AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ!

ಹುಬ್ಬಳ್ಳಿಯ ಶಿವಾಜಿ ವೃತ್ತದ ಬಳಿ ಮರಾಠಗಲ್ಲಿ ಸಾರ್ವಜನಿಕ ಬೃಹತ್ ಗಣೇಶೋತ್ಸವ ಭಾರೀ ಸಂಭ್ರಮದಿಂದ ನಡೆಯಿತು. ಆದರೆ, ಪಟಾಟಿ ಸಿಡಿಸುವ ವೇಳೆ ಕಿಡಿ ತಗುಲಿ 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಘಟನೆ ಕೂಡ ನಡೆಯಿತು. ಕೂಡಲೇ ಎಚ್ಚೆತ್ತ ಸಮಿತಿ ಸದಸ್ಯರು ಬೆಂಕಿಯನ್ನು ನಂದಿಸಿದ್ದು, ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ.

ಹುಬ್ಬಳ್ಳಿ: 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ!
ಹುಬ್ಬಳ್ಳಿಯಲ್ಲಿ 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಬೆಂಕಿ
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Sep 28, 2023 | 11:01 PM

Share

ಹುಬ್ಬಳ್ಳಿ, ಸೆ.28: ಶಿವಾಜಿ ವೃತ್ತದ ಬಳಿ ಮರಾಠಗಲ್ಲಿ ಸಾರ್ವಜನಿಕ ಬೃಹತ್ ಗಣೇಶೋತ್ಸವ (Ganeshotsav) ಭಾರೀ ಸಂಭ್ರಮದಿಂದ ನಡೆಯಿತು. ಆದರೆ, ಪಟಾಟಿ ಸಿಡಿಸುವ ವೇಳೆ ಕಿಡಿ ತಗುಲಿ 25 ಅಡಿ ಎತ್ತರದ ಗಣೇಶ ಮೂರ್ತಿಗೆ ತಗುಲಿದ ಘಟನೆ ಕೂಡ ನಡೆಯಿತು. ಕೂಡಲೇ ಎಚ್ಚೆತ್ತ ಸಮಿತಿ ಸದಸ್ಯರು ಬೆಂಕಿಯನ್ನು ನಂದಿಸಿದ್ದು, ಅದೃಷ್ಟವಶಾತ್ ದೊಡ್ಡ ದುರಂತ ತಪ್ಪಿದೆ.

25 ಅಡಿ ಎತ್ತರದ ಗಣೇಶನನ್ನು ನೋಡಲು ಭಕ್ತ ಸಾಗರವೇ ಹರಿದುಬಂದಿತ್ತು. ಮೆರವಣಿಗೆ ಉದ್ದಕ್ಕೂ ಸಾವಿರಾರು ಜನರು ಸಾಗಿದರು. ಯುವಕರ ತಂಡ ಪಟಾಕಿ ಹಚ್ಚಿ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಆದರೆ, ಪಟಾಕಿ ಹಚ್ಚುವಾಗ ಬೆಂಕಿಯ ಕಿಡಿ ಗಣಪತಿಗೆ ಹೊದಿಸಿದ್ದ ರೇಷ್ಮೆ ಬಟ್ಟೆಗೆ ತಗುಲಿ ಬೆಂಕಿ ಹತ್ತಿಕೊಂಡಿದೆ.

ಇದನ್ನೂ ಓದಿ: ಹೈದರಾಬಾದ್​ನ ಬಾಂಡ್ಲಗುಡ ಗಣೇಶ ಲಡ್ಡು 1.26 ಕೋಟಿ ರೂ.ಗೆ ಹರಾಜು!

ಇದನ್ನು ಗಮನಿಸಿದ ಸಮಿತಿ ಸದಸ್ಯರು ಕೂಡಲೇ ನೀರು ಹಾಕಿ ಬೆಂಕಿಯನ್ನು ನಂದಿಸಿ ಅನಾಹುತವನ್ನು ತಪ್ಪಿಸಿದರು. ಬಳಿಕ ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ ತೊಡಿಸಿ ಮೂರ್ತಿಯನ್ನು ಮೆರವಣಿಗೆ‌ ನಡೆಸಿ ವಿಸರ್ಜನೆ ಮಾಡಲಾಯಿತು. ಘಟನೆಯಿಂದಾಗಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More