AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ

ಆತನಿಗೆ ಮದುವೆಯಗಿತ್ತು. ಮದುವೆಯಾದರೂ ಅಣ್ಣನ ಹೆಂಡತಿ‌ ಮೇಲೆ ಕಣ್ಣು ಹಾಕಿದ್ದ. ಅಣ್ಣನ ಹೆಂಡತಿ ಇದು ಸರಿ ಅಲ್ಲ ಅಂದರೂ ಕೇಳಿರಲಿಲ್ಲ.ನೀನೇ ಬೇಕೇ ಬೇಕು ಎಂದು ಪಟ್ಟು ಹಿಡದಿದ್ದ. ಅತ್ತಿಗೆಯನ್ನ ಮಂಚಕ್ಕೆ ಕರೆದವ ಕಾಮುಕನಂತೆ ವರ್ತಿಸಿದ್ದಾನೆ. ಹೌದು.. ಅತ್ತಿಗೆ ನಿರಾಕರಣೆ ಮಾಡಿದ್ದಕ್ಕೆ ಮೈದುನ‌ ಅತ್ತಿಗೆಗೆ ಮನ ಬಂದಂತೆ ಹಲ್ಲೆ ಮಾಡಿದ್ದಾನೆ. ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಅಷ್ಟಕ್ಕೂ ಏನಿದು ಮೈದುನನ ಮೃಗೀಯ ವರ್ತನೆ ಅಂತೀರಾ ಈ ಸ್ಟೋರಿ ನೋಡಿ..

ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ
Hubli
ಶಿವಕುಮಾರ್ ಪತ್ತಾರ್
| Edited By: |

Updated on: Mar 24, 2025 | 5:03 PM

Share

ಧಾರವಾಡ, (ಮಾರ್ಚ್​​ 24): ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ  (Dharwad) ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ,

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಕಟ್ಟಿ ನಿವಾಸಿ ರಮೇಶ್ ಮೇಗುಂಡಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ಸ್ವಂತ ಅತ್ತಿಗೆಯನ್ನ(ಅಣ್ಣನ ಹೆಂಡತಿ) ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ರಮೇಶ್, ಅತ್ತಿಗೆಯನ್ನು ಹಿಡಿದುಕೊಂಡು ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಮೈದುನನಿಂದ ತಪ್ಪಿಸಿಕೊಂಡು ಮನೆಯಿಂದ ಕೈಗಾಡಿಕೊಂಡು ಹೊರಗೆ ಬಂದಿದ್ದಾಳೆ. ಆಗ ಅಕ್ಕಪಕ್ಕದ ಜನರು ಏನಾಯ್ತು ಎಂದು ಓಡೋಡಿ ಬಂದಿದ್ದು, ಗಾಯಗೊಂಡಿದ್ದ ಸವಿತಾಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸವಿತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಕಾಮುಕ ಮೈದುನ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸಪ್ತಪದಿ ತುಳಿದ ಎದುರು ಬದುರು ಮನೆಯ ಹಿಂದೂ-ಮುಸ್ಲಿಂ ಜೋಡಿ!

ಸವಿತಾ ತನ್ನ ಅಣ್ಣನ ಹೆಂಡತಿ ಎನ್ನುವುದನ್ನು ಮರೆತ ರಮೇಶ್, ನಿತ್ಯವೂ ಮಂಚಕ್ಕೆ ಕರೆಯುತ್ತಿದ್ದನಂತೆ. ಆದ್ರೆ, ಇದಕ್ಕೆ ಸವಿತಾ ನಿರಾಕರಿಸುತ್ತಾ ಬಂದಿದ್ದಾಳಂತೆ. ಆದ್ರೆ, ಭಾನುವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಸವಿತಾಳನ್ನು ಮತ್ತೆ ಕರೆದಿದ್ದಾನೆ. ಇದಕ್ಕೆ ಸವಿತಾ ಒಪ್ಪದಿದ್ದಾಗ ಬಲವಂತ ಮಾಡಿದ್ದು, ಈ ವೇಳೆ ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಇದರಿಂದ ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿದ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಇದನ್ನೂ ಓದಿ
Image
19ರ ಯುವತಿ ಹಿಂದೆ ಬಿದ್ದ 47ರ ವ್ಯಕ್ತಿ: ಕಿರುಕುಳಕ್ಕೆ ವಿದ್ಯಾರ್ಥಿನಿ ಬಲಿ!
Image
ಇಬ್ಬರು ಹೆಂಡರ ನೀಚ ಗಂಡ: ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಳು!
Image
ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ!
Image
ಅತ್ತಿಗೆ ಮೇಲಿನ ಮೋಹಕ್ಕೆ ಸ್ವಂತ ಅಣ್ಣನನ್ನೇ ಕೊಂದ ಕಾಮುಕ ತಮ್ಮ

ಹೊಸಕಟ್ಟಿ ಗ್ರಾಮದಲ್ಲಿ ಸಹೋದರಾರ ಬಸಪ್ಪ ಹಾಗೂ ರಮೇಶ್ ಇಬ್ಬರು ಕೂಲಿ‌ಕೆಲಸ ಮಾಡಿಕೊಂಡು ಜೀವನ ಮಾಡತಿದ್ದರು. ಇಬ್ಬರಿಗೂ ಹೆಚ್ಚು ಕಡಿಮೆ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಒಂದೇ ಮನೆಯಲ್ಲಿ ವಾಸವಾಗಿದ್ದು. ಇನ್ನು ಬಸಪ್ಪನ ಪತ್ನಿ ಸವಿತಾ ಗಾರ್ಮೆಂಟ್ಸ್ ಕೆಲಸ ಮಾಡತಿದ್ದಳು. ಒಂದೇ ಮನೆಯಲ್ಲಿ ಇದ್ದ ಕಾರಣ, ಸವಿತಾ ಮೇಲೆ ಮೈದುನ ರಮೇಶ್ ಕಣ್ಣು ಹಾಕಿದ್ದ, ಯಾರೂ ಇಲ್ಲದ ವೇಳೆ ಜಗಳ ತಗೆದು ನನ್ನ ಜೊತೆ ಬಾ ಎಂದು ಕರೆಯುವುದು ಮಾಡತಿದ್ದನಂತೆ. ಇದಕ್ಕೆ ಸವಿತಾ ನಿರಾಕರಣೆ ಮಾಡುತ್ತಾ ಬಂದಿದ್ದಾಳೆ.

ಆದ್ರೆ, ಭಾನುವಾರ ಮುಂಜಾನೆ ಇದೇ ವಿಚಾರಕ್ಕೆ ಗಲಾಟೆಯಾಗಿದ್ದು, ರಮೇಶ್ ಅತ್ತಿಗೆಎಂದು ನೋಡದೆ ಮೃಗೀಯ ವರ್ತನೆ ತೋರಿದ್ದಾನೆ. ಪೈಪ್ ನಿಂದ ಹಲ್ಲೆ ಮಾಡಿರೋ ಆರೋಪವೂ ಕೇಳಿ ಬಂದಿದೆ.ಮನೆಯಲ್ಲಿ ಅತ್ತಿಗೆ ಮೇಲೆ ಹಲ್ಲೆ ಮಾಡಿ ರಮೇಶ್ ಪರಾರಿಯಾಗಿದ್ದಾನೆ. ಇನ್ನು ಸವಿತಾ ಸಂಬಂಧಿಕರು ಕುಂದಗೋಳ ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ