AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ

ಅತಿವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ ಮಾಡಲು ಸರ್ಕಾರ ಮುಂದಾಗಿದ್ದು, ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ಆಕ್ರೋಶ ಹೊರಹಾಕಿದರು.

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 03, 2024 | 7:23 PM

Share

ಹುಬ್ಬಳ್ಳಿ, ಸೆ.03: ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನಲೆ ಸಿದ್ದರಾಮಯ್ಯ (Siddaramaiah) ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ(Pralhad Joshi) ವಾಗ್ದಾಳಿ ನಡೆಸಿದ್ದಾರೆ. ‘ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಶ್ರಮಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡುವ ಹಾಲಿನ ದರ ಕಡಿತ ಮಾಡಿದೆ. ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಆಕ್ರೋಶ ಹೊರಹಾಕಿದರು.

ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ಹಾಲಿನ ದರ ಕಡಿತದಿಂದ ಸರ್ಕಾರ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಇತ್ತ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರ ಅನ್ನದಾತನ ಶ್ರಮಕ್ಕೆ ತಣ್ಣೀರು ಎರಚುತ್ತಿದ್ದು, ಈ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಮನೆಗೆ ಹೋಗಲೆಂದು ಕಾಂಗ್ರೆಸ್​ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಇನ್ನು ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್​ಗೆ 28 ರಿಂದ 29 ರೂ.ನೀಡುತ್ತಿವೆ. ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದ್ದು, ಒಂದೆಡೆ, ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ, ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Tue, 3 September 24

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್