Sign In

By signing in or creating an account, you agree with Associated Broadcasting Company's Terms & Conditions and Privacy Policy.

50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರೇಮ್ ಕಹಾನಿ

ಹುಬ್ಬಳ್ಳಿಯಲ್ಲೊಂದು ವಿಚಿತ್ರ ಘಟನೆಯೊಂದು ನಡೆದಿದೆ. ಕೆಲವು ದಿನಗಳ ಹಿಂದೆ ಮನೆಯಿಂದ 18 ವರ್ಷದ ಯುವತಿ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಮನೆಬಿಟ್ಟು ಹೋಗಿದ್ದ 18ರ ಯುವತಿ 50 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಈಗಾಗಲೇ ವ್ಯಕ್ತಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದರೂ ಸಹ ಇದೀಗ 18 ವರ್ಷದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದಾನೆ. 18 ವರ್ಷ ಹುಡುಗಿ ಜೊತೆಗೆ 50 ವರ್ಷ ಅಂಕಲ್ ಲವ್ ಸ್ಟೋರಿ? ಇಲ್ಲಿದೆ ನೋಡಿ.

50 ವರ್ಷದ ಅಂಕಲ್​ನ ಮದ್ವೆಯಾದ 18 ವರ್ಷದ ಯುವತಿ: ಹುಬ್ಬಳ್ಳಿಯಲ್ಲೊಂದು ವಿಚಿತ್ರ ಪ್ರೇಮ್ ಕಹಾನಿ
Hubli Love Story
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ರಮೇಶ್ ಬಿ. ಜವಳಗೇರಾ

Updated on: Feb 17, 2025 | 5:54 PM

ಹುಬ್ಬಳ್ಳಿ, (ಫೆಬ್ರವರಿ 17): 18 ವರ್ಷ ಯುವತಿ ಹಾಗೂ 50 ವರ್ಷ ಅಂಕಲ್ ಲವ್ ಸ್ಟೋರಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರದ ಅಜ್ಜಿ ಮನೆಗೆ ಹೋಗುವುದಾಗಿ ನಾಪತ್ತೆಯಾಗಿದ್ದ 18 ವರ್ಷದ ಯುವತಿ ಇದೀಗ 50 ವರ್ಷದ ವ್ಯಕ್ತಿ ಜೊತೆಗೆ ಮದುವೆಯಾಗಿದ್ದಾಳೆ. ಹೌದು… ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರೀಷ್ಮಾ ಹಾಗೂ ಪ್ರಕಾಶ್ ಮದುವೆಯಾಗಿದ್ದಾರೆ. ಯುವತಿ ಕರೀಷ್ಮಾಳನ್ನ ಮದುವೆಯಾಗಿರುವ ಪೋಟೋವನ್ನು ಪ್ರಕಾಶ್ ವಾಟ್ಸಪ್ ಸ್ಟೇಟಸ್​ ಹಾಕಿಕೊಂಡಿದ್ದಾರೆ. ಇದರಿಂದ ಶಾಕ್ ಆದ ಪೋಷಕರು ನಮ್ಮ ಮಗಳ ತಲೆಕೆಡಿಸಿ ಮದುವೆಯಾಗಿದ್ದಾನೆಂದು ಆರೋಪಿಸಿದ್ದಾರೆ.

ಅಜ್ಜಿ ಮನೆಗೆ ಹೋಗಿದ್ದ ಕರೀಷ್ಮಾ ದಿಢೀರ್ ನಾಪತ್ತೆ ಆಗಿದ್ದಳು. ನಾಪತ್ತೆಯಾದ ಮಗಳನ್ನು ಹುಡುಕಿಕೊಡುವಂತೆ ಪಾಲಕರು ಕಣ್ಣೀರು ಹಾಕಿದ್ದರು. ಅಲ್ಲದೇ ಮಗಳ ಫೋಟೋ ಹಿಡಿದು ರಸ್ತೆ ರಸ್ತೆಗಳಲ್ಲಿ ಅಲೆದಾಡಿ ಹುಡುಕಿಕೊಡಿ ಎಂದು ಪೊಲೀಸರು, ಮಾಧ್ಯಮಗಳು ಸೇರಿದಂತೆ ಕಂಡ ಕಂಡವರ ಮುಂದೆ ಮನವಿ ಮಾಡುತ್ತಿದ್ದರು. ಆದ್ರೆ, ಇದೀಗ ಕರೀಷ್ಮಾ ಪ್ರಕಾಶನ ಜೊತೆ ಮದುವೆಯಾಗಿರುವುದು ಬೆಳಕಿಗೆ ಬಂದಿದೆ. ಸೆಕ್ಯೂರಿಟಿ ಕೆಲಸ ಮಾಡುತ್ತಿರುವ 50 ವರ್ಷದ ಪ್ರಕಾಶ್​ಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳೂ ಸಹ ಇವೆ. ಇದರ ಬೆನ್ನ್ಲಲೇ ಇದೀಗ 18 ವರ್ಷದ ಕರೀಷ್ಮಾ ಎನ್ನುವ ಯುವತಿಯನ್ನು ಸಹ ಮದುವೆಯಾಗಿದ್ದಾರೆ. ದೇವಸ್ಥಾನದಲ್ಲಿ ಕರೀಷ್ಮಾಳ ಜೊತೆ ಮದುವೆಯಾಗಿರುವ ಫೊಟೋವನ್ನು ಪ್ರಕಾಶ್ ಸ್ಟೇಟಸ್ ಹಾಕಿಕೊಂಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ: 18 ವರ್ಷದ ಹುಡುಗಿ ಜೊತೆ 50 ರ ವ್ಯಕ್ತಿಯ ಲವ್ವಿ ಡವ್ವಿ, ಅಜ್ಜಿ ಮನೆಯಲ್ಲಿದ್ದ ಹುಡುಗಿ ನಾಪತ್ತೆ

ಇಬ್ಬರ ಪ್ರೇಮ್ ಕಹಾನಿ

ಕರೀಷ್ಮಾ ಹಾಗೂ ಪ್ರಕಾಶ ಈ ಮೊದಲೇ ಪ್ರೀತಿ, ಪ್ರೇಮ ಅಂತ ಇದ್ದರು.  ಮದುವೆಯಾಗಿ ಎರಡು ಮಕ್ಕಳಿರುವ ಆರೋಪಿ ಪ್ರಕಾಶ್, 2 ವರ್ಷದ ಹಿಂದೆಯೇ ಕರೀಷ್ಮಾಳನ್ನಪ್ರೀತಿಸುತ್ತಿದ್ದ. ಆಗ ಕರೀಷ್ಮಾ ಅಪ್ರಾಪ್ತೆಯಾಗಿದ್ದಳು. ಇದಕ್ಕೆ ಹುಡುಗಿಯ ಮನೆಯವರು ಆಕ್ಷೇಪ ವ್ಯಕ್ತಪಡಿಸಿ, ಆಕೆಯ ಮನಃ ಪರಿವರ್ತನೆ ಮಾಡಲು ಮುಂದಾಗಿದ್ದರು. ಅಷ್ಟೇ ಅಲ್ಲದೆ, ಆರೋಪಿಯ ವಿರುದ್ಧ ದೂರು ನೀಡಿದ್ದರು. ಇದರಂತೆ ಪ್ರಕಾಶನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿತ್ತು.ಬಳಿಕ ಹುಬ್ಬಳ್ಳಿಯಲ್ಲಿಯೇ ಇದ್ದರೆ ಸಮಸ್ಯೆ ಆಗುತ್ತದೆ ಎಂದು ಹುಡುಗಿಯನ್ನು ಮನೆಯವರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಇರುವ ಅಜ್ಜಿ ಮನೆಯಲ್ಲಿ ಬಿಟ್ಟಿದ್ದರು. ಅಂದಿನಿಂದ ಆಕೆ ಅಲ್ಲಿಯೇ ವಾಸವಾಗಿದ್ದಳು. ಆದರೆ ಆಕೆ, ಜನವರಿ 3 ರಂದು ಅಲ್ಲಿಂದ ನಾಪತ್ತೆಯಾಗಿದ್ದಳು. ಆ ಬಳಿಕ ಆಕೆಯ ಬಗ್ಗೆ ಯಾವುದೇ ಮಾಹಿತಿ ದೊರೆತಿರಲಿಲ್ಲ. ಆರೋಪಿ ಪ್ರಕಾಶನೇ ಆಕೆಯನ್ನು ಅಪಹರಿಸಿಕೊಂಡು ಹೋಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಇದೀಗ ಕರೀಷ್ಮಾಗೆ 18 ವರ್ಷ ತುಂಬಿದ್ದರಿಂದ ಮದುವೆ ಮಾಡಿಕೊಂಡು ಪ್ರಕಾಶನ ಜೊತೆಯಲ್ಲೇ ಇರುವುದು ಗೊತ್ತಾಗಿದೆ. ಇದರಿಂದ ಶಾಕ್ ಆದ ತಂದೆ-ತಾಯಿ ನಮ್ಮ ಮಗಳಿಗೆ ತಲೆ ಕಡೆಸಿದ್ದಾನೆ ಎಂದು ಪ್ರಕಾಶನ ವಿರುದ್ಧ ಆರೋಪಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ