AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ ಎರಡು ವರ್ಷದ ಬಾಲಕ; ಆ ಸಾಧನೆ ಏನು?

ಪಟಾ ಪಟ್ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸುವ ತೊದಲು ನುಡಿಯ ಕಂದನ ಹೆಸರು ಅಥರ್ವ ಎಸ್. ಅಥರ್ವ್ ಎಸ್ ವಾಣಿಜ್ಯನಗರಿ ಹುಬ್ಬಳ್ಳಿ ಶಿರೂರ್ ಪಾರ್ಕ್ ನಿವಾಸಿಯಾದ ಪ್ರತಿಭಾ ಹಾಗೂ ಶರಣ್ ದಂಪತಿಗಳ ಮಗ.

ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ ಎರಡು ವರ್ಷದ ಬಾಲಕ; ಆ ಸಾಧನೆ ಏನು?
ತಂದೆ- ತಾಯಿ ಜೊತೆ ಅಥರ್ವ್​ ಎಸ್
TV9 Web
| Edited By: |

Updated on: Apr 07, 2022 | 2:33 PM

Share

ಹುಬ್ಬಳ್ಳಿ: ಹುಟ್ಟಿದ ಮಗು (Baby) ತನ್ನ ಒಂದೊಂದು ಕಾರ್ಯ ಆರಂಭಿಸಿದರೆ ಹೆತ್ತವರಿಗೆ ಆಗೋ ಸಂತೋಷ ಅಷ್ಟಿಷ್ಟಲ್ಲ. ಇನ್ನು ಇಡೀ ಜಗತ್ತೇ ತಿರುಗಿ ನೋಡುವಂತೆ ಸಾಧನೆ ಮಾಡಿದರೆ ಅವರ ಖುಷಿಗೆ ಪಾರವೇ ಇರಲ್ಲ. ಜಿಲ್ಲೆಯಲ್ಲಿ ಮಗುವೊಂದು ಇನ್ನೂ ಅಮ್ಮನ (Mother) ಮಡಿಲಲ್ಲಿ ಆಟ ಆಡುವ ವಯಸ್ಸು. ಆದರೆ ಆತನ ಜ್ಞಾನ ನೋಡಿದರೇ ಅಮ್ಮನಿಗೆ ಅಚ್ಚರಿ ಆಗುತ್ತದೆ. ತನ್ನ ಅಪಾರ ಜ್ಞಾಪಕ ಶಕ್ತಿಯಿಂದ ಮಗು ದಾಖಲೆ ಮಾಡಿದೆ. ಪಟಾ ಪಟ್ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸುವ ತೊದಲು ನುಡಿಯ ಕಂದನ ಹೆಸರು ಅಥರ್ವ್​ ಎಸ್. ಅಥರ್ವ್ ಎಸ್ ವಾಣಿಜ್ಯನಗರಿ ಹುಬ್ಬಳ್ಳಿ ಶಿರೂರ್ ಪಾರ್ಕ್ ನಿವಾಸಿಯಾದ ಪ್ರತಿಭಾ ಹಾಗೂ ಶರಣ್ ದಂಪತಿಗಳ ಮಗ. ತನ್ನ ಅಗಾಧವಾದ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ್ದಾನೆ.

ಎರಡು ವರ್ಷದ ಈ ಬಾಲಕ ಜನರಲ್ ನಾಲೆಡ್ಜ್, ಅಂಕಿ ಸಂಖ್ಯೆಗಳನ್ನು ಅಳ್ಳು ಹುರಿದಂತೆ ಹೇಳುತ್ತಾನೆ. ಜೊತೆಗೆ ವಿಶ್ವದ ಬಹುತೇಕ ರಾಷ್ಟ್ರದ ನಕ್ಷೆಯನ್ನು ನೋಡುತ್ತಲೇ ದೇಶವನ್ನು ಗುರುತಿಸುತ್ತಾನೆ. ಎರಡೂ ವರ್ಷದಲ್ಲಿಯೇ ಇಂತಹದೊಂದು ಸಾಧನೆ ಮಾಡಿದ್ದು, ಹೆತ್ತವರ ಹರ್ಷವನ್ನು ಇಮ್ಮಡಿಗೊಳಿಸಿದೆ.

ಅಮ್ಮನ ಮಡಿಲನ್ನೇ ತನ್ನ ಪಾಠಶಾಲೆಯನ್ನಾಗಿ ಮಾಡಿಕೊಂಡ ಅಥರ್ವ್ ಸಮಾಜದ ಅರಿವು ಇಲ್ಲದ ವಯಸ್ಸಿನಲ್ಲಿಯೇ ಅರ್ಥಪೂರ್ಣ ಸಾಧನೆ ಮಾಡಿದ್ದಾನೆ. ಇಂಡಿಯಾ ಬುಕ್ ಆಫ್ ರೆಕಾರ್ಡ್-2022ನಲ್ಲಿ ತನ್ನ ಹೆಸರನ್ನು ದಾಖಲು ಮಾಡಿರುವ ಅಥರ್ವ್ನ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಆನ್ಲೈನ್ ಮೂಲಕ ನಡೆದ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಅಥರ್ವ್ ಸಾಧನೆ ಮಾಡಿದ್ದು, ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದೆ.

ಇದನ್ನೂ ಓದಿ

ಅಲ್​ಖೈದಾ ಉಗ್ರರಿಗಂತೂ ಅರ್ಥವಾಗುವುದಿಲ್ಲ, ಆದರೆ ಭಾರತೀಯ ಮುಸ್ಲಿಮರಿಗೇನಾಗಿದೆ?-ಅಸ್ಸಾಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ಪ್ರಶ್ನೆ

ಹಿಂದೂ ಮುಸ್ಲಿಂ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗಲಿದೆಯಾ ಕಂಟಕ? ದರ್ಗಾ ಪ್ರವೇಶಿಸುತ್ತಾಳ ದ್ರೌಪಧಿಯಮ್ಮ

ವರದಿ: ರಹಮತ್ ಕಂಚಗಾರ್

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?