AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ ಎರಡು ವರ್ಷದ ಬಾಲಕ; ಆ ಸಾಧನೆ ಏನು?

ಪಟಾ ಪಟ್ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸುವ ತೊದಲು ನುಡಿಯ ಕಂದನ ಹೆಸರು ಅಥರ್ವ ಎಸ್. ಅಥರ್ವ್ ಎಸ್ ವಾಣಿಜ್ಯನಗರಿ ಹುಬ್ಬಳ್ಳಿ ಶಿರೂರ್ ಪಾರ್ಕ್ ನಿವಾಸಿಯಾದ ಪ್ರತಿಭಾ ಹಾಗೂ ಶರಣ್ ದಂಪತಿಗಳ ಮಗ.

ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ ಎರಡು ವರ್ಷದ ಬಾಲಕ; ಆ ಸಾಧನೆ ಏನು?
ತಂದೆ- ತಾಯಿ ಜೊತೆ ಅಥರ್ವ್​ ಎಸ್
TV9 Web
| Edited By: |

Updated on: Apr 07, 2022 | 2:33 PM

Share

ಹುಬ್ಬಳ್ಳಿ: ಹುಟ್ಟಿದ ಮಗು (Baby) ತನ್ನ ಒಂದೊಂದು ಕಾರ್ಯ ಆರಂಭಿಸಿದರೆ ಹೆತ್ತವರಿಗೆ ಆಗೋ ಸಂತೋಷ ಅಷ್ಟಿಷ್ಟಲ್ಲ. ಇನ್ನು ಇಡೀ ಜಗತ್ತೇ ತಿರುಗಿ ನೋಡುವಂತೆ ಸಾಧನೆ ಮಾಡಿದರೆ ಅವರ ಖುಷಿಗೆ ಪಾರವೇ ಇರಲ್ಲ. ಜಿಲ್ಲೆಯಲ್ಲಿ ಮಗುವೊಂದು ಇನ್ನೂ ಅಮ್ಮನ (Mother) ಮಡಿಲಲ್ಲಿ ಆಟ ಆಡುವ ವಯಸ್ಸು. ಆದರೆ ಆತನ ಜ್ಞಾನ ನೋಡಿದರೇ ಅಮ್ಮನಿಗೆ ಅಚ್ಚರಿ ಆಗುತ್ತದೆ. ತನ್ನ ಅಪಾರ ಜ್ಞಾಪಕ ಶಕ್ತಿಯಿಂದ ಮಗು ದಾಖಲೆ ಮಾಡಿದೆ. ಪಟಾ ಪಟ್ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸುವ ತೊದಲು ನುಡಿಯ ಕಂದನ ಹೆಸರು ಅಥರ್ವ್​ ಎಸ್. ಅಥರ್ವ್ ಎಸ್ ವಾಣಿಜ್ಯನಗರಿ ಹುಬ್ಬಳ್ಳಿ ಶಿರೂರ್ ಪಾರ್ಕ್ ನಿವಾಸಿಯಾದ ಪ್ರತಿಭಾ ಹಾಗೂ ಶರಣ್ ದಂಪತಿಗಳ ಮಗ. ತನ್ನ ಅಗಾಧವಾದ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ್ದಾನೆ.

ಎರಡು ವರ್ಷದ ಈ ಬಾಲಕ ಜನರಲ್ ನಾಲೆಡ್ಜ್, ಅಂಕಿ ಸಂಖ್ಯೆಗಳನ್ನು ಅಳ್ಳು ಹುರಿದಂತೆ ಹೇಳುತ್ತಾನೆ. ಜೊತೆಗೆ ವಿಶ್ವದ ಬಹುತೇಕ ರಾಷ್ಟ್ರದ ನಕ್ಷೆಯನ್ನು ನೋಡುತ್ತಲೇ ದೇಶವನ್ನು ಗುರುತಿಸುತ್ತಾನೆ. ಎರಡೂ ವರ್ಷದಲ್ಲಿಯೇ ಇಂತಹದೊಂದು ಸಾಧನೆ ಮಾಡಿದ್ದು, ಹೆತ್ತವರ ಹರ್ಷವನ್ನು ಇಮ್ಮಡಿಗೊಳಿಸಿದೆ.

ಅಮ್ಮನ ಮಡಿಲನ್ನೇ ತನ್ನ ಪಾಠಶಾಲೆಯನ್ನಾಗಿ ಮಾಡಿಕೊಂಡ ಅಥರ್ವ್ ಸಮಾಜದ ಅರಿವು ಇಲ್ಲದ ವಯಸ್ಸಿನಲ್ಲಿಯೇ ಅರ್ಥಪೂರ್ಣ ಸಾಧನೆ ಮಾಡಿದ್ದಾನೆ. ಇಂಡಿಯಾ ಬುಕ್ ಆಫ್ ರೆಕಾರ್ಡ್-2022ನಲ್ಲಿ ತನ್ನ ಹೆಸರನ್ನು ದಾಖಲು ಮಾಡಿರುವ ಅಥರ್ವ್ನ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಆನ್ಲೈನ್ ಮೂಲಕ ನಡೆದ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಅಥರ್ವ್ ಸಾಧನೆ ಮಾಡಿದ್ದು, ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದೆ.

ಇದನ್ನೂ ಓದಿ

ಅಲ್​ಖೈದಾ ಉಗ್ರರಿಗಂತೂ ಅರ್ಥವಾಗುವುದಿಲ್ಲ, ಆದರೆ ಭಾರತೀಯ ಮುಸ್ಲಿಮರಿಗೇನಾಗಿದೆ?-ಅಸ್ಸಾಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ಪ್ರಶ್ನೆ

ಹಿಂದೂ ಮುಸ್ಲಿಂ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗಲಿದೆಯಾ ಕಂಟಕ? ದರ್ಗಾ ಪ್ರವೇಶಿಸುತ್ತಾಳ ದ್ರೌಪಧಿಯಮ್ಮ

ವರದಿ: ರಹಮತ್ ಕಂಚಗಾರ್

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ