AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್​ ಗೌಡ ಕೊಲೆ ಕೇಸ್​: ನಾಳೆ ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ

ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ ಅವಕಾಶ ಇಲ್ಲ. ಮತದಾನಕ್ಕೆ ಅವಕಾಶಕ್ಕೆ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಯೋಗೀಶ್​ ಗೌಡ ಕೊಲೆ ಕೇಸ್​: ನಾಳೆ ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ
ಯೋಗೀಶ್​ ಗೌಡ ಕೊಲೆ ಕೇಸ್​: ನಾಳೆ ಮತದಾನದಲ್ಲಿ ಭಾಗವಹಿಸಲು ವಿನಯ್ ಕುಲಕರ್ಣಿಗಿಲ್ಲ ಅವಕಾಶ
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on:May 06, 2024 | 8:45 PM

Share

ಧಾರವಾಡ, ಮೇ 06: ಧಾರವಾಡ ಬಿಜೆಪಿ ಮುಖಂಡ ಯೋಗೀಶ್​ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮತದಾನದಲ್ಲಿ ಭಾಗವಹಿಸಲು ಶಾಸಕ ವಿನಯ್ ಕುಲಕರ್ಣಿಗೆ (Vinay Kulkarni) ಅವಕಾಶ ಇಲ್ಲ. ಮತದಾನಕ್ಕೆ ಅವಕಾಶ ಕೋರಿದ್ದ ವಿನಯ್ ಕುಲಕರ್ಣಿ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ. ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು.

ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ ಕುಲಕರ್ಣಿಗೆ ರಿಲೀಫ್ ಸಿಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ಆ ಪ್ರಕರಣದಿಂದ ಹೊರಗೆ ಬರಲು ವಿನಯ ಎಷ್ಟೇ ಪ್ರಯತ್ನ ನಡೆಸಿದರೂ ಅದು ಸಾಧ್ಯವಾಗುತ್ತಲೆ ಇಲ್ಲ.

ಇದನ್ನೂ ಓದಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

2016 ರ ಜೂನ್ 15 ರಂದು ಧಾರವಾಡದ ಸಪ್ತಾಪುರ ಬಡಾವಣೆಯಲ್ಲಿನ ಜಿಮ್​ನಲ್ಲಿ ನಡೆದಿದ್ದ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ನಿಗದಿಪಡಿಸಿರುವ ದೋಷಾರೋಪಣೆಯಲ್ಲಿ ಸಾಕಷ್ಟು ದೋಷಗಳಿವೆ ಎಂದು ಆಕ್ಷೇಪಿಸಿ ಪ್ರಕರಣದ ಆರೋಪಿಯೂ ಆದ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಬಗ್ಗೆ ವಾದ-ಪ್ರತಿವಾದ ನಡೆದು ಬೆಂಗಳೂರು ಹೈಕೋರ್ಟ್​ನ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪ್ರಕರಣ; ಸಂತ್ರಸ್ತೆಯರ ಬಗ್ಗೆ ಯಾರೂ ಮಾತಾಡುತ್ತಿಲ್ಲ, ಅವರ ಭವಿಷ್ಯವೇನು? ವಿನಯ್ ಕುಲಕರ್ಣಿ

ಅದರ ತೀರ್ಪನ್ನು ಸೋಮವಾರ ಪ್ರಕಟಿಸಲಾಗಿತ್ತು. ಅದರಲ್ಲಿ ವಿನಯ ಕುಲಕರ್ಣಿ ಅರ್ಜಿಯನ್ನು ವಜಾಗೊಳಿಸಿದ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯ ಮೂರು ತಿಂಗಳಲ್ಲಿ ವಿಚಾರಣೆ ಮುಕ್ತಾಯಗೊಳಿಸಬೇಕು ಎಂದು ಆದೇಶಿಸಿತ್ತು. ಇದರಿಂದಾಗಿ ವಿನಯ ಕುಲಕರ್ಣಿಗೆ ದೊಡ್ಡ ಶಾಕ್ ಎದುರಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:36 pm, Mon, 6 May 24

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು