AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು

ಗಣೇಶ ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಕರ್ನಾಟಕಕ್ಕೆ ಮತ್ತೊಂದು ಗಿಫ್ಟ್​ ನೀಡಿದೆ. ಅದೇ ವಂದೇ ಭಾರತ್ ರೈಲು. ಈ ರೈಲು ಎಲ್ಲಿಂದ ಎಲ್ಲಿಗೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು
ವಂದೇ ಭಾರತ್ ರೈಲು
ರಮೇಶ್ ಬಿ. ಜವಳಗೇರಾ
|

Updated on: Sep 09, 2024 | 6:53 PM

Share

ಹುಬ್ಬಳ್ಳಿ, (ಸೆಪ್ಟೆಂಬರ್ 09): ಹುಬ್ಬಳ್ಳಿ – ಪುಣೆ ಮಧ್ಯೆ ವಂದೇ ಭಾರತ್ ಎರಡನೇ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ಎರಡನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ, ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ.

ಅತಿ ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಟ್ಟದಲ್ಲಿ Mpox ಪ್ರಕರಣ ಏರಿಕೆ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ, ಸೂಚನೆ ನೀಡಿದ ಕೇಂದ್ರ

ವಂದೇ ಭಾರತ್ ಗೆ ಮನವಿ ಮಾಡಿದ್ದ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು.

ಕರ್ನಾಟಕದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು. ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು.

ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಪ್ರಧಾನಿಗೆ, ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ: ನಮ್ಮ ವಿಭಾಗದ ರೇಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ