ ಹೇಗೆ ಹಳ್ಳ ಹಿಡಿದಿದೆ ಎನ್ನುವುದಕ್ಕೆ ಈ ಸೇತುವೆಯೇ ಸಾಕ್ಷಿ. ಈ ವಿಚಾರ ಮುಖ್ಯಮಂತ್ರಿವರೆಗೂ ಹೋಗಿತ್ತು, ಈ ಬಗ್ಗೆ ವರದಿ ಸಲ್ಲಿಸುವಂತೆ ಖುದ್ದು ಸಿಎಂ ಯಡಿಯೂರಪ್ಪ ಸೂಚಿಸಿದ್ದರು. ಆದರೆ ಮುಖ್ಯಮಂತ್ರಿ ಹೇಳಿದ್ದರೂ ಈ ಬಗ್ಗೆ ತಲೆ ಕೆಡಿಸಿಕೊಳ್ಳದೇ ಇದ್ದಿದ್ದು ವಿಪರ್ಯಾಸ.

ಮತ್ತೆ ಸೇತುವೆ ಕಾಮಗಾರಿ ಆರಂಭವಾಗಿದೆ. ಆದರೆ ಕಡಿಮೆ ಕೆಲಸಗಾರರನ್ನು ಬಳಸುತ್ತಿದ್ದಾರೆ. ಹೀಗಾಗಿ ಜಾಸ್ತಿ ಕೆಲಸಗಾರರನ್ನು ಇಟ್ಟುಕೊಂಡು ವೇಗಗತಿಯಲ್ಲಿ ಕಾಮಗಾರಿ ನಿರ್ವಹಿಸಲು ತಿಳಿಸಿದ್ದೇನೆ. ಬಿಆರ್​ಟಿಎಸ್ ಕಂಪನಿ ಈ ಸೇತುವೆ ಕಾಮಗಾರಿ ನಿರ್ವಹಿಸುತ್ತಿದ್ದಾರೆ. ಅವರು ಸ್ಥಳೀಯರಿಗೆ ಸರಿಯಾದ ಮಾಹಿತಿ ನೀಡುತ್ತಿಲ್ಲ ಎನ್ನುವ ಆರೋಪ ಇತ್ತು ಹೀಗಾಗಿ ಬಿಆರ್​ಟಿಎಸ್ ಕಂಪನಿಗೆ ಈ ಬಗ್ಗೆ ತಿಳಿಸಲಾಗಿದೆ. ಇನ್ನು ಮುಂದೆ ಸೇತುವೆ ಕಾಮಗಾರಿ ಉತ್ತಮ ನಿರ್ವಹಣೆಯಲ್ಲಿ ನಡೆಯುವಂತೆ ನೋಡಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದ್ದಾರೆ.

bridge construction

ನಿಧಾನಗತಿಯಲ್ಲಿ ನಡೆಯುತ್ತಿರುವ ಸೇತುವೆ ಕಾಮಗಾರಿ

ಈ ಸೇತುವೆಯ ಕುರಿತಾದ ತನಿಖೆ ಏನಾಯ್ತು ಎನ್ನವುದು ಯಾರಿಗೂ ಗೊತ್ತಿಲ್ಲ. ಅಲ್ಲದೇ ಯಾರ ಮೇಲೆ ಕ್ರಮವೂ ಆಗಿಲ್ಲ. ಹೀಗಾಗಿ ಈ ಸೇತುವೆ ಗುಣಮಟ್ಟದ ಬಗ್ಗೆ ಸರಿಯಾಗಿ ತಿಳಿದುಕೊಳ್ಳದೇ ಈ ರೀತಿ ತೇಪೆ ಹಚ್ಚುವ ಕಾಮಗಾರಿ ಆರಂಭಿಸುತ್ತಿದ್ದಾರೆ. ಏಕೆಂದರೆ ಸಿಎಂ ಯಡಿಯೂರಪ್ಪ ತನಿಖೆ ನಡೆಸಿ ವರದಿ ಸಲ್ಲಿಸಲು ಮೂರು ತಿಂಗಳ ಗಡುವು ನೀಡಿದ್ದರು. ಆದರೆ ಇದೀಗ ಸೂಚನೆ ನೀಡಿ ಆರು ತಿಂಗಳಾದರೂ ವರದಿಯನ್ನೇ ಸಲ್ಲಿಸಿದ ಅಧಿಕಾರಿಗಳು ಈ ಸೇತುವೆಯ ದುರಸ್ತಿಯನ್ನು ಅದೆಷ್ಟು ಸರಿಯಾಗಿ ಮಾಡುತ್ತಾರೆ ಎಂದು ಸ್ಥಳೀಯರಾದ ಶ್ರೀನಿವಾಸ ಇಂಚೂರು ತಿಳಿಸಿದ್ದಾರೆ.

ಇದನ್ನೂ ಓದಿ:

ಕೊರೊನಾ ಮಧ್ಯೆಯೇ ಗದಗದಲ್ಲಿ ಸೈಟ್‌ ಹರಾಜು, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ದೇಹ ಸೇರುತ್ತಿದೆ ವಿಷ; ಬಾಗಲಕೋಟೆಯಲ್ಲಿ ಚರಂಡಿ ನೀರಲ್ಲಿ ತರಕಾರಿ ಬೆಳೆಯುತ್ತಿರುವ ಬೆಳೆಗಾರರ ವಿರುದ್ಧ ಸ್ಥಳೀಯರ ಆಕ್ರೋಶ

(Dharwad bus bridge construction not completed and people angry on officers)

ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ