AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರೇಮ್ ಕಹಾನಿ

ಹುಬ್ಬಳ್ಳಿಯಲ್ಲೊಂದು ವಿಚಿತ್ರ ಘಟನೆಯೊಂದು ನಡೆದಿದೆ. ಕೆಲವು ದಿನಗಳ ಹಿಂದೆ ಮನೆಯಿಂದ 18 ವರ್ಷದ ಯುವತಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮನೆಬಿಟ್ಟು ಹೋಗಿದ್ದ 18ರ ಯುವತಿ 50 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಈಗಾಗಲೇ ವ್ಯಕ್ತಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಸಹ ಇದೀಗ 18 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದಾನೆ. 18 ವರ್ಷ ಹುಡುಗಿ ಜೊತೆಗೆ 50 ವರ್ಷ ಅಂಕಲ್ ಲವ್ ಸ್ಟೋರಿ? ಇಲ್ಲಿದೆ ನೋಡಿ.

50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರೇಮ್ ಕಹಾನಿ
Hubli Love Story
ಶಿವಕುಮಾರ್ ಪತ್ತಾರ್
| Edited By: |

Updated on: Feb 17, 2025 | 5:54 PM

Share

ಹುಬ್ಬಳ್ಳಿ, (ಫೆಬ್ರವರಿ 17): 18 ವರ್ಷ ಯುವತಿ ಹಾಗೂ 50 ವರ್ಷ ಅಂಕಲ್ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ನಾಪತ್ತೆಯಾಗಿದ್ದ 18 ವರ್ಷದ ಯುವತಿ ಇದೀಗ 50 ವರ್ಷದ ವ್ಯಕ್ತಿ ಜೊತೆಗೆ ಮದುವೆಯಾಗಿದ್ದಾಳೆ. ಹೌದು… ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರೀಷ್ಮಾ ಹಾಗೂ ಪ್ರಕಾಶ್ ಮದುವೆಯಾಗಿದ್ದಾರೆ. ಯುವತಿ ಕರೀಷ್ಮಾಳನ್ನ ಮದುವೆಯಾಗಿರುವ ಪೋಟೋವನ್ನು ಪ್ರಕಾಶ್ ವಾಟ್ಸಪ್ ಸ್ಟೇಟಸ್​ ಹಾಕಿಕೊಂಡಿದ್ದಾರೆ. ಇದರಿಂದ ಶಾಕ್ ಆದ ಪೋಷಕರು ನಮ್ಮ ಮಗಳ ತಲೆಕೆಡಿಸಿ ಮದುವೆಯಾಗಿದ್ದಾನೆಂದು ಆರೋಪಿಸಿದ್ದಾರೆ.

ಅಜ್ಜಿ ಮನೆಗೆ ಹೋಗಿದ್ದ ಕರೀಷ್ಮಾ ದಿಢೀರ್ ನಾಪತ್ತೆ ಆಗಿದ್ದಳು. ನಾಪತ್ತೆಯಾದ ಮಗಳನ್ನು ಹುಡುಕಿಕೊಡುವಂತೆ ಪಾಲಕರು ಕಣ್ಣೀರು ಹಾಕಿದ್ದರು. ಅಲ್ಲದೇ ಮಗಳ ಫೋಟೋ ಹಿಡಿದು ರಸ್ತೆ ರಸ್ತೆಗಳಲ್ಲಿ ಅಲೆದಾಡಿ ಹುಡುಕಿಕೊಡಿ ಎಂದು ಪೊಲೀಸರು, ಮಾಧ್ಯಮಗಳು ಸೇರಿದಂತೆ ಕಂಡ ಕಂಡವರ ಮುಂದೆ ಮನವಿ ಮಾಡುತ್ತಿದ್ದರು. ಆದ್ರೆ, ಇದೀಗ ಕರೀಷ್ಮಾ ಪ್ರಕಾಶನ ಜೊತೆ ಮದುವೆಯಾಗಿರುವುದು ಬೆಳಕಿಗೆ ಬಂದಿದೆ. ಸೆಕ್ಯೂರಿಟಿ ಕೆಲಸ ಮಾಡುತ್ತಿರುವ 50 ವರ್ಷದ ಪ್ರಕಾಶ್​ಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳೂ ಸಹ ಇವೆ. ಇದರ ಬೆನ್ನ್ಲಲೇ ಇದೀಗ 18 ವರ್ಷದ ಕರೀಷ್ಮಾ ಎನ್ನುವ ಯುವತಿಯನ್ನು ಸಹ ಮದುವೆಯಾಗಿದ್ದಾರೆ. ದೇವಸ್ಥಾನದಲ್ಲಿ ಕರೀಷ್ಮಾಳ ಜೊತೆ ಮದುವೆಯಾಗಿರುವ ಫೊಟೋವನ್ನು ಪ್ರಕಾಶ್ ಸ್ಟೇಟಸ್ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: 18 ವರ್ಷದ ಹುಡುಗಿ ಜೊತೆ 50 ರ ವ್ಯಕ್ತಿಯ ಲವ್ವಿ ಡವ್ವಿ, ಅಜ್ಜಿ ಮನೆಯಲ್ಲಿದ್ದ ಹುಡುಗಿ ನಾಪತ್ತೆ

ಇಬ್ಬರ ಪ್ರೇಮ್ ಕಹಾನಿ

ಕರೀಷ್ಮಾ ಹಾಗೂ ಪ್ರಕಾಶ ಈ ಮೊದಲೇ ಪ್ರೀತಿ, ಪ್ರೇಮ ಅಂತ ಇದ್ದರು.  ಮದುವೆಯಾಗಿ ಎರಡು ಮಕ್ಕಳಿರುವ ಆರೋಪಿ ಪ್ರಕಾಶ್, 2 ವರ್ಷದ ಹಿಂದೆಯೇ ಕರೀಷ್ಮಾಳನ್ನಪ್ರೀತಿಸುತ್ತಿದ್ದ. ಆಗ ಕರೀಷ್ಮಾ ಅಪ್ರಾಪ್ತೆಯಾಗಿದ್ದಳು. ಇದಕ್ಕೆ ಹುಡುಗಿಯ ಮನೆಯವರು ಆಕ್ಷೇಪ ವ್ಯಕ್ತಪಡಿಸಿ, ಆಕೆಯ ಮನಃ ಪರಿವರ್ತನೆ ಮಾಡಲು ಮುಂದಾಗಿದ್ದರು. ಅಷ್ಟೇ ಅಲ್ಲದೆ, ಆರೋಪಿಯ ವಿರುದ್ಧ ದೂರು ನೀಡಿದ್ದರು. ಇದರಂತೆ ಪ್ರಕಾಶನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.ಬಳಿಕ ಹುಬ್ಬಳ್ಳಿಯಲ್ಲಿಯೇ ಇದ್ದರೆ ಸಮಸ್ಯೆ ಆಗುತ್ತದೆ ಎಂದು ಹುಡುಗಿಯನ್ನು ಮನೆಯವರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇರುವ ಅಜ್ಜಿ ಮನೆಯಲ್ಲಿ ಬಿಟ್ಟಿದ್ದರು. ಅಂದಿನಿಂದ ಆಕೆ ಅಲ್ಲಿಯೇ ವಾಸವಾಗಿದ್ದಳು. ಆದರೆ ಆಕೆ, ಜನವರಿ 3 ರಂದು ಅಲ್ಲಿಂದ ನಾಪತ್ತೆಯಾಗಿದ್ದಳು. ಆ ಬಳಿಕ ಆಕೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿರಲಿಲ್ಲ. ಆರೋಪಿ ಪ್ರಕಾಶನೇ ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಇದೀಗ ಕರೀಷ್ಮಾಗೆ 18 ವರ್ಷ ತುಂಬಿದ್ದರಿಂದ ಮದುವೆ ಮಾಡಿಕೊಂಡು ಪ್ರಕಾಶನ ಜೊತೆಯಲ್ಲೇ ಇರುವುದು ಗೊತ್ತಾಗಿದೆ. ಇದರಿಂದ ಶಾಕ್ ಆದ ತಂದೆ-ತಾಯಿ ನಮ್ಮ ಮಗಳಿಗೆ ತಲೆ ಕಡೆಸಿದ್ದಾನೆ ಎಂದು ಪ್ರಕಾಶನ ವಿರುದ್ಧ ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್