ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 09, 2024 | 4:51 PM

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ(Police Station)ಯಲ್ಲಿ ಬಿಜೆಪಿ ಶಾಸಕ ಅರವಿಂದ ಬೆಲ್ಲದ(Arvind Bellad)​ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಕುರಿತು ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕೆಂದು 4 ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ.

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
Follow us on

ಹುಬ್ಬಳ್ಳಿ, ಜೂ.09: ಬಿಜೆಪಿ ಶಾಸಕ ಅರವಿಂದ ಬೆಲ್ಲದ(Arvind Bellad)​ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ(Police Station)ಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್​ ಹಾನಗಲ್ ಮತ್ತು ಲಕ್ಷ್ಮಣ ಭೋವಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಏನಿದು ಘಟನೆ?

2023 ಡಿ. 30 ರಂದು ಪೊಲೀಸ್ ಕಮಿಷನರ್ ನೇತೃತ್ವದಲ್ಲಿ ಪರಿಶಿಷ್ಟ ಜಾತಿ, ಪಂಗಡದ ಕುಂದು ಕೊರತೆ ಸಭೆ ನಡೆದಿತ್ತು. ಈ ವೇಳೆ ಆನಂದ ನಗರದ ಕೃಷ್ಣಾ ಕಾಲೊನಿಗೆ ಸಂಬಂಧಪಟ್ಟ ಖಾಲಿ ಜಾಗವನ್ನು ಕೊಳಚೆ ನಿರ್ಮೂಲನ ಮಂಡಳಿ ಅಕ್ರಮವಾಗಿ ಹಕ್ಕುಪತ್ರ ವಿತರಿಸಿದೆ ಎಂಬ ದೂರು ಕೇಳಿಬಂದಿತ್ತು. ಈ ಕುರಿತು ಪರಶುರಾಮ ದಾವಣಗೆರೆ ಎಂಬುವರು ಅರ್ಜಿ ಸಲ್ಲಿಸಿದ್ದರು. ಬಳಿಕ ಈ ಅರ್ಜಿಯನ್ನು ಹಿಂಪಡೆಯುವಂತೆ ಹೇಳಿ, ಉಪ ಮೇಯರ್ ಮೇಯ‌ರ್ ಸತೀಶ ಹಾನಗಲ್ ಹಾಗೂ ಶಾಸಕ ಅರವಿಂದ ಬೆಲ್ಲದ ಕುಮ್ಮಕ್ಕಿನಿಂದ ಲಕ್ಷ್ಮಣ ಭೋವಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರಂತೆ.

ಇದನ್ನೂ ಓದಿ:ಸರ್ಕಾರದ ಹೆಸರಿನಲ್ಲಿ‌ ನಕಲಿ ಆದೇಶ ಹೊರಡಿಸಿ ವಂಚನೆಗೆ ಯತ್ನ; ವಿಧಾನಸೌಧ ಠಾಣೆಯಲ್ಲಿ 2 ಪ್ರಕರಣ ದಾಖಲು

ಈ ಹಿನ್ನಲೆ ಆರೋಪಿತರ ಮೇಲೆ ಕ್ರಮಕೈಗೊಳ್ಳಬೇಕೆಂದು 4 ನೇ ಎಸಿಜಿ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪರಶುರಾಮ ದೂರು ದಾಖಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳುವಂತೆ  ಸೂಚನೆ ನೀಡಿದೆ. ಇದರಿಂದ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿ ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ