AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ದೀಪಾವಳಿ ಹಬ್ಬದ ಮಧ್ಯೆ ಭರ್ಜರಿ ಜೂಜಾಟ; ಪೊಲೀಸ್​ ದಾಳಿ, 20 ಜನರ ಬಂಧನ

ಧಾರವಾಡ ತಾಲೂಕಿನ 3 ಜೂಜು ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಧಾರವಾಡ ತಾಲೂಕಿನ ಗರಗದಲ್ಲಿ ನಡೆದಿದೆ. ಇನ್ನು ಈ ವೇಳೆ ಪೊಲೀಸರಿಂದ ಒಟ್ಟು 20 ಜೂಜುಕೋರರನ್ನು ಬಂಧಿಸಲಾಗಿದ್ದು, 24 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ.

ಧಾರವಾಡ: ದೀಪಾವಳಿ ಹಬ್ಬದ ಮಧ್ಯೆ ಭರ್ಜರಿ ಜೂಜಾಟ; ಪೊಲೀಸ್​ ದಾಳಿ, 20 ಜನರ ಬಂಧನ
ಪ್ರಾತಿನಿಧಿಕ ಚಿತ್ರ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 12, 2023 | 7:56 PM

Share

ಧಾರವಾಡ, ನ.12: ದೀಪಾವಳಿ ಸಮಯದಲ್ಲಿ ಉತ್ತರ ಕರ್ನಾಟಕ ಭಾಗಗಳಲ್ಲಿ ಜೂಜು ಆಡುವ ಸಂಪ್ರದಾಯವಿತ್ತು. ಬಳಿಕ ಇದನ್ನು ಸಂಪೂರ್ಣ ನಿಷೇಧಿಸಲಾಯಿತು. ಆದರೆ, ಅಲ್ಲಲ್ಲಿ ಕೆಲವೊಂದು ಪ್ರಕರಣಗಳು ಕಂಡು ಬರುತ್ತವೆ. ಅದರಂತೆ ಇಂದು ಧಾರವಾಡ(Dharwad) ತಾಲೂಕಿನ 3 ಜೂಜು(Gambling) ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಧಾರವಾಡ ತಾಲೂಕಿನ ಗರಗದಲ್ಲಿ ನಡೆದಿದೆ. ಇನ್ನು ಈ ವೇಳೆ ಪೊಲೀಸರಿಂದ ಒಟ್ಟು 20 ಜೂಜುಕೋರರನ್ನು ಬಂಧಿಸಲಾಗಿದ್ದು, 24 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಶಿಂಗನಳ್ಳಿಯಲ್ಲಿ ನಾಲ್ವರು, ಕೊಟಬಾಗಿ ಹಾಗೂ ಲಕಮಾಪುರ ಗ್ರಾಮದಲ್ಲಿ ತಲಾ 8 ಜೂಜುಕೋರರನ್ನು ಬಂಧಿತರು, ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು‌ ಮಾಡಲಾಗಿದೆ.

ಕೆಜಿಎಫ್​​ ನಗರದ ಡಿಎಆರ್​​ ಮೈದಾನದಲ್ಲಿ ರೌಡಿಗಳ ಪರೇಡ್​​​

ಕೋಲಾರ: ಇತ್ತೀಚೆಗೆ ಜಿಲ್ಲೆಯಲ್ಲಿ ಕೊಲೆ, ಅಪರಾಧ ಪ್ರಕರಣ ಹೆಚ್ಚಳವಾಗುತ್ತಿದ್ದು, ಕೆಲ ದಿನಗಳ ಹಿಂದೆ ಅಪ್ರಾಪ್ತ ಬಾಲಕನನ್ನು ಹಿಂಸೆ ಕೊಟ್ಟು ಆತನ ಸ್ನೇಹಿತರೆ ಹತ್ಯೆ ಮಾಡಿದ್ದರು. ಇಂತಹ ಚಟುವಟಿಕೆಗಳಿಗೆ ಬ್ರೆಕ್​ ಹಾಕುವ ಹಿನ್ನೆಲೆ ಇಂದು ಜಿಲ್ಲೆಯ ಕೆಜಿಎಫ್​​ ನಗರದ ಡಿಎಆರ್​​ ಮೈದಾನದಲ್ಲಿ ರೌಡಿಗಳ ಪರೇಡ್​​​ ಹಮ್ಮಿಕೊಳ್ಳಲಾಗಿತ್ತು. ಹೌದು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಕೋಲಾರ ಎಸ್​​ಪಿ ಶಾಂತರಾಜು, ಡಿವೈಎಸ್​ಪಿ ಪಾಂಡುರಂಗ ​ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಕೊಪ್ಪಳ: ಗ್ರಾ.ಪಂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​: ಜೂಜು ಅಡ್ಡೆ ಮೇಲೆ ದಾಳಿ ಮಾಡಿದ್ದರಿಂದ ಘರ್ಷಣೆ

ಕಾರಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವ ತೃತೀಯಲಿಂಗಿಗಳು

ಬೆಂಗಳೂರು: ಕಾರಿನಲ್ಲಿದ್ದ ಚಿನ್ನಾಭರಣವನ್ನು ತೃತೀಯಲಿಂಗಿಗಳು ಕಳವು ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿ ನಡೆದಿದೆ. ಬೇಗೂರಿನ ಮಂಜೇಶ್‌ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಅದರಲ್ಲಿದ್ದ ಬರೊಬ್ಬರಿ 4 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ. ಸಹನಾ, ಮಂಜುಳಾ, ಖುಷಿ, ರಿಷಿಕಾ ಎಂಬುವವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ರಾತ್ರಿ 11.30 ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ