AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದ ಲಾಕ್​ಡೌನ್ ಸಡಿಲಿಕೆ ವಿರುದ್ಧ ಜನರ ಅಸಮಾಧಾನ; ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ

ಧಾರವಾಡ ಜಿಲ್ಲೆಯಲ್ಲಿ ಲಾಕ್​ಡೌನ್ ಅನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗಿತ್ತು. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂದುಕೊಂಡಷ್ಟು ಪ್ರಮಾಣದಲ್ಲಿ ಸಂಖ್ಯೆ ಕಡಿಮೆಯಾಗಲೇ ಇಲ್ಲ. ಇದರಿಂದಾಗಿ ಲಾಕ್​ಡೌನ್ ಮತ್ತಷ್ಟು ಕಠಿಣಗೊಳಿಸಿ ಆದೇಶ ಮಾಡಲಾಯಿತು. ಆದರೆ ಈ ಮೂರು ದಿನಗಳ ಅವಧಿಯಲ್ಲಿ ದಿನಕ್ಕೆ ಆರು ಗಂಟೆಗಳ ಅವಕಾಶ ನೀಡಿದ್ದರಿಂದ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ ಎನ್ನುವ ಆತಂಕ ಶುರುವಾಗಿದೆ.

ಧಾರವಾಡದ ಲಾಕ್​ಡೌನ್ ಸಡಿಲಿಕೆ ವಿರುದ್ಧ ಜನರ ಅಸಮಾಧಾನ; ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ
ಧಾರವಾಡದ ಲಾಕ್​ಡೌನ್ ಸಡಿಲಿಕೆ ವಿರುದ್ಧ ಜನರ ಅಸಮಾಧಾನ
preethi shettigar
|

Updated on: May 30, 2021 | 3:07 PM

Share

ಧಾರವಾಡ: ಕೊರೊನಾ ಎರಡನೇ ಅಲೆ ತೀವ್ರವಾಗಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ಸರ್ಕಾರ ಲಾಕ್​ಡೌನ್ ಘೋಷಣೆ ಮಾಡಿದೆ. ಕೊವಿಡ್ ಸೋಂಕಿನ ಪರಿಣಾಮ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಿರುವ ಲಾಕ್​ಡೌನ್ ಮತ್ತೆ ಮುಂದುವರೆಯುತ್ತಾ? ಅಥವಾ ಜೂನ್ 7 ಕ್ಕೆ ಕೊನೆಗೊಳ್ಳುತ್ತಾ ಎನ್ನುವ ಗೊಂದಲ ಶುರುವಾಗಿದೆ. ಈ ಮಧ್ಯೆ ಧಾರವಾಡದಲ್ಲಿ ಜಿಲ್ಲಾಡಳಿತ ಒಂದು ಹೆಜ್ಜೆ ಮುಂದಕ್ಕೆ ಹೋಗಿ ಲಾಕ್​ಡೌನ್ ಅನ್ನು ಮತ್ತಷ್ಟು ಬಿಗಿಗೊಳಿಸಿತು. ಆದರೆ ಇದೀಗ ಮೂರು ದಿನಗಳ ಕಾಲ ಲಾಕ್​ಡೌನ್ ಸಡಿಲಿಕೆ ಮಾಡಿದೆ. ಹೀಗಾಗಿ ಜಿಲ್ಲಾಡಳಿತದ ಈ ನಿರ್ಧಾರಕ್ಕೆ ಜನರಿಂದ ಅಸಮಾಧನದ ಕೂಗು ಕೇಳಿ ಬಂದಿದೆ. ಮುಂದಿನ ದಿನಗಳಲ್ಲಿ ಇದೇ ನಿರ್ಧಾರ ಕೊರೊನಾ ಸಂಖ್ಯೆಯಲ್ಲಿ ಹೆಚ್ಚಳ ಆಗುವುದಕ್ಕೆ ಕಾರಣವಾಗುತ್ತದೆ ಎನ್ನುವ ಆತಂಕ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಇದೀಗ ಲಾಕ್​ಡೌನ್ ಜಾರಿಯಲ್ಲಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ತರಕಾರಿ, ಹಾಲು, ಹಣ್ಣು, ದಿನಸಿ ಅಂಗಡಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ಇನ್ನು ಕೊರೊನಾ ಸಂಬಂಧಿಸಿದ ಲಾಕ್​ಡೌನ್ ಬಗ್ಗೆ ಹೆಚ್ಚಿನ ನಿರ್ಧಾರ ತೆಗೆದುಕೊಳ್ಳಲು ರಾಜ್ಯ ಸರಕಾರ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ ಪಾಟೀಲ್, ಜಿಲ್ಲೆಯಲ್ಲಿ ಮೊದಲಿಗೆ ವೀಕೆಂಡ್ ಲಾಕ್​ಡೌನ್ ಘೋಷಿಸಿದರು. ಬೆಳಿಗ್ಗೆ 6 ರಿಂದ 8 ರವರೆಗೆ ಹಾಲು, ತರಕಾರಿ ಖರೀದಿಗಷ್ಟೇ ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಇದನ್ನೇ ಮುಂದುವರೆಸಿಕೊಂಡು ಹೋಗಲಾಯಿತು.

ಜಿಲ್ಲಾಡಳಿತದ ಈ ನಿರ್ಧಾರದಿಂದ ಒಂದು ವರ್ಗದ ಜನರಿಗೆ ಅಸಮಾಧಾನವುಂಟಾದರೂ ಜಿಲ್ಲೆಯಲ್ಲಿ ನಿತ್ಯವೂ ಬರುತ್ತಿದ್ದ ಕೊರೊನಾ ಸೋಂಕಿತ ಪ್ರಕರಣಗಳನ್ನು ನೋಡಿದರೆ, ಈ ನಿರ್ಧಾರ ಅನಿವಾರ್ಯವಿತ್ತು ಎಂದೆನಿಸಿತ್ತು. ಆದರೆ ಧಾರವಾಡದಲ್ಲಿ ಮೇ 27, 28 ಮತ್ತು 29 ರಂದು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆಯಲ್ಲಿ ಹಾಲು, ತರಕಾರಿ, ಮಾಂಸ, ದಿನಸಿ ಖರೀದಿಗೆ ಜನರು ಮಾರುಕಟ್ಟೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸೇರುತ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಶುರುವಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಲಾಕ್​ಡೌನ್ ಅನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಗಿತ್ತು. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅಂದುಕೊಂಡಷ್ಟು ಪ್ರಮಾಣದಲ್ಲಿ ಸಂಖ್ಯೆ ಕಡಿಮೆಯಾಗಲೇ ಇಲ್ಲ. ಇದರಿಂದಾಗಿ ಲಾಕ್​ಡೌನ್ ಮತ್ತಷ್ಟು ಕಠಿಣಗೊಳಿಸಿ ಆದೇಶ ಮಾಡಲಾಯಿತು. ಆದರೆ ಈ ಮೂರು ದಿನಗಳ ಅವಧಿಯಲ್ಲಿ ದಿನಕ್ಕೆ ಆರು ಗಂಟೆಗಳ ಅವಕಾಶ ನೀಡಿದ್ದರಿಂದ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ ಎನ್ನುವ ಆತಂಕ ಶುರುವಾಗಿದೆ. ಇನ್ನು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಕೇಳಿದರೆ, ಕೆಲವು ವೇಳೆ ಜನರಿಗೆ ಅಗತ್ಯ ವಸ್ತುಗಳನ್ನು ಖರೀದಿಸುವುದು ಅನಿವಾರ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಇಂಥ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ನಿತ್ಯವೂ ಜಿಲ್ಲೆಯಲ್ಲಿ 700 ರಿಂದ 1000 ವರೆಗೆ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಪ್ರತಿ ದಿನ ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಠಿಣ ನಿರ್ಧಾರ ತೆಗೆದುಕೊಳ್ಳದಿದ್ದರೆ, ಮತ್ತಷ್ಟು ಸಮಸ್ಯೆಯಾಗುವುದು ಮಾತ್ರ ಸತ್ಯ ಎನ್ನುವುದು ಇಲ್ಲಿನ ಸ್ಥಳೀಯರ ಮಾತಾಗಿದೆ.

ಇದನ್ನೂ ಓದಿ:

ಕೊರೊನಾ ಲಾಕ್​ಡೌನ್ ವೇಳೆ ಓಡಾಡುವವರು ಆಧಾರ್​ ತೋರಿಸಬೇಕು, ಮಾಸ್ಕ್​ ಧರಿಸದವರು ಸೂಪರ್​ ಸ್ಪ್ರೆಡರ್ಸ್​: ಬಾಂಬೆ ಹೈಕೋರ್ಟ್​

ಕಲಬುರಗಿಯಲ್ಲೂ ಮೌಢ್ಯಾಚರಣೆ; ಕೊರೊನಾವನ್ನು ದೂರ ಮಾಡು ಎಂದು ದೇವರ ಮೊರೆ ಹೋದ ಗ್ರಾಮಸ್ಥರು

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​