ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಮತ್ತೊಂದು ಸುತ್ತಿನ ಹೋರಾಟ ಘೋಷಿಸಿದ ಸ್ವಾಮೀಜಿ

ಧಾರವಾಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿ, ಲಿಂಗಾಯತರಿಗೆ ಒಬಿಸಿ ಮೀಸಲಾತಿಗಾಗಿ ಹೋರಾಟ ನಡೆದಿದೆ. ಈ ಸಂಬಂಧ ಬೆಳಗಾವಿದಲ್ಲಿಯೇ ಸಭೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಕೇಳಿಕೊಳ್ಳಲಾಗಿದೆ. ಆದರೆ ಅವರು ನಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಹೀಗಾಗಿ ಡಿ. 13ರಂದು ಬೆಳಗಾವಿದಲ್ಲಿ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಮತ್ತೊಂದು ಸುತ್ತಿನ ಹೋರಾಟ ಘೋಷಿಸಿದ ಸ್ವಾಮೀಜಿ
ಜಯಮೃತ್ಯುಂಜಯ ಸ್ವಾಮೀಜಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Dec 11, 2023 | 4:12 PM

ಧಾರವಾಡ, ಡಿಸೆಂಬರ್​​​ 11: ಪಂಚಮಸಾಲಿಗೆ 2ಎ ಮೀಸಲಾತಿ (2A Reservation), ಲಿಂಗಾಯತರಿಗೆ ಒಬಿಸಿ ಮೀಸಲಾತಿಗಾಗಿ ಹೋರಾಟ ನಡೆದಿದೆ. ಈ ಸಂಬಂಧ ಬೆಳಗಾವಿದಲ್ಲಿಯೇ ಸಭೆ ನಡೆಸುವಂತೆ ಸಿಎಂ ಸಿದ್ದರಾಮಯ್ಯಗೆ ಕೇಳಿಕೊಳ್ಳಲಾಗಿದೆ. ಆದರೆ ಅವರು ನಕಾರಾತ್ಮಕ ಸ್ಪಂದನೆ ಕೊಟ್ಟಿದ್ದಾರೆ. ಹೀಗಾಗಿ ಡಿ. 13ರಂದು ಬೆಳಗಾವಿದಲ್ಲಿ ಹೋರಾಟ ಮಾಡುತ್ತೇವೆ ಎಂದು ಕೂಡಲ ಸಂಗಮ್ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2ಎ ಮೀಸಲಾತಿ ರಾಜ್ಯ ಸರ್ಕಾರದ ಕೈಯಲ್ಲಿದೆ ಎಂದಿದ್ದಾರೆ.

ಒಬಿಸಿಗೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು. ಕೇಂದ್ರ ಸರ್ಕಾರ ಮೀಸಲಾತಿ ಘೋಷಿಸಬೇಕು. ಆದರೆ ಎರಡೂ ಕಡೆ ಎರಡು ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿವೆ. ಈಗ ಲೋಕಸಭೆ ಚುನಾವಣೆ ಬಂದಿದೆ. ಈ ಸಮಯದಲ್ಲಿ ನಮ್ಮ ಬೇಡಿಕೆ ಈಡೇರಬೇಕು. ಇಲ್ಲದೇ ಹೋದಲ್ಲಿ ಎರಡೂ ಪಕ್ಷಗಳಿಗೆ ಸಮಾಜದ ಜನ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಡಿ.13 ರಂದು ಬೆಳಗಾವಿಯಲ್ಲಿ ಪ್ರತಿಭಟನೆ: ಜಯಮೃತ್ಯುಂಜಯ ಸ್ವಾಮೀಜಿ

ಲೋಕಸಭೆಯಲ್ಲಿ 20ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಕನಸು ಕಾಣುತ್ತಿದ್ದಾರೆ. ಎರಡೂ ರಾಜಕೀಯ ಪಕ್ಷಗಳು ಕನಸು ಕಾಣುತ್ತಿವೆ. ಹೀಗಾಗಿ ಬೇಡಿಕೆ ಈಡೇರಿಸಲಿದ್ದಲ್ಲಿ ಎರಡೂ ಪಕ್ಷಗಳ ಮೇಲೆ‌ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ತಮ್ಮದೇ ಸಮಾಜದ ಮುಖಂಡರ ವಿರುದ್ಧ ಪಂಚಮಸಾಲಿ ಜಗದ್ಗುರು ಅಸಮಾಧಾನ

ಆರಂಭದಲ್ಲಿ ನಮ್ಮ ಸಮಾಜದ ಮುಖಂಡರು ಹುರುಪಿನಿಂದ ಮಾತನಾಡಿದ್ದರು. ಆದರೆ ಈಗ ಅವರು ಮೌನವಾಗಿದ್ದಾರೆ. ಜನರೇ ಈಗ ಅವರನ್ನು ಕೇಳುತ್ತಿದ್ದಾರೆ. ಮೊದಲಿನಂತೆ ಹುರುಪಿನಿಂದ ಮಾತಾನಾಡಿ ಎಂದು ಕೇಳುತ್ತಿದ್ದಾರೆ. ಈ ಸಂಬಂಧ ಶಾಸಕರುಗಳ ಸಭೆಯನ್ನೂ ಕರೆದು ಹೇಳಿದ್ದೇವೆ. ಹಿಂದೆ ಮಾಜಿ ಇದ್ದಾಗ ಹುರುಪು, ಆವೇಶದಿಂದ ಮಾತನಾಡಿದ್ದೀರಿ. 24 ಗಂಟೆಯಲ್ಲಿ ಮೀಸಲಾತಿ ಕೊಡುತ್ತೇವೆ ಎಂದಿದ್ದೀರಿ. ಈಗ ಅಧಿಕಾರಕ್ಕೆ ಬಂದಿದ್ದೀರಿ ಈಗ ಮೌನ ಯಾಕೆ ಅಂತಾ ಜನ ಕೇಳುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: 2ಎ ಮೀಸಲಾತಿಗೆ ಆಗ್ರಹ: ಇಷ್ಟಲಿಂಗ ಪೂಜೆ ಮೂಲಕ ಇಂದಿನಿಂದ ಮತ್ತೆ ಪಂಚಮಸಾಲಿ ಸಮುದಾಯ ಹೋರಾಟ

ಆಗ ಭಾವನಾತ್ಮಕವಾಗಿ ಮಾತನಾಡಿದ್ದರು. ಈಗ ಜನರೇ ಪ್ರಶ್ನೆ ಮಾಡುತ್ತಿದ್ದಾರೆ. ಅವರೂ ಈಗ ಆತ್ಮಾವಲೋಕನ ಮಾಡಿಕೊಳ್ಳುತ್ತಿದ್ದಾರೆ. ಬಸನಗೌಡ ಪಾಟೀಲ ಮಾತ್ರ ಒಂಟಿ ಸಲಗ ಹೋರಾಟ ಮಾಡಿದ್ದಾರೆ. ಈಗಿನ ಶಾಸಕರು ಅವರಂತೆ ಮಾಡಬೇಕಿದೆ. ಈಗ ವಿನಯ ಕುಲಕರ್ಣಿಗೆ ಜವಾಬ್ದಾರಿ ತೆಗೆದುಕೊಳ್ಳುವಂತೆ ಹೇಳಲಾಗಿದೆ. ಮಂತ್ರಿಯಾಗುವ ಕಸನು ಕಾಣಬೇಡ. ಸಮಾಜದ ಜೊತೆ ನೀ ಇರು ಅಂತಾ ಬಹಿರಂಗವಾಗಿ ಹೇಳಿದ್ದಾರೆ.

ಯತ್ನಾಳ ಅವರೇ ಕುಲಕರ್ಣಿಗೆ ಹೇಳಿದ್ದಾರೆ. ಅಧಿಕಾರ ಇವತ್ತು ಬರುತ್ತೇ ಹೋಗುತ್ತದೆ. ಆದರೆ ಸಮಾಜ ಶಾಶ್ವತ. ವಿನಯ ಕುಲಕರ್ಣಿ ಅಧಿವೇಶನದಲ್ಲಿ ಮಾತನಾಡುವುದಾಗಿ ಹೇಳಿದ್ದಾರೆ. ಕುಲಕರ್ಣಿ ಧ್ವನಿ ಎತ್ತಿದಾಗ ಉಳಿದವರು ಧ್ವನಿಗೂಡಿಸಬೇಕಿದೆ. ಧ್ವನಿಗೂಡಿಸಿ ಅಂತಾ ಹೇಳಿದ್ದೇನೆ. ಉಳಿದ ಶಾಸಕರಿಗೂ ಮಾತನಾಡಲು ಹೇಳಿದ್ದೇವೆ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ