ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು

ಗಣೇಶ ಹಬ್ಬಕ್ಕೂ ಮುನ್ನ ರೈತರಿಗೆ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿಗೆ ಬೆಂಬಲ ಬೆಲೆ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಕರ್ನಾಟಕಕ್ಕೆ ಮತ್ತೊಂದು ಗಿಫ್ಟ್​ ನೀಡಿದೆ. ಅದೇ ವಂದೇ ಭಾರತ್ ರೈಲು. ಈ ರೈಲು ಎಲ್ಲಿಂದ ಎಲ್ಲಿಗೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕಕ್ಕೆ ಕೇಂದ್ರದಿಂದ ಮತ್ತೊಂದು ಗಿಫ್ಟ್; ಹುಬ್ಬಳ್ಳಿ- ಪುಣೆ ನಡುವೆ 2ನೇ ವಂದೇ ಭಾರತ್ ರೈಲು
ವಂದೇ ಭಾರತ್ ರೈಲು
Follow us
|

Updated on: Sep 09, 2024 | 6:53 PM

ಹುಬ್ಬಳ್ಳಿ, (ಸೆಪ್ಟೆಂಬರ್ 09): ಹುಬ್ಬಳ್ಳಿ – ಪುಣೆ ಮಧ್ಯೆ ವಂದೇ ಭಾರತ್ ಎರಡನೇ ರೈಲು ಸಂಚಾರ ಆರಂಭಕ್ಕೆ ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ-ಪುಣೆ ಮಧ್ಯೆ ಎರಡನೇ ವಂದೇ ಭಾರತ್ ರೈಲು ಆರಂಭಿಸುವ ಶುಭ ಸಂದೇಶ ನೀಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ, ಹುಬ್ಬಳ್ಳಿ-ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರದ ಮತ್ತೊಂದು ಗಿಫ್ಟ್ ನೀಡಿದೆ.

ಅತಿ ಶೀಘ್ರದಲ್ಲೇ ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಧಾರವಾಡ ಸಂಸದರೂ ಆಗಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮಾಹಿತಿ ನೀಡಿದ್ದು, ಶೀಘ್ರದಲ್ಲೇ ವಂದೇ ಭಾರತ್ ರೈಲು ಸಂಚಾರದ ಉದ್ಘಾಟನೆ ದಿನ ಮತ್ತು ವೇಳಾ ಪಟ್ಟಿಯನ್ನು ರೈಲ್ವೆ ಇಲಾಖೆ ಪ್ರಕಟಿಸಲಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ: ಜಾಗತಿಕ ಮಟ್ಟದಲ್ಲಿ Mpox ಪ್ರಕರಣ ಏರಿಕೆ; ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ, ಸೂಚನೆ ನೀಡಿದ ಕೇಂದ್ರ

ವಂದೇ ಭಾರತ್ ಗೆ ಮನವಿ ಮಾಡಿದ್ದ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹುಬ್ಬಳ್ಳಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಕ್ರಮ ಕೈಗೊಳ್ಳುವಂತೆ ಅಶ್ವಿನಿ ವೈಷ್ಣವ್ ಅವರಿಗೆ ಜುಲೈ ಮೊದಲ ವಾರದಲ್ಲಷ್ಟೇ ಪತ್ರ ಬರೆದು ಮನವಿ ಮಾಡಿದ್ದರು.

ಕರ್ನಾಟಕದಲ್ಲಿ ಬೆಂಗಳೂರು ನಂತರ ಪ್ರಮುಖ ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕಿದೆ. ಅಲ್ಲದೇ, ವಂದೇ ಭಾರತ್ ರೈಲು ಸಂಚಾರದಿಂದ ಈ ಭಾಗದ ವಾಣಿಜ್ಯೋದ್ಯಮ, ಕೈಗಾರಿಕಾ ವಸಾಹತು ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂದು ಸಚಿವ ಜೋಶಿ ಕೇಂದ್ರದ ಗಮನ ಸೆಳೆದಿದ್ದರು. ಹುಬ್ಬಳ್ಳಿಯಿಂದ ಮುಂಬೈ ಸಂಪರ್ಕಕ್ಕೂ ಈ ಮಾರ್ಗ ಅತ್ಯಂತ ಪ್ರಮುಖವಾಗಲಿದೆ ಎಂಬುದನ್ನು ಜೋಶಿ ಅವರು ರೈಲ್ವೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟು ವಂದೇ ಭಾರತ್ ರೈಲು ಸಂಚಾರ ಆರಂಭಕ್ಕೆ ಒತ್ತಾಯಿಸಿದ್ದರು.

ಹುಬ್ಬಳ್ಳಿ-ಧಾರವಾಡದ ಜನರಿಗೆ ಹಬ್ಬದ ಈ ಶುಭ ಸಂದರ್ಭದಲ್ಲಿ ವಂದೇ ಭಾರತ್ ರೈಲು ಸಂಚಾರ ಸಿಹಿ ಸುದ್ದಿಯಾಗಿದ್ದು, ಶೀಘ್ರದಲ್ಲಿಯೇ ಹುಬ್ಬಳ್ಳಿ- ಪುಣೆ ನಡುವೆ ಹುಬ್ಬಳ್ಳಿಯ ಎರಡನೇಯ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚರಿಸಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮೂಲಕ ಸಂತಸ ಹಂಚಿಕೊಂಡಿದ್ದಾರೆ.

ಪ್ರಧಾನಿಗೆ, ರೈಲ್ವೆ ಸಚಿವರಿಗೆ ಜೋಶಿ ಧನ್ಯವಾದ: ನಮ್ಮ ವಿಭಾಗದ ರೇಲ್ವೆ ಅಭಿವೃದ್ಧಿಗೆ, ವಿಕಾಸಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ಮೂಲಕ ಮಹತ್ವದ ಕೊಡುಗೆ ನೀಡಿದ್ದು, ಉತ್ತರ ಕರ್ನಾಟಕ ಜನರ ಪರವಾಗಿ ಧನ್ಯವಾದ ಅರ್ಪಿಸುವೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ