AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National Youth Fest:ಹುಬ್ಬಳ್ಳಿ-ಧಾರವಾಡ ಯುವಜನೋತ್ಸವಕ್ಕೆ ಪ್ರಧಾನಿ, ಮೋದಿ ಬರುವ ಮಾರ್ಗ ಉದ್ದಕ್ಕೂ ಪೊಲೀಸ್ ಸರ್ಪಗಾವಲು

Hubli-Dharwad: ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಹೀಗಾಗಿ ಭದ್ರತೆ ದೃಷ್ಟಿಯಿಂದ 2900 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್​ ಹೇಳಿದ್ದಾರೆ.

National Youth Fest:ಹುಬ್ಬಳ್ಳಿ-ಧಾರವಾಡ ಯುವಜನೋತ್ಸವಕ್ಕೆ ಪ್ರಧಾನಿ, ಮೋದಿ ಬರುವ ಮಾರ್ಗ ಉದ್ದಕ್ಕೂ ಪೊಲೀಸ್ ಸರ್ಪಗಾವಲು
ಯುವಜನೋತ್ಸವದಲ್ಲಿ ಮೋದಿ ಭಾಗಿ, ಎಡಿಜಿಪಿ ಅಲೋಕ ಕುಮಾರ್
TV9 Web
| Updated By: ವಿವೇಕ ಬಿರಾದಾರ|

Updated on:Jan 11, 2023 | 8:31 PM

Share

ಹುಬ್ಬಳ್ಳಿ-ಧಾರವಾಡ: ಅವಳಿನಗರದಲ್ಲಿ ನಾಳೆ (ಜ.12) ರಿಂದ 26ನೇ ರಾಷ್ಟ್ರೀಯ ಯುವಜನೋತ್ಸವ ಪ್ರಾರಂಭವಾಗಲಿದೆ. ಈ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಚಾಲನೆ ನೀಡಲಿದ್ದಾರೆ. ಹೀಗಾಗಿ ಭದ್ರತೆ ದೃಷ್ಟಿಯಿಂದ 2900 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ (ADGP Alok kumar)​ ಹೇಳಿದ್ದಾರೆ.

ಈ ಸಂಬಂಧ ಎಡಿಜಿಪಿ ಅಲೋಕ್​​ ಕುಮಾರ್​ ಹುಬ್ಬಳ್ಳಿಯಲ್ಲಿ, ಹುಬ್ಬಳ್ಳಿ-ಧಾರವಾಡ ಕಮೀಷನರ್ ಹಾಗೂ ಧಾರವಾಡ ಎಸ್ಪಿ ಅವರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ, ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಯಾವಾವ ಅಧಿಕಾರಿಗಳಿಗೆ ಎಲ್ಲಿ ನಿಯೋಜನೆ ಮಾಡಲಾಗಿದೆ ಅಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ. ಯಾವೂದೇ ಪ್ರತಿಭಟನೆ, ಮನವಿಗೆ ಅವಕಾಶವಿಲ್ಲ. ಸಿಬ್ಬಂದಿಗಳು ತಾವು ನಿಯೋಜನೆ ಮಾಡಿದ ಸ್ಥಳದಿಂದ ಕದಲದಂತೆ ತಾಕಿತು ಮಾಡಿ. ಹೊಂದಾಣಿಕೆಯಿಂದ ಕರ್ತವ್ಯ ಮಾಡಿ ಎಂದು ಸೂಚಿಸಿದರು.

ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು 7 ಎಸ್​ಪಿ ದರ್ಜೆ ಅಧಿಕಾರಿಗಳು, 25 ಡಿವೈಎಸ್​ಪಿ ದರ್ಜೆ, 60 ಪಿಐ, 18 ಕೆಎಸ್​ಆರ್​ಪಿ, ಸಿಆರ್, ಡಿಆರ್ ಸಿಬ್ಬಂದಿಗಳನ್ನು ನಿಯೋಜಿಲಾಗಿದೆ. ಹಾಗೇ ಪ್ರಧಾನಿ ಬರುವ ಮಾರ್ಗ ಉದ್ದಕ್ಕೂ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ರೈಲ್ವೆ ಮೈದಾನದ ಮುಖ್ಯ ವೇದಿಕೆಯ ಸುತ್ತಲೂ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮುಂಜಾನೆ 10 ಗಂಟೆ ನಂತರ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ಟ್ರಾಫಿಕ್​​ ಯಂತ್ರಣಕ್ಕಾಗಿ ಪರ್ಯಾಯಾ ಮಾರ್ಗಕ್ಕೆ ಸೂಚನೆ

ಜನರಿಗೆ ತೊಂದರೆ ಆಗದಂತೆ ಟ್ರಾಫಿಕ್​ ನಿಯಂತ್ರಣಕ್ಕಾಗಿ ಪರ್ಯಾಯ ಮಾರ್ಗ ಸೂಚಿಸಲಾಗಿದೆ. ಕಾರ್ಯಕ್ರಮ ಆರಂಭಕ್ಕೂ 1 ಗಂಟೆ ಮುನ್ನ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಲಾಗಿದೆ. ಯಾವ ಸಂಘಟನೆ, ಯಾರಾದರೂ ಮನವಿ ಕೊಡುವುದಾದರೆ ಪೊಲೀಸ್ ಕಮೀಷನರ್, ಡಿಸಿಗೆ ಮನವಿ ನೀಡಬಹುದು ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ ಆಗಮನದ ಹಿನ್ನೆಲೆ ಮಾರ್ಗ ಬದಲಾವಣೆ, ಇಲ್ಲಿದೆ ಕಂಪ್ಲಿಟ್ ರೂಟ್ ಡೀಟೇಲ್ಸ್

ನವಲಗುಂದ ಕಡೆಯಿಂದ ಬರುವ ಬಸ್ಸುಗಳು ಕೆ.ಎಚ್. ಪಾಟೀಲ ರಸ್ತೆ ಶೃಂಗಾರ ಕ್ರಾಸ್ ಬಳಿ ಇಳಿಸಬೇಕು. ಗದಗ ರಸ್ತೆ ವಿನೋಭಾ ನಗರದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಬೇಕು. ನವಲಗುಂದ ರಸ್ತೆ ಕಡೆಯಿಂದ ಸರ್ವೋದಯ ಸರ್ಕಲ್, ಶೃಂಗಾರ ಕ್ರಾಸ್, ಸೇಂಟ್ ಎಂಡ್ರಿಯೋ ಸ್ಕೂಲ್, ಆರ್‌ಪಿಎಫ್ ಕ್ರಾಸ್ ಮೂಲಕ ವಿನೋಭಾ ನಗರ ಮೈದಾನ ತಲುಪಬೇಕು. ಗದಗ ಕಡೆಯಿಂದ ಬರುವ ಬಸ್ಸುಗಳು ಗದಗ ಕೆಳ ಸೇತುವೆ ಅಂಬೇಡ್ಕರ ಮೂರ್ತಿಯ ವೃತ್ತದಲ್ಲಿ ಜನರನ್ನು ಇಳಿಸಬೇಕು. ಚಿಲ್ಲಿ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ಗದಗ ರಸ್ತೆ ಕೆಳ ಸೇತುವೆ ಮೂಲಕ ಅಂಬೇಡ್ಕರ ಮೂರ್ತಿ ಸುತ್ತುವರೆದು ಗದಗ ರಸ್ತೆಯ ಚಿಲ್ಲಿ ಮೈದಾನ ತಲುಪಬೇಕು.

ಇದನ್ನೂ ಓದಿ:  ಯುವಜನೋತ್ಸವದ ಕಾರಣಕರ್ತ ಸ್ವಾಮಿ ವಿವೇಕಾನಂದರ ಸುಂದರ ಮೂರ್ತಿ ಅರಳಿದೆ ಬಿದರಿ ಕಲೆಯಲ್ಲಿ, ಇದು ಪ್ರಧಾನಿ ಮೋದಿಗೆ ಗಿಫ್ಟ್

ಗಬ್ಬೂರ ರಸ್ತೆ ಕಡೆಯಿಂದ ಬರುವ ಬಸ್ಸುಗಳು ಪೋಲೀಸ್ ಕ್ವಾರ್ಟರ್ಸ್ ಹತ್ತಿರ ಜನರನ್ನು ಇಳಿಸಬೇಕು. ಗಿರಣಿಚಾಳ ಮೈದಾನ ಹಾಗೂ ಎಂ.ಟಿ. ಮಿಲ್ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ಬಂಕಾಪುರ ಚೌಕ್, ಕಮರಿಪೇಟೆ, ಮಿರ್ಜಾನಕರ ಪೆಟ್ರೋಲ್ ಪಂಪ್ ಸುತ್ತುವರೆದು ಗಿರಣಿಚಾಳ ಮೈದಾನ ಅಥವಾ ಎಂ.ಟಿ. ಮಿಲ್ ಮೈದಾನ ತಲುಪಬೇಕು.

ಕಾರವಾರ ರಸ್ತೆ ಕಡೆಯಿಂದ ಬರುವ ಬಸ್ಸುಗಳು ಗ್ಲಾಸ್ ಹೌಸ್ ಭಾವಿ ಹತ್ತಿರ ಜನರನ್ನು ಇಳಿಸಬೇಕು. ಗ್ಲಾಸ್ ಹೌಸ್ ಭಾವಿಯ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ಕಾರವಾರ ರಸ್ತೆ ಕಡೆಯಿಂದ ಬರುವ ಬಸ್ಸುಗಳು ಎಂ.ಟಿ. ಮಿಲ್, ಗ್ಲಾಸ್ ಹೌಸ್ ಬಾವಿ ಮೈದಾನ ತಲುಪಬೇಕು. ಧಾರವಾಡ ನಗರ ಕಡೆಯಿಂದ ಬರುವ ಬಸ್ಸುಗಳು ಹಳೇಬಸ್ ನಿಲ್ದಾಣದ ಮುಂದೆ ಜನರನ್ನು ಇಳಿಸಬೇಕು. ಹೊಸೂರನ ರಾಯ್ಕರ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ನವನಗರ, ಬಿವಿಬಿ, ಹೊಸೂರ, ಲಕ್ಷ್ಮೀ ವೇ ಬ್ರಿಡ್ಜ್ ಮೂಲಕ ಗ್ಲಾಸ್ ಹೌಸ್ ಬಾವಿ ತಲುಪಬೇಕು.

11 ಮತ್ತು 12 ರಂದು ವಾಹನಗಳ ಸಂಚಾರ ನಿಷೇಧ

ಜನವರಿ‌ 11ಮತ್ತು 12ರಂದು ಮಧ್ಯಾಹ್ನ 01ರಿಂದ ಸಂಜೆ 7 ಗಂಟೆ ವರೆಗೆ ಗೋಕುಲ ರಸ್ತೆ ಮಾಪ್ಸಲ್ ಡಿಪೋದಿಂದ ಸಿದ್ದೇಶ್ವರ ಪಾರ್ಕ್, ಶಿರೂರ ಪಾರ್ಕ್, ಕಿಮ್ಸ್ ಮುಖ್ಯ ರಸ್ತೆ, ಹೊಸೂರ ರಸ್ತೆ, ಭಗತಸಿಂಗ್ ವೃತ್ತ, ಪ್ರವಾಸಿ ಮಂದಿರ ಎದುರು (ಐಬಿ), ಬಾಳಿಗಾ ಕ್ರಾಸ್, ದೇಸಾಯಿ ಕ್ರಾಸ್, ರೈಲ್ವೆ ಮೈದಾನದ ಯುವಜನೋತ್ಸವ ಕಾರ್ಯಕ್ರಮ ಸ್ಥಳದವರೆಗೆ ಎಲ್ಲಾ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಪೊಲೀಸ್ ಆಯುಕ್ತರು ಕೋರಿದ್ದಾರೆ.

ಬಸ್ಸುಗಳ ಮಾರ್ಗ ಬದಲಾವಣೆ

ಕಾರವಾರ ರಸ್ತೆಯಿಂದ ಬರುವ ಬಸ್ಸುಗಳಿಗೆ ಕಾರವಾರ ರಸ್ತೆ ಪ್ಲಾಜಾ (ಅಂಡರ್ ಬ್ರಿಡ್ಜ್) ಹತ್ತಿರ ತಾತ್ಕಾಲಿಕ ನಿಲುಗಡೆ ಕಲ್ಪಿಸಿದ್ದು, ನಗರದ ಒಳಗಡೆ ಸಂಚಾರ ನಿಷೇಽಸಲಾಗಿದೆ. ಲಾಂಗ್ ರೂಟ್‌ಬಸ್ಸುಗಳು ರಿಂಗ್ ರೋಡ್ ಹಾಗೂ ಬಪಾಸ್ ಮುಖಾಂತರ ಸಂಚರಿಸಬೇಕು.

ಬೆಂಗಳೂರು ರಸ್ತೆಯಿಂದ ಬರುವ ಬಸ್ಸುಗಳಿಗೆ ಗಬ್ಬೂರ ಬಪಾಸ್ ಹತ್ತಿರ ತಾತ್ಕಾಲಿಕ ನಿಲುಗಡೆ ಕಲ್ಪಿಸಿದ್ದು, ಲಾಂಗ್ ರೂಟ್ ಬಸ್ಸುಗಳು ರಿಂಗ್ ರೋಡ್ ಹಾಗೂ ಬಪಾಸ್ ಮುಖಾಂತರ ಸಂಚರಿಸಬೇಕು. ಗದಗ ರಸ್ತೆಯಿಂದ ಬರುವ ಬಸ್ಸುಗಳಿಗೆ ಗದಗ ರಸ್ತೆ ರೈಲ್ವೆ ಲೋಕೋ ಶೆಡ್ ಹತ್ತಿರ ತಾತ್ಕಾಲಿಕ ನಿಲುಗಡೆ ಕಲ್ಪಿಸಿದ್ದು, ಲಾಂಗ್ ರೂಟ್ ಬಸ್ಸುಗಳು ರಿಂಗ್ ರಸ್ತೆ ಹಾಗೂ ಬಪಾಸ್ ಮುಖಾಂತರ ಸಂಚರಿಸಬೇಕು. ನವಲಗುಂದ ಕಡೆಯಿಂದ ಬರುವ ಬಸ್ಸುಗಳಿಗೆ ಆಕ್ಸಫರ್ಡ್ ಕಾಲೇಜ್ ರೈಲ್ವೆ ಬ್ರಿಡ್ಜ್ ಹತ್ತಿರ ತಾತ್ಕಾಲಿಕ ನಿಲುಗಡೆ ಕಲ್ಪಿಸಲಾಗಿದ್ದು, ಲಾಂಗ್ ರೂಟ್‌ಬಸ್ಸುಗಳು ರಿಂಗ್ ರಸ್ತೆ ಹಾಗೂ ಬೈಪಾಸ್ ಮುಖಾಂತರ ಸಂಚರಿಸಬೇಕು.

ಇದನ್ನೂ ಓದಿ:  ರಾಷ್ಟ್ರೀಯ ಯುವಜನೋತ್ಸವದಲ್ಲಿ ಕ್ರೀಡೆಗಳ ಮೆರಗು: ಮೈನವಿರೇಳಿಸಲಿವೆ 7 ರಾಜ್ಯಗಳ 7 ಆಟಗಳು

ಧಾರವಾಡ ಕಡೆಯಿಂದ ತಾರಿಹಾಳ ಬ್ರಿಡ್ಜ್ ಕಡೆಗೆ ಬರುವ ಲಾಂಗ್ ರೂಟ್ ಬಸ್ಸುಗಳಿಗೆ ತಾರಿಹಾಳ ಬ್ರಿಡ್ಜ್ ಹತ್ತಿರ ತಾತ್ಕಾಲಿಕ ನಿಲುಗಡೆ ಕಲ್ಪಿಸಿದ್ದು, ಲಾಂಗ್ ರೂಟ್ ಬಸ್ಸುಗಳು ಬಪಾಸ್ ಮುಖಾಂತರ ಸಂಚರಿಸಬೇಕು. ಹುಬ್ಬಳ್ಳಿ-ಧಾರವಾಡ ನಗರದ ಮಧ್ಯೆ ಸಂಚರಿಸುವ ಚಿಗರಿ ಬಸ್ಸುಗಳು, ಬೇಂದ್ರೆ ಬಸ್ಸುಗಳು, ನಗರ ಸಾರಿಗೆ ಬಸ್ಸುಗಳು ಧಾರವಾಡ ಕಡೆಯಿಂದ ಬಂದು ಕೆಎಂಸಿ ಆಸ್ಪತ್ರೆಯ ಒಳಗಡೆ ಹೋಗಿ ಟರ್ನ್ ಮಾಡಿಕೊಂಡು ಮರಳಿ ಧಾರವಾಡ ಕಡೆಗೆ ಹೋಗಬೇಕು.

ಇತರೆ ವಾಹನಗಳ ಮಾರ್ಗ ಬದಲಾವಣೆ: ಧಾರವಾಡದಿಂದ ಬರುವ ಲಘು ವಾಹನಗಳಿಗೆ ಪ್ರೆಸಿಡೆಂಟ್ ಹೋಟೆಲ್ ಮುಖಾಂತರ ಸಾಯಿನಗರ, ಜೆ.ಕೆ ಸ್ಕೂಲ್, ಗೋಪನಕೊಪ್ಪ ಮೂಲಕ ಕೇಶ್ವಾಪುರ ಅಥವಾ ಕುಸುಗಲ್ ಮೂಲಕ ಹಾಯ್ದು ಹೋಗಬೇಕು. ಧಾರವಾಡದಿಂದ ಬರುವ ಭಾರಿ ವಾಹನಗಳು ನವನಗರ ಒಳಗೆ ಹಾಯ್ದು ಗಾಮನಗಟ್ಟಿ ಕೈಗಾರಿಕಾ ವಸಾಹತು ಮೂಲಕ ತಾರಿಹಾಳ ಬೈಪಾಸ್ ಸೇರಬೇಕು. ನವಲಗುಂದ, ಗದಗ ಕಡೆಯಿಂದ ಬರುವ ಭಾರಿ ವಾಹನಗಳಿಗೆ ನಗರದಲ್ಲಿ ಸಂಚಾರ ನಿಷೇದಿಸಲಾಗಿದ್ದು, ರಿಂಗ್ ರಸ್ತೆ ಮೂಲಕ ಸಂಚರಿಸಬೇಕೆಂದು ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Wed, 11 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ