AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು: ಧಾರವಾಡ ಹೈಕೋರ್ಟ್​​

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು. ಅತ್ಯಗತ್ಯ ಸಂದರ್ಭಗಳಲ್ಲಿ ಮಾತ್ರ ಕೈಕೋಳ ಹಾಕಬೇಕು ಎಂದು ಧಾರವಾಡ ಹೈಕೋರ್ಟ್​​ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ.

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು: ಧಾರವಾಡ ಹೈಕೋರ್ಟ್​​
ಕೈಕೋಳ ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jun 29, 2022 | 5:28 PM

Share

ಧಾರವಾಡ: ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ (Accused) ಕೈಕೋಳ (Handcuffs) ಹಾಕಬಾರದು. ಅತ್ಯಗತ್ಯ ಸಂದರ್ಭಗಳಲ್ಲಿ ಮಾತ್ರ ಕೈಕೋಳ ಹಾಕಬೇಕು ಎಂದು ಧಾರವಾಡ (Dharwad) ಹೈಕೋರ್ಟ್​​ನ (Highcourt) ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ. ಕಾನೂನು ವಿದ್ಯಾರ್ಥಿ (Law Student) ಸುಪ್ರೀತ್ ಈಶ್ವರ್ ದಿವಾಟೆ  ಅವರಿಗೆ ಕೈಕೋಳ ಹಾಕಲಾಗಿತ್ತು. ಈ ಸಂಬಂಧ ವಿದ್ಯಾರ್ಥಿ ಸುಪ್ರೀತ್ ಈಶ್ವರ್ ದಿವಾಟೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದೆ ನ್ಯಾಯಾಲಯ ತೀರ್ಪು ನೀಡಿ, ಕೈಕೋಳ ಹಾಕಲಾಗಿದ್ದ ಕಾನೂನು ವಿದ್ಯಾರ್ಥಿಗೆ 2 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದೆ.

ಇದನ್ನು ಓದಿ: ಬೀದಿ ನಾಯಿಗಳಿಂದ ನಾಗರಿಕರಿಗೆ ರಕ್ಷಣೆ ಒದಗಿಸುವುದು ಸ್ಥಳೀಯ ಆಡಳಿತ ಸಂಸ್ಥೆಗಳ ಕರ್ತವ್ಯ: ಹೈಕೋರ್ಟ್​

ಕೈದಿ ತಪ್ಪಿಸಿಕೊಳ್ಳುವ ಅಥವಾ ತೊಂದರೆ ಮಾಡುವಂತಿದ್ದರೆ ಮಾತ್ರ ಕೈಕೋಳ ಹಾಕಬೇಕು.  ಕೈದಿಗೆ ಕೈಕೋಳ ಹಾಕಲು ಕೇಸ್ ಡೈರಿಯಲ್ಲಿ ಕಾರಣ ಬರೆಯಬೇಕು. ಕೋರ್ಟ್​ಗೆ ಹಾಜರುಪಡಿಸುವ ಕೈದಿಯನ್ನು ಜಡ್ಜ್​ ಕೈಕೋಳ ಹಾಕಲಾಗಿತ್ತೇ ಎಂಬುದನ್ನು ವಿಚಾರಿಸಬೇಕು. ಕೈಕೋಳ ಹಾಕಿದ್ದರೆ ಅದಕ್ಕೆ ಅಧಿಕಾರಿಗಳು ಕಾರಣ ನೀಡಬೇಕು. ಸಾಧ್ಯವಾದಷ್ಟು ವಿಡಿಯೊ ಕಾನ್ಫರೆನ್ಸ್​ನಲ್ಲೇ ಕೈದಿಗಳನ್ನು ಹಾಜರುಪಡಿಸಬೇಕು. ಆದಷ್ಟೂ ಕೈಕೋಳ ಹಾಕಲು ಕೋರ್ಟ್​ನಿಂದಲೇ ಆದೇಶ ಪಡೆಯಬೇಕು. ಇಲ್ಲವಾದರೆ ಅಧಿಕಾರಿಗೆ ತೊಂದರೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಇದನ್ನು ಓದಿ: ಕೇವಲ ಡಾಕ್ಯುಮೆಂಟ್ ಗೋಸ್ಕರ ವಾಹನ ತಡೆಯೋದು ಬೇಡ; 10 ಜನಕ್ಕಾಗಿ 100 ಜನರಿಗೆ ಸಮಸ್ಯೆ‌ ಆಗ‌ಬಾರದು – ಡಿಜಿ & ಐಜಿಪಿ ಪ್ರವೀಣ್ ಸೂದ್ ಪುನರುಚ್ಚಾರ

ಪೊಲೀಸ್ ಠಾಣೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡಬೇಕು. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಬಾಡಿ ಕ್ಯಾಮರಾ ನೀಡಬೇಕು. ಬಾಡಿ ಕ್ಯಾಮರಾಗಳಲ್ಲಿ ಮೈಕ್ರೋ ಫೋನ್ ವ್ಯವಸ್ಥೆ ಇರಬೇಕು. ಆ ರೆಕಾರ್ಡಿಂಗ್​ಗಳನ್ನು ಒಂದು ವರ್ಷ ಸಂರಕ್ಷಿಸಿಡಬೇಕು. ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿ ನಿಗದಿಪಡಿಸಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.

Follow Us
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು