AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳು ಕೊಡುತ್ತೇನೆಂದ 71 ವರ್ಷದ ನಿವೃತ್ತ ನೌಕರ: ನಾಗ್ಪುರದಿಂದ ಹುಬ್ಬಳ್ಳಿಗೆ ಮಹಿಳೆ: ಮುಂದೇನಾಯ್ತು..!

ಕೆಲವೊಮ್ಮೆ ನಮ್ಮ ಊಹೆಗೂ ಮೀರಿದ ವಿಚಿತ್ರ ಘಟನೆಗಳು ನಡೆಯುತ್ತಿರುತ್ತದೆ. 70 ವರ್ಷದ ಶ್ರೀಮಂತ ವ್ಯಕ್ತಿಯ ಜೊತೆಗೆ 21 ರ ಯುವತಿ ಮದುವೆ, ತಂದೆಯೇ ಮಗಳನ್ನು ಮದುವೆಯಾಗುವ ಪದ್ದತಿ ಸೇರಿದಂತೆ ಅನೇಕ ಚಿತ್ರ ವಿಚಿತ್ರ ಸನ್ನಿವೇಷಗಳು ಜರುಗುತ್ತವೆ. ಅದರಂತೆ ಇದೀಗ ‘ನಾಗ್ಪುರ ಮಹಿಳೆಗೆ ಮೋಸ ಮಾಡಿದ 71 ವರ್ಷದ ನಿವೃತ್ತ ನೌಕರನಿಗೆ ಧರ್ಮದೇಟು ಕೊಟ್ಟ ಘಟನೆ ಹುಬ್ಬಳ್ಳಿಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಬಾಳು ಕೊಡುತ್ತೇನೆಂದ 71 ವರ್ಷದ ನಿವೃತ್ತ ನೌಕರ: ನಾಗ್ಪುರದಿಂದ ಹುಬ್ಬಳ್ಳಿಗೆ ಮಹಿಳೆ:  ಮುಂದೇನಾಯ್ತು..!
ನಿವೃತ್ತ ರೈಲ್ವೆ ನೌಕರ ರಾಮಯ್ಯ, ರಾಧಿಕಾ
ಶಿವಕುಮಾರ್ ಪತ್ತಾರ್
| Edited By: |

Updated on: Oct 10, 2024 | 7:24 PM

Share

ಹುಬ್ಬಳ್ಳಿ, ಅ.10: ಹಲವು ಊಹೆಗೂ ಮೀರಿದ ವಿಚಿತ್ರ, ವಿಶೇಷ ಘಟನೆಗಳು ನಡೆಯುತ್ತಿರುತ್ತದೆ. 70 ವರ್ಷದ ಶ್ರೀಮಂತ ವ್ಯಕ್ತಿಯ ಜೊತೆಗೆ 21 ರ ಯುವತಿ ಮದುವೆ, ತಂದೆಯೇ ಮಗಳನ್ನು ಮದುವೆಯಾಗುವ ಪದ್ದತಿ ಸೇರಿದಂತೆ ಅನೇಕ ಚಿತ್ರ ವಿಚಿತ್ರ ಸನ್ನಿವೇಷಗಳು ಜರುಗುತ್ತವೆ. ಅದರಂತೆ ಇದೀಗ ‘ನನಗೆ ಡಿವೋರ್ಸ್ ಆಗಿದೆ ಎಂದು ನಂಬಿಸಿ ಮಹಿಳೆಗೆ ಮೋಸ ಮಾಡಿದ 71 ವರ್ಷದ ನಿವೃತ್ತ ನೌಕರನಿಗೆ ಧರ್ಮದೇಟು ಕೊಟ್ಟ ಘಟನೆ ಹುಬ್ಬಳ್ಳಿ(Hubli)ಯ ಹೊಸ ಬಸ್ ನಿಲ್ದಾಣದ ಬಳಿ ನಡೆದಿದೆ.

ಮಹಿಳೆಗೆ ನಂಬಿಸಿ ಹಣ ದೋಚಿದ 71 ವರ್ಷದ ನಿವೃತ್ತ ನೌಕರ

ಹೌದು, ನಾಗ್ಪುರ ಮೂಲದ ರಾಧಿಕಾ ಎಂಬ ಮಹಿಳೆಗೆ ನಂಬಿಸಿ ಮೋಸ ಮಾಡಿದ ನಿವೃತ್ತ ರೈಲ್ವೆ ನೌಕರ ರಾಮಯ್ಯ ಎಂಬಾತನಿಗೆ ಧರ್ಮದೇಟು ಕೊಡಲಾಗಿದೆ. ‘ನನಗೆ ಡಿವೋರ್ಸ್ ಆಗಿದೆ, ನಿನಗೆ ಬಾಳು ಕೊಡುತ್ತೇನೆ ಎಂದು ರಾಧಿಕಾಳಿಗೆ ನಿವೃತ್ತ ನೌಕರ ಚನಂಬಿಸಿದ್ದ. ಬಳಿಕ ಆಕೆಯಿಂದ ಹಣವನ್ನು ದೋಚಿದ್ದಾನೆ. ಹೀಗಾಗಿ ಇಂದು ನಾಗ್ಪುರದಿಂದ  ಹುಬ್ಬಳ್ಳಿಗೆ ಬಂದಿದ್ದ ರಾಧಿಕಾ ಬಳಿ ಮತ್ತೆ ಹಣ ಕೇಳಿದ್ದಾನೆ. ಇದರಿಂದ ಮತ್ತಷ್ಟು ರೊಚ್ಚಿಗೆದ್ದ ಮಹಿಳೆ ರಾಮಯ್ಯನಿಗೆ ನಡು ರಸ್ತೆಯಲ್ಲಿಯೇ ಧರ್ಮದೇಟು ನೀಡಿದ್ದಾಳೆ. ಬಳಿಕ ಆತನನ್ನು ಕರೆದುಕೊಂಡು ಹೋಗಿ ಹುಬ್ಬಳ್ಳಿ ಉಪನಗರ ಪೊಲೀಸರಿಗೆ ಒಪ್ಪಿಸಿದ್ದಾಳೆ.

ಇದನ್ನೂಓದಿ:ಲವ್,ಸೆಕ್ಸ್,ದೋಖಾ: ಗಂಡ ಬಿಟ್ಟಿದ್ದ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕಾರು ಚಾಲಕನಿಂದ ಮೋಸ

ಇಬ್ಬರು ಪರಿಚಯವಾಗಿದ್ದೇಗೆ?

ಇನ್ನು ಇಬ್ಬರ ನಡುವೆ ಪರಿಚಯ ಹೇಗೆ ಆಯಿತು ನೋಡುವುದಾದರೆ, ‘ಮಹಿಳೆ ರಾಧಿಕಾಗೆ ಹುಬ್ಬಳ್ಳಿಯಲ್ಲಿ ಪರಿಚಯಸ್ಥರು ಇರುತ್ತಾರೆ. ಹೀಗಾಗಿ ಅವಾಗವಾಗ ರಾಧಿಕಾ ಅವರು ನಾಗ್ಪುರದಿಂದ ಹುಬ್ಬಳ್ಳಿಗೆ ಆಗಮಿಸಿ, ಕೆಲದಿನಗಳ ಕಾಲ ಇಲ್ಲಿಯೇ ವಾಸ್ತವ್ಯ ಹೂಡಿ ಹೋಗುತ್ತಿರುತ್ತಾರೆ. ಈ ವೇಳೆ ಹುಬ್ಬಳ್ಳಿಯ ರಾಧಿಕಾ ಪರಿಚಯಸ್ಥರ ಮನೆಗೆ ನಾಗ್ಪುರ ಕೂಡ ಆಗಮಿಸಿರುತ್ತಾನೆ. ಈ ವೇಳೆ ಇಬ್ಬರಿಗೂ ಪರಿಚಯವಾಗಿ, ಕೆಲ ದಿನಗಳ ನಂತರ ರಾಧಿಕಾ ಬಳಿ, ‘ ನನಗೆ ಡಿವೋರ್ಸ್ ಆಗಿದೆ. ನಿನಗೆ ಬಾಳು ಕೊಡುತ್ತೇನೆ ಎಂದು ನಂಬಿಸಿ ಹಣ ಪೀಕಲು ಶುರು ಮಾಡುತ್ತಾನೆ. ಸಧ್ಯ ಆತನನ್ನು ಹುಬ್ಬಳ್ಳಿ ಪೊಲೀಸರಿಗೆ ಒಪ್ಪಿಸಿದ್ದು, ಹೆಚ್ಚಿನ ಮಾಹಿತಿ ತನಿಖೆ ಬಳಿಕ ಗೊತ್ತಾಗಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ