AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ

ಅತಿವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ ಮಾಡಲು ಸರ್ಕಾರ ಮುಂದಾಗಿದ್ದು, ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ಆಕ್ರೋಶ ಹೊರಹಾಕಿದರು.

ರೈತರಿಗೆ ನೀಡುವ ಹಾಲಿನ ದರದಲ್ಲಿ 1.5ರೂ. ಕಡಿತ; ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಸಿದ್ದರಾಮಯ್ಯ ವಿರುದ್ದ ಪ್ರಹ್ಲಾದ್​ ಜೋಶಿ ವಾಗ್ದಾಳಿ
ಶಿವಕುಮಾರ್ ಪತ್ತಾರ್
| Updated By: ಕಿರಣ್ ಹನುಮಂತ್​ ಮಾದಾರ್|

Updated on:Sep 03, 2024 | 7:23 PM

Share

ಹುಬ್ಬಳ್ಳಿ, ಸೆ.03: ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ 1.5 ರೂ. ಕಡಿತಗೊಳಿಸಿದ ಹಿನ್ನಲೆ ಸಿದ್ದರಾಮಯ್ಯ (Siddaramaiah) ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ(Pralhad Joshi) ವಾಗ್ದಾಳಿ ನಡೆಸಿದ್ದಾರೆ. ‘ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲೆಂದು ಶ್ರಮಿಸುತ್ತಿದೆ. ಸಿದ್ದರಾಮಯ್ಯ ಸರ್ಕಾರ ರೈತರಿಗೆ ನೀಡುವ ಹಾಲಿನ ದರ ಕಡಿತ ಮಾಡಿದೆ. ನಮ್ಮದು ರೈತರ ಸರ್ಕಾರ, ಜನಪರ ಸರ್ಕಾರ ಎಂದು ಹೇಳಿಕೊಳ್ಳುತ್ತಿರುವ ‘ಕೈ’ಸರ್ಕಾರಕ್ಕೆ ನಾಚಿಕೆಯಾಗಬೇಕೆಂದು ಆಕ್ರೋಶ ಹೊರಹಾಕಿದರು.

ಈಗಾಗಲೇ ಅತಿವೃಷ್ಟಿ, ಅನಾವೃಷ್ಟಿಯಿಂದ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇದೀಗ ಹಾಲಿನ ದರ ಕಡಿತದಿಂದ ಸರ್ಕಾರ ರೈತರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಇತ್ತ ಕೇಂದ್ರ ಸರ್ಕಾರ ರೈತರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರ ಅನ್ನದಾತನ ಶ್ರಮಕ್ಕೆ ತಣ್ಣೀರು ಎರಚುತ್ತಿದ್ದು, ಈ ಕೃತ್ಯವನ್ನು ನಾನು ಖಂಡಿಸುತ್ತೇನೆ ಎಂದು ಸಿದ್ದರಾಮಯ್ಯ ವಿರುದ್ಧ ಎಕ್ಸ್​​ ಖಾತೆಯಲ್ಲಿ ಪ್ರಹ್ಲಾದ್​ ಜೋಶಿ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಮನೆಗೆ ಹೋಗಲೆಂದು ಕಾಂಗ್ರೆಸ್​ನಲ್ಲೇ ಕಾಯುತ್ತಿದ್ದಾರೆ: ಪ್ರಲ್ಹಾದ್ ಜೋಶಿ

ಇನ್ನು ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್​ಗೆ 28 ರಿಂದ 29 ರೂ.ನೀಡುತ್ತಿವೆ. ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದ್ದು, ಒಂದೆಡೆ, ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ, ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 pm, Tue, 3 September 24

ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ