AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?

ನಿಗದಿತ ಅವಧಿಯಲ್ಲಿ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌ಗೆ ಧಾರವಾಡದ ಗ್ರಾಹಕರ ಆಯೋಗ ಕರಾರಿನಂತೆ ಪ್ರತಿ ತಿಂಗಳು ರು. 10 ಸಾವಿರ ಬಾಡಿಗೆ ನೀಡುವಂತೆ ಆದೇಶ ನೀಡಿದೆ.

ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌! ಧಾರವಾಡ ಗ್ರಾಹಕರ ಆಯೋಗದ ಆದೇಶವೇನು?
ಸಕಾಲಕ್ಕೆ ಫ್ಯ್ಲಾಟ್‌ ನಿರ್ಮಿಸಿಕೊಡದ ಬಿಲ್ಡರ್‌
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: ಸಾಧು ಶ್ರೀನಾಥ್​|

Updated on: Dec 22, 2023 | 5:13 PM

Share

ಧಾರವಾಡದ ಸಂಜೀವ ದೇಸಾಯಿ ಎಂಬುವವರು (consumer) 2017ರಲ್ಲಿ ಸ್ಕೈಟೌನ್‌ ಬಿಲ್ಡರ್ಸ್‌ ಮತ್ತು ಡೆವೆಲಪರ್ಸ್‌ ಬಳಿ ಪೂರ್ತಿ ಹಣ ಪಾವತಿಸಿ ಫ್ಲ್ಟಾಟ್‌ (Flat) ಖರೀದಿಸಿದ್ದರು. ಖರೀದಿ ಕರಾರಿನಂತೆ 24 ತಿಂಗಳೊಳಗೆ ಮನೆಯನ್ನು ಪೂರ್ಣಗೊಳಿಸಿ ಕೊಡಬೇಕು. ತಪ್ಪಿದ್ದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಮನೆ ಬಾಡಿಗೆಯನ್ನು ಪೂರ್ತಿ ಮನೆ ಕಟ್ಟುವವರೆಗೂ ಕೊಡಬೇಕಿತ್ತು. ನಿಗದಿತ ಅವಧಿಯೊಳಗೆ ಮನೆಯನ್ನು ನಿರ್ಮಿಸಿಕೊಡದೇ, ಇತ್ತ ಪ್ರತಿ ತಿಂಗಳು ಬಾಡಿಗೆಯನ್ನು ಕೊಡದ ಕಾರಣ ಸಂಜೀವ ಅವರು ಸೇವಾ ನ್ಯೂನ್ಯತೆ ಆಧಾರದ ಮೇಲೆ ಧಾರವಾಡ ಗ್ರಾಹಕರ ಆಯೋಗದ (Dharwad Consumer Commission ) ಬಾಗಿಲು ಬಡಿದಿದ್ದರು.

ಈ ದೂರು ಪರಿಶೀಲಿಸಿದ ಆಯೋಗದ ಅಧ್ಯಕ್ಷ ಈಶಪ್ಪ ಭೂತೆ ಹಾಗೂ ಸದಸ್ಯರು, ಕರಾರಿನಂತೆ ಮನೆ ನಿರ್ಮಿಸಿಕೊಡುವುದು ಹಾಗೂ ತಪ್ಪಿದಲ್ಲಿ ಪ್ರತಿ ತಿಂಗಳು ಬಾಡಿಗೆಯನ್ನೂ ಕೊಡದ ಬಿಲ್ಡರ್‌ಗೆ ತರಾಟೆಗೆ ತೆಗೆದುಕೊಂಡು, 2019ರ ನವೆಂಬರ್‌ ತಿಂಗಳಿಂದ 2023ರ ನವೆಂಬರ್‌ ವರೆಗೆ ಬಾಡಿಗೆ ಹಣ ರೂ. 4.90 ಲಕ್ಷಗಳನ್ನು ದೂರುದಾರರಿಗೆ ನೀಡಬೇಕು.

ಇದನ್ನೂ ಓದಿ: ಠೇವಣಿ ವಾಪಸ್​ ಕೊಡದ ಬ್ಯಾಂಕ್ ಆಫ್ ಬರೋಡಾ ಶಾಖೆಗೆ 97 ಸಾವಿರ ರೂ ದಂಡ ವಿಧಿಸಿದ ಧಾರವಾಡ ಗ್ರಾಹಕ ವೇದಿಕೆ

ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಸ್ಕೈಟೌನ್‌ ಬಿಲ್ಡರ್‌ಗೆ ಹಾಗೂ ಮನೆ ನಿರ್ಮಿಸಿ ಕೊಡುವುವವರೆಗೂ ತಿಂಗಳಿಗೆ ರೂ.10 ಸಾವಿರದಂತೆ ಬಾಡಿಗೆ ಕೊಡಬೇಕು. ಜೊತೆಗೆ ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ಹಿಂಸೆಗಾಗಿ ರೂ. 25 ಸಾವಿರ, ಪ್ರಕರಣದ ಖರ್ಚು ವೆಚ್ಚವೆಂದು ರೂ. 10 ಸಾವಿರ ಕೊಡಲು ಆದೇಶಿಸಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Narasimha Murti Pyati
Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More