ಹುಬ್ಬಳ್ಳಿಯಲ್ಲಿ ಲಾರಿ, ಖಾಸಗಿ ಬಸ್ ಮುಖಾಮುಖಿ: ಭೀಕರ ಅಪಘಾತದಲ್ಲಿ 8 ಜನರು ದುರ್ಮರಣ

ನ್ಯಾಷನಲ್ ಟ್ರಾವೆಲ್ಸ್​ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಲಾರಿ, ಖಾಸಗಿ ಬಸ್ ಮುಖಾಮುಖಿ: ಭೀಕರ ಅಪಘಾತದಲ್ಲಿ 8 ಜನರು ದುರ್ಮರಣ
ಗಾಯಾಳುಗಳಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Edited By: sandhya thejappa

Updated on: May 24, 2022 | 10:41 AM

ಹುಬ್ಬಳ್ಳಿ: ಲಾರಿ, ಖಾಸಗಿ ಬಸ್ ಮುಖಾಮುಖಿಯಾಗಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ (Hubli-Dharwad) ತಾರಿಹಾಳ ಬೈಪಾಸ್​ನಲ್ಲಿ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಗಾಯಗೊಂಡಿರುವ 25 ಮಂದಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಕೊಲ್ಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ನ್ಯಾಷನಲ್ ಟ್ರಾವೆಲ್ಸ್​ ಬಸ್,​ ಅಕ್ಕಿ ಸಾಗಣೆ ಮಾಡುತ್ತಿದ್ದ ಲಾರಿಗೆ ಮುಖಾಮುಖಿಯಾಗಿತ್ತು. ಲಾರಿಯಲ್ಲಿದ್ದ ಚಾಲಕ, ಕ್ಲೀನರ್ ಸೇರಿದಂತೆ ಮೂವರು ಮೃತಪಟ್ಟರು. ಖಾಸಗಿ ಬಸ್​ನಲ್ಲಿದ್ದ ನಾಲ್ವರು ಮೃತಪಟ್ಟರು. ಕಿಮ್ಸ್ ಆಸ್ಪತ್ರೆಗೆ ಹುಬ್ಬಳ್ಳಿ-ಧಾರವಾಡದ ಪೊಲೀಸ್ ಆಯುಕ್ತ ಲಾಬೂರಾವ್ ಭೇಟಿ ನೀಡಿ, ಗಾಯಾಳುಗಳಿಗೆ ಸಾಂತ್ವನ ಹೇಳಿದರು.

ನ್ಯಾಷನಲ್ ಟ್ರಾವೆಲ್ಸ್​ ಬಸ್ ಚಾಲಕರಾದ ಅತಾವುಲ್ಲಾ, ನಾಗರಾಜು, ಪ್ರಯಾಣಿಕರಾದ ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಬಾಬುಸಾಬ್ (55), ಮೈಸೂರಿನ ಮೊಹಮ್ಮದ್ ದಯಾನ್ (17) ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ 25 ಜನರಿಗೆ ಚಿಕಿತ್ಸೆ ಮುಂದುವರಿದಿದೆ. ಅಪಘಾತದಿಂದ ನಜ್ಜುಗುಜ್ಜಾಗಿರುವ ಎರಡೂ ವಾಹನಗಳನ್ನು ಪೊಲೀಸರು ತೆರವುಗೊಳಿಸಿ, ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: ಪ್ರೋಟೀನ್ ಪೌಡರ್ ಅತಿಯಾಗಿ ಬಳಸ್ತೀರಾ, ಈ ಅಡ್ಡಪರಿಣಾಮಗಳ ಬಗ್ಗೆ ಎಚ್ಚರವಿರಲಿ

ಇದನ್ನೂ ಓದಿ
GT vs RR: ಕೋಲ್ಕತ್ತಾ ಹವಾಮಾನ ಹೇಗಿದೆ?: ಕ್ವಾಲಿಫೈಯರ್ 1 ಪಂದ್ಯ ಮಳೆಯಿಂದ ರದ್ದಾದರೆ ಏನಾಗಲಿದೆ?
ಪ್ರೋಟೀನ್ ಪೌಡರ್ ಅತಿಯಾಗಿ ಬಳಸ್ತೀರಾ, ಈ ಅಡ್ಡಪರಿಣಾಮಗಳ ಬಗ್ಗೆ ಎಚ್ಚರವಿರಲಿ
ಮದರಸಾಗಳು ಆರ್​ಎಸ್​ಎಸ್​ ಶಾಖೆಗಳಂತೆ ಅಲ್ಲ: ಅಸ್ಸಾಂ ಸಿಎಂಗೆ ತಿರುಗೇಟು ಕೊಟ್ಟ ಅಸಾದುದ್ದೀನ್ ಓವೈಸಿ
Yogaraj Bhat: ಶಿವಣ್ಣ- ಪ್ರಭುದೇವ ಕಾಂಬಿನೇಷನ್​ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿರುವ ಯೋಗರಾಜ್ ಭಟ್; ಚಿತ್ರೀಕರಣ ಯಾವಾಗ?

ತಾಯಿಯನ್ನು ಬಿಗಿದಿಪ್ಪಿ ಅಳುತ್ತಿರುವ ಕಂದಮ್ಮ‌:
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮನಕಲುಕುವ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ತಾಯಿಯನ್ನು ಬಿಗಿದಿಪ್ಪಿ ಕಂದಮ್ಮ‌ ಅಳುತ್ತಿದೆ. ನಿನ್ನೆ ರಾತ್ರಿಯಿಂದ ಅನ್ನ, ನೀರಿಲ್ಲದೇ ಮಗು ಒಂದೇ ಸಮನೆ ಕಣ್ಣೀರು ಹಾಕುತ್ತಿದೆ. ಕಿಮ್ಸ್ ಸಿಬ್ಬಂದಿ ಮಗುವಿಗೆ ಚಾಕೋಲೆಟ್ ಕೊಟ್ಟು ಸಂತೈಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಸೂಚನೆ ಬಳಿಕ ತಾಯಿ ಎದೆಹಾಲು ಕುಡಿಸಿದ್ದಾರೆ.

ನಾಲ್ಕೈದು ಜನರ ಸ್ಥಿತಿ ಗಂಭೀರ:
ಅಪಘಾತನದ ಬಗ್ಗೆ ಮಾತನಾಡಿದ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ, ಗಾಯಗೊಂಡವರನ್ನು ಮಧ್ಯರಾತ್ರಿ ಕಿಮ್ಸ್​ ಆಸ್ಪತ್ರೆಗೆ ಕರೆತಂದಿದ್ದರು. 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದರು, ಆಸ್ಪತ್ರೆಯಲ್ಲಿ ಇಬ್ಬರ ಸಾವನ್ನಪ್ಪಿದ್ದಾರೆ. ನಾಲ್ಕೈದು ಜನರ ಸ್ಥಿತಿ ಗಂಭೀರವಾಗಿದೆ, ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಅಪಾಯದಿಂದ ಪಾರಾದ ಕೆಲವರು ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದರು.

ಅಪಘಾತಕ್ಕೆ ಕಾರಣವಾಯ್ತಾ ಬಸ್ ಚಾಲಕನ ಅಜಾಗೂರತೆ‌?
ಭೀಕರ ದುರಂತಕ್ಕೆ ಬಸ್ ಚಾಲಕನ ಅಜಾಗೂರತೆ ಕಾರಣ ಎಂದು ಹೇಳಲಾಗುತ್ತಿದೆ‌. ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಬಸ್ ಚಾಲಕ ಮುಂದೆ ಹೋಗುತ್ತಿದ್ದ ಟ್ರ್ಯಾಕ್ಟರ್ ಓವರ್​ ಟೇಕ್ ಮಾಡಿದ್ದಾರಂತೆ. ರಸ್ತೆ ಕಿರಿದಾಗಿದ್ದರಿಂದ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:35 am, Tue, 24 May 22

Web contact

TV9 Kannada

Read More
Follow Us