AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

77ರ ಇಳಿವಯಸ್ಸಿನಲ್ಲಿಯೂ ಜಿಗಿ ಜಿಗಿಯುತ್ತಾ ಓಡುವ ಕೆಎಸ್ಸಾರ್ಟಿಸಿ ನಿವೃತ್ತ ಅಧಿಕಾರಿ ಇಂದಿನ ಯುವಕರಿಗೆ ನೀಡುವ ಸಂದೇಶ ಏನು ಗೊತ್ತಾ!?

ಇಳಿವಯಸ್ಸಲ್ಲೂ ಯುವಕರಂತೆ ಜಿಗಿಯೋ ಇವರ ಹೆಸರು ಶಿವಪ್ಪ ಸಲಕಿ. ಧಾರವಾಡ ಮರೇವಾಡ ಗ್ರಾಮದವರು. ಕೆಎಸ್ಸಾರ್ಟಿಸಿ ನಿವೃತ್ತ ಅಧಿಕಾರಿ. ಮುಂಚೆಯಿಂದಲೂ ಕ್ರೀಡೆ ಬಗ್ಗೆ ಒಲವು ಹೊಂದಿರೋ ಶಿವಪ್ಪ ಅನೇಕ ಸಾಧನೆ ಮೆರೆದಿದ್ದಾರೆ. ಇಂಥ ಶಿವಪ್ಪ ಯುವಕರ ಬಗ್ಗೆ ಅತೀವ ಕಾಳಜಿ ಹೊಂದಿದ್ದು, ನಿತ್ಯವೂ ಆರೋಗ್ಯದ ಬಗ್ಗೆ ತಿಳಿ ಹೇಳುತ್ತಾರೆ.

77ರ ಇಳಿವಯಸ್ಸಿನಲ್ಲಿಯೂ ಜಿಗಿ ಜಿಗಿಯುತ್ತಾ ಓಡುವ ಕೆಎಸ್ಸಾರ್ಟಿಸಿ ನಿವೃತ್ತ ಅಧಿಕಾರಿ ಇಂದಿನ ಯುವಕರಿಗೆ ನೀಡುವ ಸಂದೇಶ ಏನು ಗೊತ್ತಾ!?
77ರ ಇಳಿವಯಸ್ಸಿನಲ್ಲಿಯೂ ಜಿಗಿಯುತ್ತಾ ಓಡುವ ಕೆಎಸ್ಸಾರ್ಟಿಸಿ ನಿವೃತ್ತ ಅಧಿಕಾರಿ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Aug 10, 2023 | 1:30 PM

Share

ಅನೇಕರು ಸರಕಾರಿ ನೌಕರಿಯಿಂದ ನಿವೃತ್ತರಾದ ಬಳಿಕ ತಮ್ಮ ಜೀವನ ಶೈಲಿಯನ್ನೇ ಬದಲಿಸಿಕೊಂಡು ಬಿಡುತ್ತಾರೆ. ತಾವು ವೃದ್ಧರಾಗಿಬಿಟ್ಟಿದ್ದೇವೆ ಅನ್ನೋ ಮನಸ್ಥಿತಿ ರೂಢಿಸಿಕೊಂಡು ಮನೆಯಿಂದ ಹೊರಗೆ ಬರಲು ಕೂಡ ಹಿಂದೆ ಮುಂದೆ ನೋಡುತ್ತಾರೆ. ಆದರೆ ಧಾರವಾಡದಲ್ಲಿ (Dharwad) ಓರ್ವ ವೃದ್ಧರಿದ್ದಾರೆ. ಅವರ ಶಕ್ತಿಯನ್ನು ನೋಡಿದರೆ ಎಂಥವರೂ ಬೆಚ್ಚಿಬೀಳುತ್ತಾರೆ. ಆ ವ್ಯಕ್ತಿ ಇದೀಗ ವಿದೇಶದಲ್ಲಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಅಷ್ಟಕ್ಕೂ ಅವರು ಮಾಡಿರೋ ಸಾಧನೆಯಾದರೂ ಏನು? ಬನ್ನಿ ನೋಡೋಣ… ಈ ಇಳಿವಯಸ್ಸಿನಲ್ಲಿಯೂ (Octogenarian) ಹೀಗೆ ಯುವಕರಂತೆ ಜಿಗಿಯೋ ಈ ವ್ಯಕ್ತಿಯ ಹೆಸರು ಶಿವಪ್ಪ ಸಲಕಿ. ಧಾರವಾಡ ತಾಲೂಕಿನ ಮರೇವಾಡ ಗ್ರಾಮದ ಇವರ ವಯಸ್ಸು 77 ವರ್ಷ. ಕೆಎಸ್ಸಾರ್ಟಿಸಿ ನಿವೃತ್ತ ಅಧಿಕಾರಿಯಾಗಿರೋ ( KSRTC Retirement) ಇವರು ಇದೀಗ ಎಲ್ಲರೂ ಹುಬ್ಬೇರಿಸುವಂಥ ಹಾಗೂ ಹೆಮ್ಮೆ ಪಡುವಂಥ ಸಾಧನೆ ಮಾಡಿದ್ದಾರೆ.

ಪ್ರತಿವರ್ಷ ಮಧ್ಯಪ್ರದೇಶದ ಸಂಯುಕ್ತ ಭಾರತೀಯ ಖೇಲ್ ಫೌಂಡೇಶನ್ ಆಯೋಜಿಸೋ ಕ್ರೀಡಾಕೂಟದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ. ಈ ಫೌಂಡೇಶನ್ ಇತ್ತಿಚಿಗೆ ದುಬೈನಲ್ಲಿ ಕ್ರೀಡಾಕೂಟವನ್ನು ಆಯೋಜಿಸಿತ್ತು. ಈ ಕ್ರೀಡಾಕೂಟದಲ್ಲಿ ರಾಜ್ಯದಿಂದ 7 ಜನರು ಭಾಗವಹಿಸಿದ್ದರೆ, ವಿದೇಶಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಸ್ಪರ್ಧಾಳುಗಳು ಭಾಗವಹಿಸಿದ್ದರು. ಜುಲೈ 30 ರಿಂದ ಆಗಸ್ಟ್ 6 ರವರೆಗೆ ಆಯೋಜಿಸಲಾಗಿದ್ದ ಕ್ರಿಡಾಕೂಟದಲ್ಲಿ ಎಲ್ಲ ಮಧ್ಯೆ ಈ ಅಜ್ಜ ಮಿಂಚಿ, ಅಚ್ಚರಿ ಮೂಡಿಸಿದ್ದಾರೆ. 75 ರಿಂದ 80 ವರ್ಷದ ವಿಭಾಗದಲ್ಲಿ ಮೂರು ಸ್ಪರ್ಧೆಗಳಲ್ಲಿ ಶಿವಪ್ಪ ಚಿನ್ನದ ಪದಕ ಬಾಚಿದ್ದಾರೆ. ಚಿನ್ನ ಗೆದ್ದು ಮರಳಿ ಬಂದ ಶಿವಪ್ಪನಿಗೆ ಗ್ರಾಮಸ್ಥರು ಹೆಗಲ ಮೇಲೆ ಕೂಡಿಸಿಕೊಂಡು ಮೆರವಣಿಗೆ ಮಾಡಿ ಸ್ವಾಗತ ನೀಡಿದ್ದಾರೆ.

ಈ ವಯಸ್ಸಿನಲ್ಲಿಯೂ ಶಿವಪ್ಪ ನಿತ್ಯವೂ ಒಂದು ಗಂಟೆ ಯೋಗ ಮಾಡುತ್ತಾರೆ. ಬಳಿಕ ಒಂದು ಗಂಟೆ ರನ್ನಿಂಗ್ ಮಾಡುತ್ತಾರೆ. ಇದರೊಂದಿಗೆ ಕೊಂಚ ವೇಳೆ ವ್ಯಾಯಾಮ ಮಾಡುವ ರೂಢಿಯನ್ನು ಕೂಡ ಬೆಳೆಸಿಕೊಂಡಿದ್ದಾರೆ. ಇಂಥ ಶಿವಪ್ಪ ಸಲಕಿ ಈ ಕ್ರೀಡಾಕೂಟದಲ್ಲಿ 400 ಮೀಟರ್, 800 ಮೀಟರ್ ಮತ್ತು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಈ ಕ್ರೀಡಾಕೂಟದಲ್ಲಿ ವಿವಿಧ ಹತ್ತಾರು ದೇಶಗಳಿಂದಲೂ ಸ್ಪರ್ಧಾಳುಗಳು ಭಾಗವಹಿಸಿದ್ದರು.

ಸಾಮಾನ್ಯವಾಗಿ ವಿದೇಶಗಳಲ್ಲಿನ ಜನರು ಸದೃಢರಾಗಿರುತ್ತಾರೆ ಎನ್ನಲಾಗುತ್ತೆ. ಆದರೆ ಭಾರತೀಯರು ಕೂಡ ಉಳಿದವರಿಗಿಂತ ಸದೃಢರೂ ಮತ್ತು ಗಟ್ಟಿಗರು ಅನ್ನೋದನ್ನು ಈ ಶಿವಪ್ಪ ತೋರಿಸಿಕೊಟ್ಟಿದ್ದಾರೆ. ಶಿವಪ್ಪ ಗ್ರಾಮಕ್ಕೆ ಮರಳುತ್ತಿದ್ದಂತೆಯೇ ಅದ್ಧೂರಿಯಾಗಿ ಅವರನ್ನು ಸ್ವಾಗತಿಸಲಾಯಿತು. ಶಿವಪ್ಪ ಕೇವಲ ಗ್ರಾಮಕ್ಕಷ್ಟೇ ಅಲ್ಲ, ಜಿಲ್ಲೆ, ರಾಜ್ಯ ಹಾಗೂ ದೇಶಕ್ಕೆ ಕೀರ್ತಿಯನ್ನು ತಂದಿದ್ದಾರೆ ಅನ್ನುತ್ತಾರೆ ಸ್ಥಳೀಯರು.

ಮುಂಚೆಯಿಂದಲೂ ಕ್ರೀಡೆ ಬಗ್ಗೆ ಒಲವು ಹೊಂದಿರೋ ಶಿವಪ್ಪ ಅನೇಕ ಸ್ಪರ್ಧೆಗಳಲ್ಲಿ ಸಾಧನೆ ಮೆರೆದಿದ್ದಾರೆ. ಇಂಥ ಶಿವಪ್ಪ ಯುವಕರ ಬಗ್ಗೆ ಅತೀವ ಕಾಳಜಿ ಹೊಂದಿದ್ದು, ಅವರಿಗೆಲ್ಲ ನಿತ್ಯವೂ ಆರೋಗ್ಯದ ಬಗ್ಗೆ ತಿಳಿ ಹೇಳುತ್ತಾರೆ. ದುಶ್ಚಟಗಳಿಂದ ದೂರವಿರುವಂತೆ ಪದೇ ಪದೇ ಹೇಳುವ ಅವರು, ಎಲ್ಲರೂ ನಿತ್ಯವೂ ಕೊಂಚ ಹೊತ್ತಾದರೂ ಯೋಗ, ವ್ಯಾಯಾಮಕ್ಕೆ ವೇಳೆ ಕೊಡಬೇಕು ಅನ್ನೋ ಕಿವಿಮಾತು ಹೇಳುತ್ತಾರೆ. ಒಟ್ಟಿನಲ್ಲಿ ವಿದೇಶಿ ನೆಲದಲ್ಲಿ ಚಿನ್ನದ ಬೇಟೆಯಾಡಿರೋ ಶಿವಪ್ಪ ಯುವಕರಿಗೆ ಮಾದರಿಯಾಗಿದ್ದಾರೆ.

ಧಾರವಾಡ ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು