AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿ ಕಳಿಸಿದ್ದ ಗ್ರಾಮ‌ ಪಂಚಾಯಿತಿ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ

ಎರಡು ಗುಂಪಿನ ನಡುವಿನ ಜಗಳವನ್ನ ಬಿಡಿಸಿ ಕಳುಹಿಸಿದ ವ್ಯಕ್ತಿಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ್​ ಕಮ್ಮಾರ(36) ಮೃತ ವ್ಯಕ್ತಿ.

ಧಾರವಾಡ: ಎರಡು ಗುಂಪಿನ ನಡುವೆ ಜಗಳ ಬಿಡಿಸಿ ಕಳಿಸಿದ್ದ ಗ್ರಾಮ‌ ಪಂಚಾಯಿತಿ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ
ಮೃತ ಪ್ರವೀಣ್​
ಕಿರಣ್ ಹನುಮಂತ್​ ಮಾದಾರ್
|

Updated on: Apr 19, 2023 | 9:55 AM

Share

ಧಾರವಾಡ: ಎರಡು ಗುಂಪಿನ ನಡುವಿನ ಜಗಳವನ್ನ ಬಿಡಿಸಿ ಕಳುಹಿಸಿದ ವ್ಯಕ್ತಿಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ್​ ಕಮ್ಮಾರ(36) ಮೃತ ವ್ಯಕ್ತಿ. ಗ್ರಾಮ‌ ಪಂಚಾಯತ್ ಉಪಾಧ್ಯಕ್ಷ ಆಗಿರುವ ಪ್ರವೀಣ್​, ಗ್ರಾಮದಲ್ಲಿ ನಡೆದಿದ್ದ ಉಡಚಮ್ಮ ದೇವಿ ಜಾತ್ರೆಯ ಪ್ರಸಾದದ ವೇಳೆ ಕೆಲವರು ಕುಡಿದು ಜಗಳವಾಡಿಕೊಳ್ಳಲು ಶುರು ಮಾಡಿದ್ದಾರೆ. ಈ ವೇಳೆ ಪ್ರವೀಣ್ ಜಗಳ ಬಿಡಿಸಿ ಕಳುಹಿಸಿದ್ದ. ​

ಆದರೆ ಜಗಳ ಮಾಡಿದ್ದ ಒಂದು ಗುಂಪಿನ ಕಡೆಯವರು ಪುನಃ ಜಗಳವಾಡಲು ಬಂದಿದ್ದಾರೆ. ಈ ವೇಳೆ ಪ್ರವೀಣ್​ಗೆ ಚಾಕು ಇರಿದಿದ್ದಾರೆ. ಇನ್ನು ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣ್​ರನ್ನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು(ಏ.19) ಬೆಳಗಿನ ಜಾವ ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾನೆ. ಚಾಕು ಇರಿದಿದ್ದ ರಾಘವೇಂದ್ರ ಪಟಾತ್ ಸೇರಿದಂತೆ ನಾಲ್ಕು ಜನರನ್ನ ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಕಲಬುರಗಿ: ಕತ್ತು ಹಿಸುಕಿ, ಮಾರಕಾಸ್ತ್ರದಿಂದ ಹೊಡೆದು ಯುವಕನ ಕೊಲೆ; ಮೂವರು ಆರೋಪಿಗಳನ್ನ ಬಂಧಿಸಿದ ಪೊಲೀಸರು

ಕೋಟೂರ ಗ್ರಾಪಂ ಉಪಾಧ್ಯಕ್ಷನ ಹತ್ಯೆ ಹಿನ್ನೆಲೆ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ

ಹೌದು ಪ್ರವೀಣ್ ಗ್ರಾಪಂ ಉಪಾಧ್ಯಕ್ಷ ಮಾತ್ರವಲ್ಲದೆ, ಬಿಜೆಪಿ ಯುವ ಮೋರ್ಚಾ ಮುಖಂಡನೂ ಆಗಿದ್ದ. ಈ ಹಿನ್ನಲೆ ಇದು ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಯಿರುವ ಕಾರಣ ಗ್ರಾಮಕ್ಕೆ ಎಸ್ಪಿ ಲೋಕೇಶ ಜಗಲಾಸರ್ ಭೇಟಿ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗ್ರಾಮಕ್ಕೆ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಖಾಸಗಿ ಬಸ್​​ ಡಿಕ್ಕಿಯಾಗಿ ಬೈಕ್ ಸವಾರ ಸಾವು

ತುಮಕೂರು: ಖಾಸಗಿ ಬಸ್​​ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಓಬಳಾಪುರ ಟೋಲ್ ಬಳಿ ನಡೆದಿದೆ. ಮೋಹನ್ ಕುಮಾರ್(35) ಮೃತ ರ್ದುದೈವಿ. ತುಮಕೂರು ಕಡೆಯಿಂದ ಕೊರಟಗೆರೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಕೊರಟಗೆರೆಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್​ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದು, ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ