AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡದಲ್ಲಿ ನಡೆದ ಸ್ವಚ್ಛತಾ ಸ್ಪರ್ಧೆ; ವಿಭಿನ್ನ ಸವಾಲಿಗೆ ಸಾಕ್ಷಿಯಾದ ಸಾರ್ವಜನಿಕರು

ಸ್ವಚ್ಛತೆಯನ್ನು ಸವಾಲಾಗಿ ಸ್ವೀಕರಿಸುವ ಜನರು ಏನು ಮಾಡಬಹುದು ಎನ್ನುವುದಕ್ಕೆ ಧಾರವಾಡದಲ್ಲಿ ನಡೆದ ಈ ಸ್ಪರ್ಧೆ ಸಾಕ್ಷಿಯಾಗಿದೆ. ಸಾಮಾನ್ಯವಾಗಿ ಯುಗಾದಿ ಇರುವ ಹಿನ್ನಲೆಯಲ್ಲಿ ಈ ರೀತಿಯಲ್ಲಿ ಸ್ವಚ್ಛತೆ ನಡೆಯುತ್ತಿದೆ ಎಂದು ಹಲವು ಭಾವಿಸಿದ್ದರು. ಆದರೆ, ಇಲ್ಲಿನ ಬಡಾವಣೆಯ ಜನರಿಗೆ ಸ್ವಚ್ಛ ಮಾಡುವ ಸ್ಪರ್ದೆ ಏರ್ಪಡಿಸಲಾಗಿತ್ತು.

ಧಾರವಾಡದಲ್ಲಿ ನಡೆದ ಸ್ವಚ್ಛತಾ ಸ್ಪರ್ಧೆ; ವಿಭಿನ್ನ ಸವಾಲಿಗೆ ಸಾಕ್ಷಿಯಾದ ಸಾರ್ವಜನಿಕರು
ಸ್ವಚ್ಛತಾ ಸ್ಪರ್ಧೆ
preethi shettigar
| Edited By: |

Updated on: Apr 14, 2021 | 10:24 PM

Share

ಧಾರವಾಡ: ಸಾಮಾನ್ಯವಾಗಿ ಜನರಿಗೆ ತಮ್ಮ ಮನೆಯ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛ ಮಾಡಲು ಯಾರೂ ಹೇಳುವುದಿಲ್ಲ. ಕೆಲವರು ತಾವಾಗಿಯೇ ಸ್ವಚ್ಛತೆಯ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು ಹಲವರು ಸುತ್ತಲ ಪರಿಸರವನ್ನು ಸ್ವಚ್ಛವಾಗಿಡುವ ಬದಲು ಹಾಳು ಮಾಡಲು ಮುಂದಾಗುತ್ತಾರೆ. ಆದರೆ ಧಾರವಾಡದ ಮಹಾಂತ ನಗರ ಬಡಾವಣೆಯಲ್ಲಿ ಸ್ವಚ್ಛ ಮಾಡುವುದಕ್ಕೆ ಒಂದು ಸ್ಪರ್ಧೆ ಮಾಡಿದ್ದಾರೆ.

ಸ್ವಚ್ಛತೆಯನ್ನು ಸವಾಲಾಗಿ ಸ್ವೀಕರಿಸುವ ಜನರು ಏನು ಮಾಡಬಹುದು ಎನ್ನುವುದಕ್ಕೆ ಧಾರವಾಡದಲ್ಲಿ ನಡೆದ ಈ ಸ್ಪರ್ಧೆ ಸಾಕ್ಷಿಯಾಗಿದೆ. ಸಾಮಾನ್ಯವಾಗಿ ಯುಗಾದಿ ಇರುವ ಹಿನ್ನಲೆಯಲ್ಲಿ ಈ ರೀತಿಯಲ್ಲಿ ಸ್ವಚ್ಛತೆ ನಡೆಯುತ್ತಿದೆ ಎಂದು ಹಲವು ಭಾವಿಸಿದ್ದರು. ಆದರೆ, ಇಲ್ಲಿನ ಬಡಾವಣೆಯ ಜನರಿಗೆ ಸ್ವಚ್ಛ ಮಾಡುವ ಸ್ಪರ್ದೆ ಏರ್ಪಡಿಸಲಾಗಿತ್ತು. ಈ ನಿಟ್ಟಿನಲ್ಲಿ ಮನೆ ಮುಂದೆ ಸ್ವಚ್ಛ ಮಾಡಿ, ರಂಗೋಲಿ ಹಾಕಿ, ಸ್ವಚ್ಛ ಭಾರತ ಅಭಿಯಾನದ ಘೋಷ ವಾಕ್ಯವನ್ನು ಆಚರಣೆಗೆ ತರಲಾಯಿತು.

ಇದರ ಹಿಂದೆ ಒಂದು ವಿಭಿನ್ನ ಬಗೆಯ ಸ್ಪರ್ಧೆ ಹಾಗೂ ಸ್ವಚ್ಛ ಭಾರತದ ಪರಿಕಲ್ಪನೆ ಇದೆ. ಈ ಬಡಾವಣೆಯ ನಿವಾಸಿಗಳ ಸಂಘದಿಂದ ಪ್ರತಿ ವರ್ಷ ಯುಗಾದಿ ಸಂದರ್ಭದಲ್ಲಿ ಸಭಾಭವನದಲ್ಲಿ ರಂಗೋಲಿ ಸ್ಪರ್ಧೆ ಆಯೋಜಿಸಿಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಪರ್ಧೆ ಆಯೋಜಿಸಲು ಅವಕಾಶ ಇಲ್ಲದ್ದರಿಂದ ಮನೆಯ ಮುಂದೆಯೇ ರಂಗೋಲಿ ಹಾಕುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು ಎಂದು ಸ್ಥಳೀಯರಾದ ಪ್ರಜ್ಞಾ ನಡಕಟ್ಟಿ ಹೇಳಿದ್ದಾರೆ.

ಸಾಮಾನ್ಯವಾಗಿ ಎಲ್ಲ ಕಡೆ ನಡೆಯುವಂತೆ ಇಲ್ಲಿಯೂ ರಂಗೋಲಿ ಸ್ಪರ್ಧೆ ನಡೆದಿತ್ತು. ಆದರೆ ಇದು ವಿಶೇಷ ಏಕೆಂದರೆ ತಮ್ಮ ಮನೆಯ ಅಂಗಳವಷ್ಟೇ ಅಲ್ಲದೇ ಸುತ್ತಮುತ್ತಲಿನ ಭಾಗವನ್ನು ಕೂಡ ಸ್ವಚ್ಛಗೊಳಿಸಬೇಕು ಎಂಬ ಷರತ್ತು ಹಾಕಲಾಗಿತ್ತು. ಹೀಗಾಗಿ ಎಲ್ಲರೂ ಕೂಡ ಸ್ವಚ್ಛತೆಯನ್ನು ಸ್ಪರ್ಧೆಯ ಒಂದು ಭಾಗವಾಗಿ ಪರಿಗಣಿಸಿ, ಮೊದಲು ತಮಗೆ ಸಂಬಂಧಿಸಿದ ಪ್ರದೇಶವನ್ನು ಸ್ಚಚ್ಛ ಮಾಡಿ ರಂಗೋಲಿಯನ್ನು ಹಾಕಿದರು. ಒಂದು ಕಡೆ ಯುಗಾದಿ ಸಂಭ್ರಮ. ಇನ್ನೊಂದು ಕಡೆ ರಂಗೋಲಿ ಅಂದ. ಮತ್ತೊಂದು ಕಡೆ ಸ್ವಚ್ಛತಾ ಅಭಿಯಾನದ ಸಾಕಾರತೆ. ಹೀಗಾಗಿ ಈ ಸ್ಪರ್ಧೆಯಲ್ಲಿ ವಯಸ್ಸಿನ ಭೇದ ಭಾವ ಇಲ್ಲದೇ ಎಲ್ಲರೂ ಭಾಗವಹಿಸಿದರು.

different competition

ಸ್ವಚ್ಛ ಮಾಡಿ ರಂಗೋಲಿ ಹಾಕುತ್ತಿರುವ ದೃಶ್ಯ

ಒಂದು ಬಡಾವಣೆಯ ಜನರು ಸೇರಿ ಕೊರೊನಾ ಮಧ್ಯೆಯೂ ವಿಭಿನ್ನವಾಗಿ ಯುಗಾದಿಯನ್ನು ಆಚರಿಸಬಹುದು ಎನ್ನುವುದಕ್ಕೆ ಧಾರವಾಡದ ಈ ಬಡಾವಣೆಯ ಜನರೇ ಸಾಕ್ಷಿ.

ಇದನ್ನೂ ಓದಿ:

ವಿಭಿನ್ನವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಾಗರದ ಯುವಕ; ಜನುಮದಿನಕ್ಕೂ ಮೊದಲು ಸ್ವಚ್ಛತಾ ಕಾರ್ಯ

ಸ್ವಚ್ಛ ಕಿರೀಟ ಪಟ್ಟವನ್ನು ಮುಡಿಗೇರಿಸಿಕೊಳ್ಳಲು ಮೈಸೂರು ಕಸರತ್ತು: ಮುಂಜಾಗೃತಾ ಕ್ರಮಕ್ಕೆ ಮುಂದಾದ ಮಹಾನಗರ ಪಾಲಿಕೆ

( Dharwad people performed cleaning competition in a unique way to maintain hygiene )

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು