AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ!

ಹುಬ್ಬಳ್ಳಿಯ ಶಿವಾಜಿ ವೃತ್ತದ ಬಳಿ ಮರಾಠಗಲ್ಲಿ ಸಾರ್ವಜನಿಕ ಬೃಹತ್ ಗಣೇಶೋತ್ಸವ ಭಾರೀ ಸಂಭ್ರಮದಿಂದ ನಡೆಯಿತು. ಆದರೆ, ಪಟಾಟಿ ಸಿಡಿಸುವ ವೇಳೆ ಕಿಡಿ ತಗುಲಿ 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಘಟನೆ ಕೂಡ ನಡೆಯಿತು. ಕೂಡಲೇ ಎಚ್ಚೆತ್ತ ಸಮಿತಿ ಸದಸ್ಯರು ಬೆಂಕಿಯನ್ನು ನಂದಿಸಿದ್ದು, ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ.

ಹುಬ್ಬಳ್ಳಿ: 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ!
ಹುಬ್ಬಳ್ಳಿಯಲ್ಲಿ 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Sep 28, 2023 | 11:01 PM

Share

ಹುಬ್ಬಳ್ಳಿ, ಸೆ.28: ಶಿವಾಜಿ ವೃತ್ತದ ಬಳಿ ಮರಾಠಗಲ್ಲಿ ಸಾರ್ವಜನಿಕ ಬೃಹತ್ ಗಣೇಶೋತ್ಸವ (Ganeshotsav) ಭಾರೀ ಸಂಭ್ರಮದಿಂದ ನಡೆಯಿತು. ಆದರೆ, ಪಟಾಟಿ ಸಿಡಿಸುವ ವೇಳೆ ಕಿಡಿ ತಗುಲಿ 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಘಟನೆ ಕೂಡ ನಡೆಯಿತು. ಕೂಡಲೇ ಎಚ್ಚೆತ್ತ ಸಮಿತಿ ಸದಸ್ಯರು ಬೆಂಕಿಯನ್ನು ನಂದಿಸಿದ್ದು, ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ.

25 ಅಡಿ ಎತ್ತರದ ಗಣೇಶನನ್ನು ನೋಡಲು ಭಕ್ತ ಸಾಗರವೇ ಹರಿದುಬಂದಿತ್ತು. ಮೆರವಣಿಗೆ ಉದ್ದಕ್ಕೂ ಸಾವಿರಾರು ಜನರು ಸಾಗಿದರು. ಯುವಕರ ತಂಡ ಪಟಾಕಿ ಹಚ್ಚಿ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಆದರೆ, ಪಟಾಕಿ ಹಚ್ಚುವಾಗ ಬೆಂಕಿಯ ಕಿಡಿ ಗಣಪತಿಗೆ ಹೊದಿಸಿದ್ದ ರೇಷ್ಮೆ ಬಟ್ಟೆಗೆ ತಗುಲಿ ಬೆಂಕಿ ಹತ್ತಿಕೊಂಡಿದೆ.

ಇದನ್ನೂ ಓದಿ: ಹೈದರಾಬಾದ್​ನ ಬಾಂಡ್ಲಗುಡ ಗಣೇಶ ಲಡ್ಡು 1.26 ಕೋಟಿ ರೂ.ಗೆ ಹರಾಜು!

ಇದನ್ನು ಗಮನಿಸಿದ ಸಮಿತಿ ಸದಸ್ಯರು ಕೂಡಲೇ ನೀರು ಹಾಕಿ ಬೆಂಕಿಯನ್ನು ನಂದಿಸಿ ಅನಾಹುತವನ್ನು ತಪ್ಪಿಸಿದರು. ಬಳಿಕ ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ ತೊಡಿಸಿ ಮೂರ್ತಿಯನ್ನು ಮೆರವಣಿಗೆ‌ ನಡೆಸಿ ವಿಸರ್ಜನೆ ಮಾಡಲಾಯಿತು. ಘಟನೆಯಿಂದಾಗಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ