AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಶೇರ್ ಮಾಡಿ ಪ್ರಿಯಕರ ಆತ್ಮಹತ್ಯೆ

ಪ್ರೇಯಸಿಯೊಂದಿಗೆ ಮನಸ್ತಾಪ ಮಾಡಿಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಹಾಗೂ ವಾಟ್ಸಪ್ ಚಾಟ್​​ ಸಾಮಾಜಿ ಜಾಲತಾಣಗಳಲ್ಲಿ ಹರಿಬಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ.

ಹುಬ್ಬಳ್ಳಿ: ಪ್ರೇಯಸಿಯ ಖಾಸಗಿ ವಿಡಿಯೋ, ಫೋಟೋ ಶೇರ್ ಮಾಡಿ ಪ್ರಿಯಕರ ಆತ್ಮಹತ್ಯೆ
ಯುವಕ ಆತ್ಮಹತ್ಯೆ
ಶಿವಕುಮಾರ್ ಪತ್ತಾರ್
| Edited By: |

Updated on: Jan 14, 2025 | 10:11 PM

Share

ಹುಬ್ಬಳ್ಳಿ, (ಜನವರಿ 14): ಪ್ರೇಯಸಿಯ ಕಾಟದಿಂದ ಬೇಸತ್ತು ಯುವಕನೋರ್ವ ಆತ್ಮಹತ್ಯೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರ ನಿವಾಸಿಯಾಗಿವು 27 ವರ್ಷದ ಸಂದೇಶ್ ಉಣಕಲ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ. ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ ಸಂದೇಶ, ಉಣಕಲ್ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇನ್ನು ನನ್ನ ಸಾವಿಗೆ ಸಂಜನಾ ಕಾರಣ ಎಂದು ತಾಯಿ ವಾಯ್ಸ್ ಮೆಸೇಜ್ ಕಳುಹಿಸಿ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆಗೂ ಮುನ್ನ ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳಸಿದ್ದು, ನನ್ನ ಸಾವಿಗೆ ಸಂಜನಾ(ಪ್ರೇಯಸಿ) ಕಾರಣ ಎಂದು ಹೇಳಿದ್ದಾನೆ.

ಹುಬ್ಬಳ್ಳಿಯ ನವನಗರ ನಿವಾಸಿಯಾಗಿರೋ ಸಂದೇಶ, ಮೋಟಾರ್ ಬೈಕ್ ಶೋ ರೂಮ್ ನಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಶನಿವಾರ ಮನೆಯಿಂದ ನಾಪತ್ತೆಯಾಗಿದ್ದ. ಈ ಕುರಿತು ಕುಟುಂಬಸ್ಥರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದ್ರೆ, ಇದೀಗ ಸಂದೇಶ ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಇದನ್ನೂ ಓದಿ: 2 ಮಕ್ಕಳ ತಂದೆಯನ್ನ ಮದ್ವೆಯಾಗಲು ಇಬ್ಬರು ಮಹಿಳೆಯರ ನಡುವೆ ಕಿತ್ತಾಟ, ಚಾಕು ಇರಿತ

ಆತ್ಮಹತ್ಯೆಗೂ ಮುನ್ನ ತನ್ನ ಪ್ರೇಯಸಿಯ ಜೊತೆಗಿನ ಖಾಸಗಿ ವಿಡಿಯೋ, ವಾಟ್ಸಪ್ ಚಾಟ್, ಸಂಭಾಷಣೆ ಮತ್ತು ಫೋಟೋಗಳನ್ನು ತನ್ನ ಸ್ನೇಹಿತರಿಗೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾನೆ.  ಅಲ್ಲದೇ ನನ್ನ ಸಾವಿಗೆ ಸಂಜನಾ ಕಾರಣ ಎಂದು ತನ್ನ ತಾಯಿಗೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ಇನ್ನು ಮಗನನ್ನ ಕಳೆದುಕೊಂಡ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ.

ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಏಕಾಏಕಿ ಸಂದೇಶ ಏಕೆ ಆತ್ಮಹತ್ಯೆ ಮಾಡಿಕೊಂಡ? ತನ್ನ ಸಾವಿಗೆ ಪ್ರೇಯಸಿ ಕಾರಣ ಎಂದು ಏಕೆ ಹೇಳಿದ್ದ? ಇಬ್ಬರ ಮಧ್ಯೆ ಏನಾದರೂ ಜಗಳವಾಗಿತ್ತಾ? ಅಥವಾ ಇನ್ನೇನಾದರೂ ನಡೆದಿತ್ತಾ? ಎನ್ನುವ ಅನುಮಾನಗಳು ಹುಟ್ಟಿಕೊಂಡಿದ್ದು, ಪೊಲೀಸ ತನಿಖೆಯಲ್ಲಿ ಸಂದೇಶ ಆತ್ಮಹತ್ಯೆಗೆ ಕಾರಣವೇನು ಎನ್ನುವುದು ತಿಳಿದುಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್