AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು

ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನವನಗರ ಪೊಲೀಸ್ ಠಾಣೆಯ ಏಳು ಜನರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣ; ಇನ್ಸ್ಪೆಕ್ಟರ್ ಸೇರಿ ಏಳು ಜನ ಅಮಾನತು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Oct 10, 2021 | 9:46 AM

Share

ಹುಬ್ಬಳ್ಳಿ: ಪೊಲೀಸರಿಂದಲೇ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇನ್ಸ್ಪೆಕ್ಟರ್ ಸೇರಿ ಏಳು ಜನ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿ- ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಕಳೆದ ವಾರ ಖಚಿತ ಮಾಹಿತಿ ಮೇರೆಗೆ ನವನಗರ ಠಾಣೆ ಪೊಲೀಸರು ಗಾಂಜಾ ಮಾರಾಟಗಾರನ್ನ ಸೆರೆಹಿಡಿದಿದ್ದರು. ಆದರೆ ನಂತರ ಕೇಸ್ ದಾಖಲಿಸದೇ ಹಣ ಪಡೆದು, ಆರೋಪಿಗಳ‌ನ್ನ ಬಿಟ್ಟು ಕಳುಹಿಸಿದ್ದರು.  ಜೊತೆಗೆ ಸೀಜ್ ಮಾಡಿದ್ದ ೧ ಕೆಜಿ ಗಾಂಜಾವನ್ನ ಪೊಲೀಸರೇ ಮಾರಾಟ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿತ್ತು. ಹೀಗಾಗಿ ಡಿಸಿಪಿ ನೈತೃತ್ವದಲ್ಲಿ ತನಿಖೆ ನಡೆಸಲಾಗಿತ್ತು. ಅಂತಿಮವಾಗಿ ನವನಗರ ಠಾಣೆ ಇನ್ಸ್ಪೆಕ್ಟರ್ ವಿಶ್ವನಾಥ ಚೌಗಲೆ, ಎಎಸ್ಐ ವಿಕ್ರಮ ಪಾಟೀಲ್ ಸೇರಿದಂತೆ ಏಳು ಜನರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಚಳ್ಳಕೆರೆಯ ಕೂನಿಗರಹಳ್ಳಿ ಗ್ರಾಮದಲ್ಲಿ ಗಾಂಜಾ ಮಾರುತ್ತಿದ್ದ ಬಸಮ್ಮ ಬಂಧನ: ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕೂನಿಗರಹಳ್ಳಿ ಗ್ರಾಮದಲ್ಲಿ ಗಾಂಜಾ ಮಾರುತ್ತಿದ್ದವರನ್ನು ಬಂಧಿಸಲಾಗಿದೆ. ಬಂಧಿತರನ್ನು ಬಸಮ್ಮ ಎಂದು ಗುರುತಿಸಲಾಗಿದ್ದು, 6 ಗಾಂಜಾ ಗಿಡ, 1.5 ಕೆಜಿ ಗಾಂಜಾವನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಅಬಕಾರಿ ಇಲಾಖೆ ಉಪ ಅಧೀಕ್ಷಕ ಕೃಷ್ಣ ಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

ಇದನ್ನೂ ಓದಿ:

ಚಿಕ್ಕಬಳ್ಳಾಪುರ: ಸ್ನೇಹಿತರಿಗೆ ಚಾಲೆಂಜ್ ಹಾಕಿ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು; ಇನ್ನೂ ಸಿಗದ ಮೃತದೇಹ

ವಿಶ್ವವಿಖ್ಯಾತ ಮೈಸೂರು ದಸರಾ 2021: ಜಂಬೂಸವಾರಿಗೆ ದಿನಗಣನೆ, ಈ‌ ಬಾರಿ 6 ಸ್ತಬ್ಧಚಿತ್ರಗಳಿಗೆ ಅವಕಾಶ

Viral Video: ಚಲಿಸುತ್ತಿರುವ ಬೈಕ್​ ಹತ್ತಿ ಸವಾರನ ಅಪಾಯಕಾರಿ ಸ್ಟಂಟ್; ಮುಂದೇನಾಯ್ತು? ವಿಡಿಯೋ ನೋಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ