AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ಧಾರವಾಡದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.

ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ
ಲಾರಿ-ಕಾರು ನಡುವೆ ಭೀಕರ ಅಪಘಾತ,
ರಮೇಶ್ ಬಿ. ಜವಳಗೇರಾ
|

Updated on:Feb 23, 2023 | 10:41 PM

Share

ಧಾರವಾಡ: ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಐವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಇಂದು(ಫೆಬ್ರುವರಿ 23) ಸಂಜೆ ಧಾರವಾಡ(Dharwad) ತಾಲೂಕಿನ ತೇಗೂರ ಗ್ರಾಮದ ಬಳಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸಾವು ಒಟ್ಟು ಐದು ಜನ ಮೃತಪಟ್ಟಿದ್ದಾರೆ. ಲಾರಿ ಹಿಂಬದಿಗೆ ಕಾರು ಗುದ್ದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ. ಇನ್ನು ಪಕ್ಕದಲ್ಲಿ ಹೊರಟಿದ್ದ ಓರ್ವ ಪಾದಚಾರಿಗೂ ಕಾರು ತಾಗಿ ಆತನೂ ದುರಂತ ಅಂತ್ಯಕಂಡಿದ್ದಾನೆ.

ಇನ್ನು ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬೆಳಗಾವಿಯಿಂದ ಧಾರವಾಡ ಕಡೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಸ್ಥಳಕ್ಕೆ ಗರಗ್ ಠಾಣೆ ಪೊಲೀಸದು ದೌಡಾಯಿಸಿ ಪರಿಶೀಲನೆ ನಡೆಸಿದರು.

ಅಗ್ನಿಪಥ್ ನಲ್ಲಿ ನೇಮಕಗೊಂಡಿದ್ದ ಯುವಕ ಮಂಜುನಾಥ್ ಮುದ್ದೋಜಿಯನ್ನು ಹುಬ್ಬಳ್ಳಿಗೆ ಬಿಟ್ಟು ವಾಪಸ್​ ಬರುವಾಗ ಒಮ್ಮೆಲೇ ಪಾದಚಾರಿ ಈರಣ್ಣನನ್ನು ತಪ್ಪಿಸಲು ಹೋಗಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ ಎಂಬ ಮಾಹಿತಿ ತಿಳಿದುಬಂದಿದೆ.

ಮೃತ ದುರ್ವೈವಿಗಳು

ನಾಗಪ್ಪ ಈರಪ್ಪ ಮುದ್ದೋಜಿ(29), ಅವರಾದಿ ಗ್ರಾಮದ ಮಹಂತೇಶ್ ಬಸಪ್ಪ ಮುದ್ದೊಜಿ(40), ಬಸವರಾಜ್ ಶಿವಪುತ್ರಪ್ಪ ನರಗುಂದ(35), ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ, ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ (35) (ಪಾದಚಾರಿ)

ಗಾಯಾಳುಗಳು:

ಶ್ರವಣಕುಮಾರ್ ಬಸವರಾಜ ನರಗುಂದ, ಮಡಿವಾಳಪ್ಪ ರಾಜು ಅಳ್ನಾವರ (22), ಪ್ರಕಾಶ್ ಗೌಡ ತಂದೆ ಶಂಕರಗೌಡ ಪಾಟೀಲ್ (22) ಗಾಯಗೊಂಡವರು. ಈ ಮೂವರನ್ನು ಚಿಕಿತ್ಸೆಗಾಗಿ ಕಿಮ್ಸ್ ಹುಬ್ಬಳ್ಳಿಗೆ ರವಾನಿಸಲಾಗಿದೆ.

ಧಾರವಾಡದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 9:41 pm, Thu, 23 February 23

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ