AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಪಟಾಕಿ ಗೋದಾಮು ಮೇಲೆ 70 ಅಧಿಕಾರಿಗಳಿಂದ ದಾಳಿ: ಕೋಟ್ಯಂತರ ಮೌಲ್ಯದ ಪಟಾಕಿ ಸಂಗ್ರಹ

ಅತ್ತಿಬೆಲೆ ದುರಂತದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು ಇಂದು ಹುಬ್ಬಳ್ಳಿಯ 15 ಕಿಲೋ ಮೀಟರ್ ದೂರದಲ್ಲಿರುವ ಶೆರೆವಾಡ ಗ್ರಾಮದಲ್ಲಿ ಪಟಾಕಿ ಗೋಡೌನ್ ಮೇಲೆ ಬರೋಬ್ಬರಿ 70 ಅಧಿಕಾರಿಗಳ ತಂಡ ದಾಳಿ ಮಾಡಿದ್ದಾರೆ. 72 ಟನ್ ಪಟಾಕಿ ಪತ್ತೆಯಾಗಿದ್ದು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಪಟಾಕಿ ಗೋದಾಮು ಮೇಲೆ 70 ಅಧಿಕಾರಿಗಳಿಂದ ದಾಳಿ: ಕೋಟ್ಯಂತರ ಮೌಲ್ಯದ ಪಟಾಕಿ ಸಂಗ್ರಹ
ಸೀಜ್​ ಮಾಡಲಾದ ಪಟಾಕಿ
ಶಿವಕುಮಾರ್ ಪತ್ತಾರ್
| Edited By: |

Updated on: Oct 14, 2023 | 7:34 PM

Share

ಹುಬ್ಬಳ್ಳಿ, ಅಕ್ಟೋಬರ್​​​ 14: ಹುಬ್ಬಳ್ಳಿಯ 15 ಕಿಲೋ ಮೀಟರ್ ದೂರದಲ್ಲಿರುವ ಶೆರೆವಾಡ ಗ್ರಾಮದಲ್ಲಿ ಪಟಾಕಿ (firecracker) ಗೋಡೌನ್ ಮೇಲೆ ಇಂದು ಬರೋಬ್ಬರಿ 70 ಅಧಿಕಾರಿಗಳ ತಂಡ ದಾಳಿ ಮಾಡಿದ್ದಾರೆ. ಅಕ್ರಮವಾಗಿ ಪಟಾಕಿ ಸಂಗ್ರಹ ಆರೋಪದಡಿ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ವಾಯುಮಾಲಿನ್ಯ, ಅಗ್ನಿ ಶಾಮಕ ದಳದ ಜಂಟಿ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶೆರೆವಾಡ ಗ್ರಾಮದ ಸರ್ವೇ ನಂಬರ್ 458 ರಲ್ಲಿ ಆರ್ ಆರ್ ಹೆಬಸೂರ ಅವರಿಗೆ ಸೇರಿದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, 72 ಟನ್ ಪಟಾಕಿ ಪತ್ತೆ ಆಗಿದೆ.

ಅತ್ತಿಬೆಲೆ ಪಟಾಕಿ‌ ದುರಂತದಿಂದ ಜಿಲ್ಲೆಯ‌ ಕೆಲವು ಕಡೆ ಅಧಿಕಾರಿಗಳು ದಾಳಿ‌ ಮಾಡಿದ್ದಾರೆ. ಆದರೆ ಧಾರವಾಡ ಜಿಲ್ಲೆಯಲ್ಲಿ‌ ಇಂದು ಅತೀ ದೊಡ್ಡ ದಾಳಿಯನ್ನು ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ‌. ಆರ್ ಆರ್ ಹೆಬಸೂರ ಅವರು ಲೈಸೆನ್ಸ್ ‌ಪಡೆದು ಪಟಾಕಿ‌ ಸಂಗ್ರಹ ಮಾಡಿದ್ದರು. ಕೆಲವು ನ್ಯೂನ್ಯತೆ ಕಂಡು‌ ಬಂದಿರೋ‌ ಕಾರಣಕ್ಕೆ ಪಟಾಕಿಯನ್ನ ಬೇರ್ಪಡಿಸಿ ಇಡಲಾಗದೆ. ಕೆಲ‌ ಪಟಾಕಿಗಳ ಮೇಲೆ ಯಾವದೇ ಅಧಿಕೃತ ನಂಬರ್ ಇರದ ಕಾರಣ ಆ ಪಟಾಕಿಯನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಇದನ್ನೂ ಓದಿ: ರಾಯಚೂರು ಜಿಲ್ಲೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಮಳಿಗೆಗಳ ಮೇಲೆ ದಾಳಿ; ರೂ. 24 ಲಕ್ಷ ಮೌಲ್ಯದ ಪಟಾಕಿ ಜಪ್ತಿ

ಹೆಬಸೂರ ಅವರು ಸಂಗ್ರಹ ಮಾಡಿದ್ದು ಬರೋಬ್ಬರಿ 72 ಟನ್ ಪಟಾಕಿ. 200 ಟನ್ ಸಂಗ್ರಹ ಮಾಡಲು ಮಾಲೀಕರು ಲೈಸೆನ್ಸ್ ಪಡೆದಿದ್ದಾರಂತೆ. ಆದರೆ ಇಲ್ಲಿರುವ ಕೆಲ ಪಟಾಕಿಗಳ ಮೇಲೆ ಗ್ರೀನ್ ಪಟಾಕಿ ಎಂದು‌ ನಮೂದಿಸಿದ್ದರು ಅದಕ್ಕೆ ಯಾವದೇ ಅಧಿಕೃತ ನಂಬರ್ ಇಲ್ಲ. ಇದು ಅಧಿಕಾರಿಗಳ ಅನುಮಾನಕ್ಕೆ ಕಾರಣವಾಗಿದೆ. ಅದೇ ಕಾರಣಕ್ಕೆ 72 ಟನ್ ಪಟಾಕಿಯಲ್ಲಿ ಯಾವ ಪಟಾಕಿ‌ ಬಾಕ್ಸ್ ಮೇಲೆ ನಂಬರ್ ಇಲ್ಲವೋ ಅಂತಹ ಸುಮಾರು 20 ಟನ್ ಪಟಾಕಿಯನ್ನು ಸೀಜ್ ಮಾಡಲಾಗಿದೆ.

ಇದನ್ನೂ ಓದಿ: ಪಟಾಕಿ ಅಂಗಡಿ ಮಾಲೀಕರ ಕಳ್ಳಾಟ: 1 ಲಾರಿ, 3 ಕ್ಯಾಂಟರ್​ಗಳಲ್ಲಿದ್ದ ಪಟಾಕಿ ಜಪ್ತಿ ಮಾಡಿದ ಪೊಲೀಸ್​

ಹೆಬಸೂರ ಅವರ ಗೋಡೌನ್ ನಿಂದಲೇ ಬಹುತೇಕ ಉತ್ತರ ಕರ್ನಾಟಕಕ್ಕೆ ಪಟಾಕಿ‌ ಸರಬರಾಜು ಆಗುತ್ತಿದೆ ಎನ್ನಲಾಗಿದೆ. ಅಂದಾಜು ಕೋಟಿ ಮೌಲ್ಯದ ಪಟಾಕಿ ಅಕ್ರಮವಾಗಿ ಸಂಗ್ರಹ ಮಾಡಿರೋ ಬಗ್ಗೆ ಗೋಡೌನ್ ಮಾಲೀಕರು ಹೇಳೋದೆ ಬೇರೆ. ನಾವು ಅನುಮತಿ ಪಡೆದು ಪಟಾಕಿ‌ ಸಂಗ್ರಹ ಮಾಡಿದ್ದೇವೆ, ಆದರೆ ನಮಗೆ ಕೊಡೋರು ನಮಗೆ ಅಧಿಕೃತ ನಂಬರ್ ಬಗ್ಗೆ ಮಾಹಿತಿ ನೀಡಿಲ್ಲ, ಅವರ ಮೇಲೂ ಕೇಸ್ ದಾಖಲಿಸಬೇಕು ಅಂತಾರೆ.

ಅತ್ತಿಬೆಲೆ ದುರಂತದ ಬಳಿಕ ಅಧಿಕಾರಿಗಳು ಎಚ್ಚೆತ್ತು ಅಕ್ರಮ ಪಟಾಕಿ ಸಂಗ್ರಹ ಗೋಡೌನ್ ಮೇಲೆ ದಾಳಿ ಮಾಡಿದ್ದಾರೆ‌. ಮಾಲೀಕರು ನಾವು ತಪ್ಪು ಮಾಡಿಲ್ಲ ಅಂತಿದ್ರೆ, ಇತ್ತ ಅಧಿಕಾರಿಗಳು ಪೊಲೀಸರು ಮುಂದಿನ‌ ಕ್ರಮ ಕೈಗೊಳ್ತಾರೆ ಎಂದು ಹೇಳುತ್ತಿದ್ದಾರೆ. ಪಟಾಕಿ‌ ಸಂಗ್ರಹ ನೋಡಿದ್ರೆ, ಮತ್ತೊಂದು ದೊಡ್ಡ ದುರಂತ ತಪ್ಪಿದಂತಾಗಿದೆ ಅಂತಾ ಹೇಳಬಹುದು. ಇದೀಗ ಮಾಲೀಕರ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರ ತನಿಖೆಯ ನಂತರ ಪಟಾಕಿ ಅಕ್ರಮವೋ, ಸಕ್ರಮವೋ ಅನ್ನೋದು ಬಯಲಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ