AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?

ನಿಗದಿತ ಅವಧಿಯಲ್ಲಿ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?
ಸಕಾಲಕ್ಕೆ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಸಾಧು ಶ್ರೀನಾಥ್​

Updated on: Dec 22, 2023 | 5:13 PM

ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್‌ ಬಿಲ್ಡರ್ಸ್‌ ಮತ್ತು ಡೆವೆಲಪರ್ಸ್‌ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್‌ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ ಕಟ್ಟುವವರೆಗೂ ಕೊಡಬೇಕಿತ್ತು. ನಿಗದಿತ ಅವಧಿಯೊಳಗೆ ಮನೆಯನ್ನು ನಿರ್ಮಿಸಿಕೊಡದೇ, ಇತ್ತ ಪ್ರತಿ ತಿಂಗಳು ಬಾಡಿಗೆಯನ್ನು ಕೊಡದ ಕಾರಣ ಸಂಜೀವ ಅವರು ಸೇವಾ ನ್ಯೂನ್ಯತೆ ಆಧಾರದ ಮೇಲೆ ಧಾರವಾಡ ಗ್ರಾಹಕರ ಆಯೋಗದ (Dharwad Consumer Commission ) ಬಾಗಿಲು ಬಡಿದಿದ್ದರು.

ಈ ದೂರು ಪರಿಶೀಲಿಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರು, ಕರಾರಿನಂತೆ ಮನೆ ನಿರ್ಮಿಸಿಕೊಡುವುದು ಹಾಗೂ ತಪ್ಪಿದಲ್ಲಿ ಪ್ರತಿ ತಿಂಗಳು ಬಾಡಿಗೆಯನ್ನೂ ಕೊಡದ ಬಿಲ್ಡರ್‌ಗೆ ತರಾಟೆಗೆ ತೆಗೆದುಕೊಂಡು, 2019ರ ನವೆಂಬರ್‌ ತಿಂಗಳಿಂದ 2023ರ ನವೆಂಬರ್‌ ವರೆಗೆ ಬಾಡಿಗೆ ಹಣ ರೂ. 4.90 ಲಕ್ಷಗಳನ್ನು ದೂರುದಾರರಿಗೆ ನೀಡಬೇಕು.

ಇದನ್ನೂ ಓದಿ: ಠೇವಣಿ ವಾಪಸ್​ ಕೊಡದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 97 ಸಾವಿರ ರೂ ದಂಡ ವಿಧಿಸಿದ ಧಾರವಾಡ ಗ್ರಾಹಕ ವೇದಿಕೆ

ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಸ್ಕೈಟೌನ್‌ ಬಿಲ್ಡರ್‌ಗೆ ಹಾಗೂ ಮನೆ ನಿರ್ಮಿಸಿ ಕೊಡುವುವವರೆಗೂ ತಿಂಗಳಿಗೆ ರೂ.10 ಸಾವಿರದಂತೆ ಬಾಡಿಗೆ ಕೊಡಬೇಕು. ಜೊತೆಗೆ ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ಹಿಂಸೆಗಾಗಿ ರೂ. 25 ಸಾವಿರ, ಪ್ರಕರಣದ ಖರ್ಚು ವೆಚ್ಚವೆಂದು ರೂ. 10 ಸಾವಿರ ಕೊಡಲು ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ