AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮಂದಿರಕ್ಕೂ, 30 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಿರ್ಮಾಣವಾದ ರಾಮನ ದೇವಾಸ್ಥಾನಕ್ಕೂ ಇದೆ ಹೋಲಿಕೆ!

ಅಯೋಧ್ಯೆಯಲ್ಲಿ ಭ್ಯವ ರಾಮಮಂದಿರ ನಿರ್ಮಾಣವಾಗಿದೆ. ಈಗ ಸಿದ್ದವಾಗಿರುವ ರಾಮಮಂದಿರಕ್ಕೂ ಮತ್ತು ಹುಬ್ಬಳ್ಳಿಯಲ್ಲಿ 1990ರಲ್ಲಿ ನಿರ್ಮಾಣವಾಗಿದ್ದ ರಾಮ ಮಂದಿರಕ್ಕೂ ಬಹುತೇಕ ಹೋಲಿಕೆ ಇದೆ. ಆಶ್ಚರ್ಯವೆನಿಸಿದರು ಸತ್ಯ.

ಅಯೋಧ್ಯೆ ರಾಮಂದಿರಕ್ಕೂ, 30 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ನಿರ್ಮಾಣವಾದ ರಾಮನ ದೇವಾಸ್ಥಾನಕ್ಕೂ ಇದೆ ಹೋಲಿಕೆ!
ರಾಮಮಂದಿರ ಕಲಾಕೃತಿ
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on: Jan 21, 2024 | 3:24 PM

Share

ಹುಬ್ಬಳ್ಳಿ, ಜನವರಿ 21: ಅಯೋಧ್ಯೆಯಲ್ಲಿ (Ayodhya) ಭ್ಯವ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಈಗ ಸಿದ್ದವಾಗಿರುವ ರಾಮಮಂದಿರಕ್ಕೂ ಮತ್ತು ಹುಬ್ಬಳ್ಳಿಯಲ್ಲಿ 1990ರಲ್ಲಿ ನಿರ್ಮಾಣವಾಗಿದ್ದ ರಾಮ ಮಂದಿರಕ್ಕೂ ಬಹುತೇಕ ಹೋಲಿಕೆ ಇದೆ. ಆಶ್ಚರ್ಯವೆನಿಸಿದರು ಸತ್ಯ. ಅದು 1990ರ ಕಾಲಘಟ್ಟ ಇಡೀ ದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹೋರಾಟ, ಶೋಭಾಯಾತ್ರೆ ಆರಂಭವಾಗಿದ್ದವು. ಹಾಗೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಶೋಭಾಯಾತ್ರೆ ನಡೆದಿತ್ತು. ಹುಬ್ಬಳ್ಳಿಯಲ್ಲಿ ನಡೆದ ಶೋಭಾಯಾತ್ರೆಯಲ್ಲಿ ರಾಮಮಂದಿರ ಪರಿಕಲ್ಪನೆಯೊಂದಿಗೆ ಕಲಾಕೃತಿಯನ್ನು ನಿರ್ಮಾಣ ಮಾಡಿ ಮೆರವಣಿಗೆ ಮಾಡಲಾಗಿತ್ತು.

ಈ ರಾಮಮಂದಿರ ಕಲಾಕೃತಿಯನ್ನು ಥರ್ಮಕೋಲ್ ಮತ್ತು ಕಾರ್ಡ್ ಶೀಟ್ ಬಳಸಿ ಕಲಾವಿದ ಮಂಜುನಾಥ್ ರೇವಣಕರ್ ಎಂಬುವರು ನಿರ್ಮಾಣ ಮಾಡಿದ್ದಾರೆ. 1990ರಲ್ಲಿ ಥರ್ಮಾಕೋಲ್ ಮತ್ತು ಕಾರ್ಡ್ ಶೀಟ್​ನಿಂದ ತಯಾರಾದ ರಾಮಮಂದಿರ ಕಲಾಕೃತಿಗೂ, ಇದೀಗ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರದ ರೀತಿ ಹೋಲುತ್ತದೆ.

ಥರ್ಮಾಕೋಲ್ ಮತ್ತು ಕಾರ್ಡ್ ಶೀಟ್​ನಿಂದ ತಯಾರಾದ ಹುಬ್ಬಳ್ಳಿಯ ರಾಮಮಂದಿರ ನಾಲ್ಕು ಅಡಿ ಎತ್ತರ, ಮೂರು ಅಡಿ ಉದ್ದವಿದೆ. ಕಲಾಕೃತಿಯನ್ನು ಸುಮಾರು 25 ದಿನಗಳ ಕಾಲ ನಿರ್ಮಾಣ ಮಾಡಲಾಗಿದೆ. ಇದೀಗ ರಾಮಮಂದಿರ ನಿರ್ಮಾಣದ ಬೆನ್ನಲ್ಲೆ 30 ವರ್ಷಗಳ ಹಿಂದಿನ ಕಲಾಕೃತಿ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಶಿವಮೊಗ್ಗ: ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ

ಬಾಬ್ರಿ ಮಸೀದಿ ಧ್ವಂಸದ ಬಳಿಕ 1992 ರಲ್ಲಿ ರಾಮಮಂದಿರದ ಕಲಾಕೃತಿಯನ್ನು ಹುಬ್ಬಳ್ಳಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಗಿತ್ತು. 30 ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ಕಲಾಕೃತಿಯನ್ನು ಕಲಾವಿದ ಮಂಜುನಾಥ ತಂದೆ ಬಾಲಗಂಗಾಧರಯ್ಯ ಅಚ್ಚುಕಟ್ಟಾಗಿ ಕಾಪಾಡಿಕೊಂಡು ಬಂದಿದ್ದಾರೆ.

ಈ ಬಗ್ಗೆ ಬಾಲಗಂಗಾಧರಯ್ಯ ಮಾತನಾಡಿ, ನಮಗೆ ಬಹಳ ಖುಷಿಯಾಗುತ್ತಿದೆ, ಹೆಮ್ಮೆ ಇದೆ ಎಂದರು. ಇನ್ನು ರಾಮಮಂದಿರ ಕಲಾಕೃತಿ ನಿರ್ಮಾಣ ಮಾಡಿರುವ ಕಲಾವಿದ ಮಂಜುನಾಥ ಸದ್ಯ ಜೈಪುರದಲ್ಲಿ ವಾಸ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ರಾಮಜನ್ಮಭೂಮಿ ಹೋರಾಟದ ನೆನಪಿಗಾಗಿ ರಾಮಮಂದಿರದ ಪರಿಕಲ್ಪನೆಯ ಕಲಾಕೃತಿಯನ್ನು ಇನ್ನೂ ಕಾಪಾಡಿಕೊಂಡು ಬರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!