AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ದೀಪಾವಳಿ ಹಬ್ಬದ ಮಧ್ಯೆ ಭರ್ಜರಿ ಜೂಜಾಟ; ಪೊಲೀಸ್​ ದಾಳಿ, 20 ಜನರ ಬಂಧನ

ಧಾರವಾಡ ತಾಲೂಕಿನ 3 ಜೂಜು ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಧಾರವಾಡ ತಾಲೂಕಿನ ಗರಗದಲ್ಲಿ ನಡೆದಿದೆ. ಇನ್ನು ಈ ವೇಳೆ ಪೊಲೀಸರಿಂದ ಒಟ್ಟು 20 ಜೂಜುಕೋರರನ್ನು ಬಂಧಿಸಲಾಗಿದ್ದು, 24 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ.

ಧಾರವಾಡ: ದೀಪಾವಳಿ ಹಬ್ಬದ ಮಧ್ಯೆ ಭರ್ಜರಿ ಜೂಜಾಟ; ಪೊಲೀಸ್​ ದಾಳಿ, 20 ಜನರ ಬಂಧನ
ಪ್ರಾತಿನಿಧಿಕ ಚಿತ್ರ
ಶಿವಕುಮಾರ್ ಪತ್ತಾರ್
| Edited By: |

Updated on: Nov 12, 2023 | 7:56 PM

Share

ಧಾರವಾಡ, ನ.12: ದೀಪಾವಳಿ ಸಮಯದಲ್ಲಿ ಉತ್ತರ ಕರ್ನಾಟಕ ಭಾಗಗಳಲ್ಲಿ ಜೂಜು ಆಡುವ ಸಂಪ್ರದಾಯವಿತ್ತು. ಬಳಿಕ ಇದನ್ನು ಸಂಪೂರ್ಣ ನಿಷೇಧಿಸಲಾಯಿತು. ಆದರೆ, ಅಲ್ಲಲ್ಲಿ ಕೆಲವೊಂದು ಪ್ರಕರಣಗಳು ಕಂಡು ಬರುತ್ತವೆ. ಅದರಂತೆ ಇಂದು ಧಾರವಾಡ(Dharwad) ತಾಲೂಕಿನ 3 ಜೂಜು(Gambling) ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಧಾರವಾಡ ತಾಲೂಕಿನ ಗರಗದಲ್ಲಿ ನಡೆದಿದೆ. ಇನ್ನು ಈ ವೇಳೆ ಪೊಲೀಸರಿಂದ ಒಟ್ಟು 20 ಜೂಜುಕೋರರನ್ನು ಬಂಧಿಸಲಾಗಿದ್ದು, 24 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಶಿಂಗನಳ್ಳಿಯಲ್ಲಿ ನಾಲ್ವರು, ಕೊಟಬಾಗಿ ಹಾಗೂ ಲಕಮಾಪುರ ಗ್ರಾಮದಲ್ಲಿ ತಲಾ 8 ಜೂಜುಕೋರರನ್ನು ಬಂಧಿತರು, ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು‌ ಮಾಡಲಾಗಿದೆ.

ಕೆಜಿಎಫ್​​ ನಗರದ ಡಿಎಆರ್​​ ಮೈದಾನದಲ್ಲಿ ರೌಡಿಗಳ ಪರೇಡ್​​​

ಕೋಲಾರ: ಇತ್ತೀಚೆಗೆ ಜಿಲ್ಲೆಯಲ್ಲಿ ಕೊಲೆ, ಅಪರಾಧ ಪ್ರಕರಣ ಹೆಚ್ಚಳವಾಗುತ್ತಿದ್ದು, ಕೆಲ ದಿನಗಳ ಹಿಂದೆ ಅಪ್ರಾಪ್ತ ಬಾಲಕನನ್ನು ಹಿಂಸೆ ಕೊಟ್ಟು ಆತನ ಸ್ನೇಹಿತರೆ ಹತ್ಯೆ ಮಾಡಿದ್ದರು. ಇಂತಹ ಚಟುವಟಿಕೆಗಳಿಗೆ ಬ್ರೆಕ್​ ಹಾಕುವ ಹಿನ್ನೆಲೆ ಇಂದು ಜಿಲ್ಲೆಯ ಕೆಜಿಎಫ್​​ ನಗರದ ಡಿಎಆರ್​​ ಮೈದಾನದಲ್ಲಿ ರೌಡಿಗಳ ಪರೇಡ್​​​ ಹಮ್ಮಿಕೊಳ್ಳಲಾಗಿತ್ತು. ಹೌದು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಕೋಲಾರ ಎಸ್​​ಪಿ ಶಾಂತರಾಜು, ಡಿವೈಎಸ್​ಪಿ ಪಾಂಡುರಂಗ ​ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಕೊಪ್ಪಳ: ಗ್ರಾ.ಪಂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​: ಜೂಜು ಅಡ್ಡೆ ಮೇಲೆ ದಾಳಿ ಮಾಡಿದ್ದರಿಂದ ಘರ್ಷಣೆ

ಕಾರಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವ ತೃತೀಯಲಿಂಗಿಗಳು

ಬೆಂಗಳೂರು: ಕಾರಿನಲ್ಲಿದ್ದ ಚಿನ್ನಾಭರಣವನ್ನು ತೃತೀಯಲಿಂಗಿಗಳು ಕಳವು ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿ ನಡೆದಿದೆ. ಬೇಗೂರಿನ ಮಂಜೇಶ್‌ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಅದರಲ್ಲಿದ್ದ ಬರೊಬ್ಬರಿ 4 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ. ಸಹನಾ, ಮಂಜುಳಾ, ಖುಷಿ, ರಿಷಿಕಾ ಎಂಬುವವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ರಾತ್ರಿ 11.30 ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ