AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ ಎರಡು ವರ್ಷದ ಬಾಲಕ; ಆ ಸಾಧನೆ ಏನು?

ಪಟಾ ಪಟ್ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸುವ ತೊದಲು ನುಡಿಯ ಕಂದನ ಹೆಸರು ಅಥರ್ವ ಎಸ್. ಅಥರ್ವ್ ಎಸ್ ವಾಣಿಜ್ಯನಗರಿ ಹುಬ್ಬಳ್ಳಿ ಶಿರೂರ್ ಪಾರ್ಕ್ ನಿವಾಸಿಯಾದ ಪ್ರತಿಭಾ ಹಾಗೂ ಶರಣ್ ದಂಪತಿಗಳ ಮಗ.

ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ ಎರಡು ವರ್ಷದ ಬಾಲಕ; ಆ ಸಾಧನೆ ಏನು?
ತಂದೆ- ತಾಯಿ ಜೊತೆ ಅಥರ್ವ್​ ಎಸ್
TV9 Web
| Edited By: sandhya thejappa|

Updated on: Apr 07, 2022 | 2:33 PM

Share

ಹುಬ್ಬಳ್ಳಿ: ಹುಟ್ಟಿದ ಮಗು (Baby) ತನ್ನ ಒಂದೊಂದು ಕಾರ್ಯ ಆರಂಭಿಸಿದರೆ ಹೆತ್ತವರಿಗೆ ಆಗೋ ಸಂತೋಷ ಅಷ್ಟಿಷ್ಟಲ್ಲ. ಇನ್ನು ಇಡೀ ಜಗತ್ತೇ ತಿರುಗಿ ನೋಡುವಂತೆ ಸಾಧನೆ ಮಾಡಿದರೆ ಅವರ ಖುಷಿಗೆ ಪಾರವೇ ಇರಲ್ಲ. ಜಿಲ್ಲೆಯಲ್ಲಿ ಮಗುವೊಂದು ಇನ್ನೂ ಅಮ್ಮನ (Mother) ಮಡಿಲಲ್ಲಿ ಆಟ ಆಡುವ ವಯಸ್ಸು. ಆದರೆ ಆತನ ಜ್ಞಾನ ನೋಡಿದರೇ ಅಮ್ಮನಿಗೆ ಅಚ್ಚರಿ ಆಗುತ್ತದೆ. ತನ್ನ ಅಪಾರ ಜ್ಞಾಪಕ ಶಕ್ತಿಯಿಂದ ಮಗು ದಾಖಲೆ ಮಾಡಿದೆ. ಪಟಾ ಪಟ್ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸುವ ತೊದಲು ನುಡಿಯ ಕಂದನ ಹೆಸರು ಅಥರ್ವ್​ ಎಸ್. ಅಥರ್ವ್ ಎಸ್ ವಾಣಿಜ್ಯನಗರಿ ಹುಬ್ಬಳ್ಳಿ ಶಿರೂರ್ ಪಾರ್ಕ್ ನಿವಾಸಿಯಾದ ಪ್ರತಿಭಾ ಹಾಗೂ ಶರಣ್ ದಂಪತಿಗಳ ಮಗ. ತನ್ನ ಅಗಾಧವಾದ ಜ್ಞಾಪಕ ಶಕ್ತಿಯಿಂದ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ಸಾಧನೆ ಮಾಡಿದ್ದಾನೆ.

ಎರಡು ವರ್ಷದ ಈ ಬಾಲಕ ಜನರಲ್ ನಾಲೆಡ್ಜ್, ಅಂಕಿ ಸಂಖ್ಯೆಗಳನ್ನು ಅಳ್ಳು ಹುರಿದಂತೆ ಹೇಳುತ್ತಾನೆ. ಜೊತೆಗೆ ವಿಶ್ವದ ಬಹುತೇಕ ರಾಷ್ಟ್ರದ ನಕ್ಷೆಯನ್ನು ನೋಡುತ್ತಲೇ ದೇಶವನ್ನು ಗುರುತಿಸುತ್ತಾನೆ. ಎರಡೂ ವರ್ಷದಲ್ಲಿಯೇ ಇಂತಹದೊಂದು ಸಾಧನೆ ಮಾಡಿದ್ದು, ಹೆತ್ತವರ ಹರ್ಷವನ್ನು ಇಮ್ಮಡಿಗೊಳಿಸಿದೆ.

ಅಮ್ಮನ ಮಡಿಲನ್ನೇ ತನ್ನ ಪಾಠಶಾಲೆಯನ್ನಾಗಿ ಮಾಡಿಕೊಂಡ ಅಥರ್ವ್ ಸಮಾಜದ ಅರಿವು ಇಲ್ಲದ ವಯಸ್ಸಿನಲ್ಲಿಯೇ ಅರ್ಥಪೂರ್ಣ ಸಾಧನೆ ಮಾಡಿದ್ದಾನೆ. ಇಂಡಿಯಾ ಬುಕ್ ಆಫ್ ರೆಕಾರ್ಡ್-2022ನಲ್ಲಿ ತನ್ನ ಹೆಸರನ್ನು ದಾಖಲು ಮಾಡಿರುವ ಅಥರ್ವ್ನ ಸಾಧನೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಆನ್ಲೈನ್ ಮೂಲಕ ನಡೆದ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಅಥರ್ವ್ ಸಾಧನೆ ಮಾಡಿದ್ದು, ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದೆ.

ಇದನ್ನೂ ಓದಿ

ಅಲ್​ಖೈದಾ ಉಗ್ರರಿಗಂತೂ ಅರ್ಥವಾಗುವುದಿಲ್ಲ, ಆದರೆ ಭಾರತೀಯ ಮುಸ್ಲಿಮರಿಗೇನಾಗಿದೆ?-ಅಸ್ಸಾಂ ಸಿಎಂ ಹಿಮಂತ್​ ಬಿಸ್ವಾ ಶರ್ಮಾ ಪ್ರಶ್ನೆ

ಹಿಂದೂ ಮುಸ್ಲಿಂ ಸಾಮರಸ್ಯದ ಕರಗ ಉತ್ಸವಕ್ಕೆ ಎದುರಾಗಲಿದೆಯಾ ಕಂಟಕ? ದರ್ಗಾ ಪ್ರವೇಶಿಸುತ್ತಾಳ ದ್ರೌಪಧಿಯಮ್ಮ

ವರದಿ: ರಹಮತ್ ಕಂಚಗಾರ್

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ