AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಕಿಮ್ಸ್​ನಲ್ಲಿ ರೋಗಿಯೊಬ್ಬನ ಹುಚ್ಚಾಟ; ಬೆಡ್​ಗೆ ಬೆಂಕಿ ಹಚ್ಚಿಕೊಳ್ಳಲು ಯತ್ನ

ಹುಬ್ಬಳ್ಳಿ ಕಿಮ್ಸ್​ ಒಂದಿಲ್ಲೊಂದು ಸುದ್ದಿಯಲ್ಲಿ ಇರುತ್ತದೆ. ಅದರಂತೆ ಇದೀಗ ಕಿಮ್ಸ್​ನಲ್ಲಿ ರೋಗಿಯೊಬ್ಬ ಬೆಡ್​ಗೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ರಕ್ಷಣೆಗೆ ಬಂದ ಭದ್ರತಾ ಸಿಬ್ಬಂದಿ ಯಲ್ಲಪ್ಪ ಅಣ್ಣಿಗೇರಿ ಎಂಬುವವರಿಗೂ ಕತ್ತರಿಯಿಂದ ಇರಿದಿದ್ದಾನೆ. ಇತಮ ಹುಚ್ಚಾಟಕ್ಕೆ ರೋಸಿ ಹೋದ ಸಿಬ್ಬಂದಿಗಳು, ಆತನನ್ನು ಕಟ್ಟಿ ಹಾಕಿದ್ದಾರೆ.

ಹುಬ್ಬಳ್ಳಿ ಕಿಮ್ಸ್​ನಲ್ಲಿ ರೋಗಿಯೊಬ್ಬನ ಹುಚ್ಚಾಟ; ಬೆಡ್​ಗೆ ಬೆಂಕಿ ಹಚ್ಚಿಕೊಳ್ಳಲು ಯತ್ನ
ಹುಬ್ಬಳ್ಳಿ ಕಿಮ್ಸ್​ನಲ್ಲಿ ರೋಗಿಯ ಹುಚ್ಚಾಟ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 22, 2024 | 5:49 PM

Share

ಹುಬ್ಬಳ್ಳಿ, ಫೆ.22: ಹುಬ್ಬಳ್ಳಿ ಕಿಮ್ಸ್(Hubli Kims) ಆಸ್ಪತ್ರೆಯಲ್ಲಿ ರೋಗಿಯೊಬ್ಬ ಬೆಡ್​ಗೆ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ನಡೆದಿದೆ. ಈ ವೇಳೆ ರಕ್ಷಣೆಗೆ ಬಂದ ಭದ್ರತಾ ಸಿಬ್ಬಂದಿ ಯಲ್ಲಪ್ಪ ಅಣ್ಣಿಗೇರಿ ಎಂಬುವವರಿಗೂ ಕತ್ತರಿಯಿಂದ ಇರಿದಿದ್ದಾನೆ. ಇನ್ನು ಇತ ಕ್ರೇನ್​ನಿಂದ ಬಿದ್ದು ಗಾಯಗೊಂಡು ಕಿಮ್ಸ್ ಎಮರ್ಜೆನ್ಸಿ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಇತನ ಹುಚ್ಚಾಟದಿಂದ ಕಿಮ್ಸ್ ಸಿಬ್ಬಂದಿ, ರೋಗಿಯನ್ನು ಬೆಡ್​ಗೆ ಕಟ್ಟಿಹಾಕಿದ್ದಾರೆ.

ಬೆಂಗಳೂರಿನಲ್ಲಿ ಹಫ್ತಾ ವಸೂಲಿಗಾಗಿ ಪುಂಡರಿಂದ ವೃದ್ಧನಿಗೆ ಕಿರುಕುಳ?

ಬೆಂಗಳೂರು: ಹಫ್ತಾ ವಸೂಲಿಗಾಗಿ ಪುಂಡರು ವೃದ್ಧನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಡಿ.ಜೆ.ಹಳ್ಳಿಯ ಪ್ರಿಯಾ ನಗರದಲ್ಲಿ ನಡೆದಿದೆ ಎನ್ನಲಾದ ವಿಡಿಯೋ ವೈರಲ್ ಆಗಿದ್ದು, ಹಫ್ತಾ ಕೊಡದಿದ್ದರೆ ನಿನ್ನ ಮೇಲೆ ಹಲ್ಲೆ ನಡೆಸುವುದಾಗಿ ವೃದ್ಧನಿಗೆ ಬೆದರಿಕೆವೊಡ್ಡಿದ್ದಾರೆ. ವೃದ್ಧನಿಗೆ ಬೆದರಿಕೆ ಹಾಕುತ್ತಿರುವ ಕಿಡಿಗೇಡಿಯ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪ್ರಿಯಾನಗರದ ಮುಖ್ಯರಸ್ತೆಯ ರಿಜ್ವಾನ್​ ಮೆಡಿಕಲ್ ಶಾಪ್​​​ನಲ್ಲಿ ಘಟನೆ ನಡೆದಿದೆ. ಈ ವಿಡಿಯೋವನ್ನು ವ್ಯಕ್ತಿಯೊಬ್ಬ ಬೆಂಗಳೂರು ಪೊಲೀಸರಿಗೆ ಟ್ಯಾಗ್​​ ಮಾಡಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ ಕಿಮ್ಸ್​ನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವು ಆರೋಪ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಕಿಡಿಗೇಡಿಗಳಿಂದ ಹುಲ್ಲಿನ ಬಣವೆಗೆ ಬೆಂಕಿ; ಲಕ್ಷಾಂತರ ರೂ. ನಷ್ಟ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ಮಾವಿನಕುಂಟೆ ಗ್ರಾಮದಲ್ಲಿ ಕಿಡಿಗೇಡಿಗಳು ಹುಲ್ಲಿನ ಬಣವೆಗೆ ಬೆಂಕಿ ಹಾಕಿದ ಘಟನೆ ನಡೆದಿದೆ. ರೈತ ಶ್ರೀನಿವಾಸ್​​ ಎಂಬುವವರಿಗೆ ಬಣವೆ ಇದಾಗಿದ್ದು, ಬರೊಬ್ಬರಿ 1 ಲಕ್ಷಕ್ಕೂ ಹೆಚ್ಚು ಮೌಲ್ಯದ ಬಣವೆ ಸಂಪೂರ್ಣ ಭಸ್ಮವಾಗಿದೆ. ಇನ್ನು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ  ಬಣವೆ ಬೆಂಕಿಹಾಹುತಿಯಾಗಿದ್ದು, ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ