AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ

ಅತಿವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ ಮಾಡಲು ಸರ್ಕಾರ ಮುಂದಾಗಿದ್ದು, ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ಆಕ್ರೋಶ ಹೊರಹಾಕಿದರು.

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಶಿವಕುಮಾರ್ ಪತ್ತಾರ್
| Edited By: |

Updated on:Sep 03, 2024 | 7:23 PM

Share

ಹುಬ್ಬಳ್ಳಿ, ಸೆ.03: ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನಲೆ ಸಿದ್ದರಾಮಯ್ಯ (Siddaramaiah) ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ(Pralhad Joshi) ವಾಗ್ದಾಳಿ ನಡೆಸಿದ್ದಾರೆ. ‘ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಶ್ರಮಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡುವ ಹಾಲಿನ ದರ ಕಡಿತ ಮಾಡಿದೆ. ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಆಕ್ರೋಶ ಹೊರಹಾಕಿದರು.

ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ಹಾಲಿನ ದರ ಕಡಿತದಿಂದ ಸರ್ಕಾರ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಇತ್ತ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರ ಅನ್ನದಾತನ ಶ್ರಮಕ್ಕೆ ತಣ್ಣೀರು ಎರಚುತ್ತಿದ್ದು, ಈ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಮನೆಗೆ ಹೋಗಲೆಂದು ಕಾಂಗ್ರೆಸ್​ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಇನ್ನು ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್​ಗೆ 28 ರಿಂದ 29 ರೂ.ನೀಡುತ್ತಿವೆ. ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದ್ದು, ಒಂದೆಡೆ, ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ, ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Tue, 3 September 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ