ಧಾರವಾಡ: ದೀಪಾವಳಿ ಹಬ್ಬದ ಮಧ್ಯೆ ಭರ್ಜರಿ ಜೂಜಾಟ; ಪೊಲೀಸ್​ ದಾಳಿ, 20 ಜನರ ಬಂಧನ

ಧಾರವಾಡ ತಾಲೂಕಿನ 3 ಜೂಜು ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಧಾರವಾಡ ತಾಲೂಕಿನ ಗರಗದಲ್ಲಿ ನಡೆದಿದೆ. ಇನ್ನು ಈ ವೇಳೆ ಪೊಲೀಸರಿಂದ ಒಟ್ಟು 20 ಜೂಜುಕೋರರನ್ನು ಬಂಧಿಸಲಾಗಿದ್ದು, 24 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ.

ಧಾರವಾಡ: ದೀಪಾವಳಿ ಹಬ್ಬದ ಮಧ್ಯೆ ಭರ್ಜರಿ ಜೂಜಾಟ; ಪೊಲೀಸ್​ ದಾಳಿ, 20 ಜನರ ಬಂಧನ
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Nov 12, 2023 | 7:56 PM

ಧಾರವಾಡ, ನ.12: ದೀಪಾವಳಿ ಸಮಯದಲ್ಲಿ ಉತ್ತರ ಕರ್ನಾಟಕ ಭಾಗಗಳಲ್ಲಿ ಜೂಜು ಆಡುವ ಸಂಪ್ರದಾಯವಿತ್ತು. ಬಳಿಕ ಇದನ್ನು ಸಂಪೂರ್ಣ ನಿಷೇಧಿಸಲಾಯಿತು. ಆದರೆ, ಅಲ್ಲಲ್ಲಿ ಕೆಲವೊಂದು ಪ್ರಕರಣಗಳು ಕಂಡು ಬರುತ್ತವೆ. ಅದರಂತೆ ಇಂದು ಧಾರವಾಡ(Dharwad) ತಾಲೂಕಿನ 3 ಜೂಜು(Gambling) ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ಧಾರವಾಡ ತಾಲೂಕಿನ ಗರಗದಲ್ಲಿ ನಡೆದಿದೆ. ಇನ್ನು ಈ ವೇಳೆ ಪೊಲೀಸರಿಂದ ಒಟ್ಟು 20 ಜೂಜುಕೋರರನ್ನು ಬಂಧಿಸಲಾಗಿದ್ದು, 24 ಸಾವಿರ ರೂಪಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಶಿಂಗನಳ್ಳಿಯಲ್ಲಿ ನಾಲ್ವರು, ಕೊಟಬಾಗಿ ಹಾಗೂ ಲಕಮಾಪುರ ಗ್ರಾಮದಲ್ಲಿ ತಲಾ 8 ಜೂಜುಕೋರರನ್ನು ಬಂಧಿತರು, ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು‌ ಮಾಡಲಾಗಿದೆ.

ಕೆಜಿಎಫ್​​ ನಗರದ ಡಿಎಆರ್​​ ಮೈದಾನದಲ್ಲಿ ರೌಡಿಗಳ ಪರೇಡ್​​​

ಕೋಲಾರ: ಇತ್ತೀಚೆಗೆ ಜಿಲ್ಲೆಯಲ್ಲಿ ಕೊಲೆ, ಅಪರಾಧ ಪ್ರಕರಣ ಹೆಚ್ಚಳವಾಗುತ್ತಿದ್ದು, ಕೆಲ ದಿನಗಳ ಹಿಂದೆ ಅಪ್ರಾಪ್ತ ಬಾಲಕನನ್ನು ಹಿಂಸೆ ಕೊಟ್ಟು ಆತನ ಸ್ನೇಹಿತರೆ ಹತ್ಯೆ ಮಾಡಿದ್ದರು. ಇಂತಹ ಚಟುವಟಿಕೆಗಳಿಗೆ ಬ್ರೆಕ್​ ಹಾಕುವ ಹಿನ್ನೆಲೆ ಇಂದು ಜಿಲ್ಲೆಯ ಕೆಜಿಎಫ್​​ ನಗರದ ಡಿಎಆರ್​​ ಮೈದಾನದಲ್ಲಿ ರೌಡಿಗಳ ಪರೇಡ್​​​ ಹಮ್ಮಿಕೊಳ್ಳಲಾಗಿತ್ತು. ಹೌದು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ರೌಡಿಗಳಿಗೆ ಕೋಲಾರ ಎಸ್​​ಪಿ ಶಾಂತರಾಜು, ಡಿವೈಎಸ್​ಪಿ ಪಾಂಡುರಂಗ ​ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:ಕೊಪ್ಪಳ: ಗ್ರಾ.ಪಂ ಅಧ್ಯಕ್ಷ ಸ್ಥಾನದ ಮೀಸಲಾತಿಗಾಗಿ ಗಲಾಟೆ ಪ್ರಕರಣಕ್ಕೆ ಟ್ವಿಸ್ಟ್​: ಜೂಜು ಅಡ್ಡೆ ಮೇಲೆ ದಾಳಿ ಮಾಡಿದ್ದರಿಂದ ಘರ್ಷಣೆ

ಕಾರಿನಲ್ಲಿದ್ದ ಚಿನ್ನಾಭರಣ ಕಳವು ಮಾಡಿರುವ ತೃತೀಯಲಿಂಗಿಗಳು

ಬೆಂಗಳೂರು: ಕಾರಿನಲ್ಲಿದ್ದ ಚಿನ್ನಾಭರಣವನ್ನು ತೃತೀಯಲಿಂಗಿಗಳು ಕಳವು ಮಾಡಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾಕಳಿ ಬಳಿ ನಡೆದಿದೆ.
ಬೇಗೂರಿನ ಮಂಜೇಶ್‌ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಅದರಲ್ಲಿದ್ದ ಬರೊಬ್ಬರಿ 4 ಲಕ್ಷ 50 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ. ಸಹನಾ, ಮಂಜುಳಾ, ಖುಷಿ, ರಿಷಿಕಾ ಎಂಬುವವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ರಾತ್ರಿ 11.30 ರಲ್ಲಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us