ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ

ಯುವತಿ ಜೀವನದ ಬಗ್ಗೆ ಹತ್ತಾರು ಕನಸು ಕಂಡಿದ್ದಳು. ಆಕೆಗೆ ಮದುವೆ ಮಾಡಬೇಕು ಮಗಳು ಚೆನ್ನಾಗಿ ಇರಲಿ ಅಂತ ಹೆತ್ತವರು ಕೂಡಾ ಅಂದುಕೊಂಡಿದ್ದರು. ಯುವತಿ ಇಷ್ಟಪಟ್ಟ ಹುಡುಗನ ಜೊತೆ ನಿಶ್ಚಿತಾರ್ಥ ಮಾತುಕತೆ ಕೂಡಾ ಆಗಿತ್ತು. ಆದ್ರೆ ನಿನ್ನೆ ಮನೆಯಿಂದ ಹೊರಹೋಗಿದ್ದ ಯುವತಿ ಇಂದು ಶವವಾಗಿ ಪತ್ತೆಯಾಗಿದ್ದಾಳೆ. ಅಷ್ಟಕ್ಕೂ ಆಗಿದ್ದೇನು? ಚೆಲುವೆಯ ಶವ ಪತ್ತೆಯಾಗಿದ್ದೆಲ್ಲಿ? ಎಸ್ಪಿ ಹೇಳಿದ್ದೇನು? ಎಲ್ಲಾ ವಿವರ ಇಲ್ಲಿದೆ.

ಕೆಲಸ ಹುಡುಕಲು ಹೋದವಳು ಶವವಾಗಿ ಪತ್ತೆ, ಇಷ್ಟಪಟ್ಟವನೊಂದಿಗೆ ಬಾಳುವ ಮೊದಲೇ ದುರಂತ ಅಂತ್ಯ
Zakiya Mulla
Edited By:

Updated on: Jan 21, 2026 | 7:02 PM

ಧಾರವಾಡ, (ಜನವರಿ 21): ಯುವತಿಯೋರ್ವಳು ಕೆಲಸ ಹುಡುಕಲು ಮನೆಯಿಂದ ಹೋಗಿದ್ದವಳು ಶವವಾಗಿ ಪತ್ತೆಯಾಗಿದ್ದಾಳೆ. ಪ್ಯಾರಾಮೆಡಿಕಲ್ ಪೂರ್ಣಗೊಳಸಿದ್ದ ಧಾರವಾಡದ (Dharwad) ಗಾಂಧಿ ಚೌಕ್​​​​​​ನ ನಿವಾಸಿ 21 ವರ್ಷ ಝಕಿಲಾ ಮುಲ್ಲಾ, ಕೆಲಸ ಹುಡುಕಲೆಂದು ನಿನ್ನೆ(ಜನವರಿ 20) ಮನೆಯಿಂದ ಹೋಗಿದ್ದವಳು. ಆದ್ರೆ, ಇಂದು (ಜನವರಿ 21) ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಝಕಿಲಾ ಮುಲ್ಲಾ ಮೃತದೇಹ ಪತ್ತೆಯಾಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್​​​​​ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಹುಟ್ಟುಕೊಂಡಿದೆ. ಇನ್ನು ಈ ಘಟನೆಯಿಂದ ಧಾರವಾಡ ಜನರೆಲ್ಲ ಬೆಚ್ಚಿ ಬಿದ್ದಿದ್ದಾರೆ.

ಧಾರವಾಡದ ಮನಸೂರು ಗ್ರಾಮದ ರಸ್ತೆ ಪಕ್ಕ ಶವವಾಗಿ ಬಿದ್ದಿರುವ ಈ ಚೆಲುವೆ ಝಕಿಲಾ ಮುಲ್ಲಾ.. 21 ವರ್ಷ ವಯಸ್ಸು.. ಧಾರವಾಡದ ಗಾಂಧಿ ಚೌಕ್​​​​​​ನ ನಿವಾಸಿ ಆಗಿದ್ದ ಯುವತಿ, ಪ್ಯಾರಾಮೆಡಿಕಲ್ ಪೂರೈಸಿದ್ಳು. ನಿನ್ನೆ ಸಂಜೆ ಲ್ಯಾಬ್​​ಗಳಲ್ಲಿ ಕೆಲಸ ಹುಡುಕಲೆಂದು ಮನೆಯಿಂದ ಹೊರಟಿದ್ಳು. ಆದ್ರೆ ರಾತ್ರಿಯಾದ್ರೂ ಮನೆಗೆ ಬಂದಿರಲಿಲ್ಲ.. ಮನೆಯವ್ರು ಧಾರವಾಡ ಟೌನ್​​​ ಪೊಲೀಸರಿಗೆ ದೂರು ನೀಡಿದ್ರು. ಇಂದು ಬೆಳಗ್ಗೆ ಝಕಿಯಾ ಶವ ಪತ್ತೆ ಆಗಿದೆ. ಯುವತಿ ಬಾಯಲ್ಲಿ ರಕ್ತ ಬಂದಿದ್ದು, ಆಕೆಯ ವೇಲ್​​​​​ನಿಂದಲೇ ಕುತ್ತಿಗೆ ಬಿಗಿದು ಕೊಂದಿರುವ ಸಂಶಯ ಎದ್ದಿದೆ.

ಇದನ್ನೂ ನೋಡಿ: ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​?

ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ

ಇನ್ನು ಈ ಬಗ್ಗೆ ಧಾರವಾಡ ಎಸ್ಪಿ ಗುಂಜನ್ ಆರ್ಯ ಪ್ರತಿಕ್ರಿಯಿಸಿದ್ದು, ಝಕಿಯಾ ಎನ್ನುವ ಯುವತಿಯ ಶವ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನ ಊಟ ಮಾಡಿ ಮನೆಯಿಂದ ಹೊರಹೋಗಿದ್ದಳು. ನಮಗೆ ಇಂದು ಮುಂಜಾನೆ ಶವ ಬಿದ್ದಿರುವ ಬಗ್ಗೆ ಮಾಹಿತಿ ಬಂದಿತ್ತು. ಕತ್ತು ಹಿಸುಕಿ ಸಾವಾಗಿದೆ ಎಂದು ಸದ್ಯ ನಮಗೆ ಮಾಹಿತಿ ಇದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕುವ ಕೆಲಸ ಮಾಡುತ್ತಿದ್ದೇವೆ. ಸುಕೋ ಟೀಂ ಪರಿಶೀಲನೆ ನಡೆಸಿದ್ದು, ಮೆಡಿಕಲ್ ಪರೀಕ್ಷೆ ನಂತರ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ. ಕುಟುಂಬದವರಿಗೆ ನಿನ್ನೆ ರಾತ್ರಿ ಮೆಸೆಜ್ ಕೂಡಾ ಮಾಡಿದ್ದಾಳೆ. ಅದರ ಬಗ್ಗೆ ಕೂಡಾ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಧಾರವಾಡದ ಸಾಧನಕೇರಿಯ ಯುವಕನನ್ನ ಝಕಿಯಾ ಇಷ್ಟಪಟ್ಟಿದ್ದು, ಮದ್ವೆಗೂ ಮನೆಯವರು ಒಪ್ಪಿದ್ದರು. ಹೀಗಾಗಿ ಮುಂದಿನ ತಿಂಗಳು ನಿಶ್ಚಿತಾರ್ಥಕ್ಕೆ ಮಾಡಲು ತೀರ್ಮಾನಿಸಿದ್ದರು. ಆದ್ರೆ, ಇದೀಗ ಚೆಲುವೆಯ ಹತ್ಯೆಯಾಗಿದ್ದು, ಹತ್ತಾರು ಪ್ರಶ್ನೆ ಹುಟ್ಟುಹಾಕಿದೆ. ಪೊಲೀಸರು ಸದ್ಯ ಕೊಲೆಗಾರರ ಪತ್ತೆಗೆ ಮುಂದಾಗಿದ್ದಾರೆ. ಟೆಕ್ನಿಕಲ್ ಎವಿಡೆನ್ಸ್​​ಗಳ ಹಿಂದೆ ಬಿದ್ದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:00 pm, Wed, 21 January 26

Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us