Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?

ನಿಗದಿತ ಅವಧಿಯಲ್ಲಿ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?
ಸಕಾಲಕ್ಕೆ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on: Dec 22, 2023 | 5:13 PM

ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್‌ ಬಿಲ್ಡರ್ಸ್‌ ಮತ್ತು ಡೆವೆಲಪರ್ಸ್‌ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್‌ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ ಕಟ್ಟುವವರೆಗೂ ಕೊಡಬೇಕಿತ್ತು. ನಿಗದಿತ ಅವಧಿಯೊಳಗೆ ಮನೆಯನ್ನು ನಿರ್ಮಿಸಿಕೊಡದೇ, ಇತ್ತ ಪ್ರತಿ ತಿಂಗಳು ಬಾಡಿಗೆಯನ್ನು ಕೊಡದ ಕಾರಣ ಸಂಜೀವ ಅವರು ಸೇವಾ ನ್ಯೂನ್ಯತೆ ಆಧಾರದ ಮೇಲೆ ಧಾರವಾಡ ಗ್ರಾಹಕರ ಆಯೋಗದ (Dharwad Consumer Commission ) ಬಾಗಿಲು ಬಡಿದಿದ್ದರು.

ಈ ದೂರು ಪರಿಶೀಲಿಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರು, ಕರಾರಿನಂತೆ ಮನೆ ನಿರ್ಮಿಸಿಕೊಡುವುದು ಹಾಗೂ ತಪ್ಪಿದಲ್ಲಿ ಪ್ರತಿ ತಿಂಗಳು ಬಾಡಿಗೆಯನ್ನೂ ಕೊಡದ ಬಿಲ್ಡರ್‌ಗೆ ತರಾಟೆಗೆ ತೆಗೆದುಕೊಂಡು, 2019ರ ನವೆಂಬರ್‌ ತಿಂಗಳಿಂದ 2023ರ ನವೆಂಬರ್‌ ವರೆಗೆ ಬಾಡಿಗೆ ಹಣ ರೂ. 4.90 ಲಕ್ಷಗಳನ್ನು ದೂರುದಾರರಿಗೆ ನೀಡಬೇಕು.

ಇದನ್ನೂ ಓದಿ: ಠೇವಣಿ ವಾಪಸ್​ ಕೊಡದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 97 ಸಾವಿರ ರೂ ದಂಡ ವಿಧಿಸಿದ ಧಾರವಾಡ ಗ್ರಾಹಕ ವೇದಿಕೆ

ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಸ್ಕೈಟೌನ್‌ ಬಿಲ್ಡರ್‌ಗೆ ಹಾಗೂ ಮನೆ ನಿರ್ಮಿಸಿ ಕೊಡುವುವವರೆಗೂ ತಿಂಗಳಿಗೆ ರೂ.10 ಸಾವಿರದಂತೆ ಬಾಡಿಗೆ ಕೊಡಬೇಕು. ಜೊತೆಗೆ ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ಹಿಂಸೆಗಾಗಿ ರೂ. 25 ಸಾವಿರ, ಪ್ರಕರಣದ ಖರ್ಚು ವೆಚ್ಚವೆಂದು ರೂ. 10 ಸಾವಿರ ಕೊಡಲು ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ