AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು: ಧಾರವಾಡ ಹೈಕೋರ್ಟ್​​

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು. ಅತ್ಯಗತ್ಯ ಸಂದರ್ಭಗಳಲ್ಲಿ ಮಾತ್ರ ಕೈಕೋಳ ಹಾಕಬೇಕು ಎಂದು ಧಾರವಾಡ ಹೈಕೋರ್ಟ್​​ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ.

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು: ಧಾರವಾಡ ಹೈಕೋರ್ಟ್​​
ಕೈಕೋಳ ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Jun 29, 2022 | 5:28 PM

Share

ಧಾರವಾಡ: ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ (Accused) ಕೈಕೋಳ (Handcuffs) ಹಾಕಬಾರದು. ಅತ್ಯಗತ್ಯ ಸಂದರ್ಭಗಳಲ್ಲಿ ಮಾತ್ರ ಕೈಕೋಳ ಹಾಕಬೇಕು ಎಂದು ಧಾರವಾಡ (Dharwad) ಹೈಕೋರ್ಟ್​​ನ (Highcourt) ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ. ಕಾನೂನು ವಿದ್ಯಾರ್ಥಿ (Law Student) ಸುಪ್ರೀತ್ ಈಶ್ವರ್ ದಿವಾಟೆ  ಅವರಿಗೆ ಕೈಕೋಳ ಹಾಕಲಾಗಿತ್ತು. ಈ ಸಂಬಂಧ ವಿದ್ಯಾರ್ಥಿ ಸುಪ್ರೀತ್ ಈಶ್ವರ್ ದಿವಾಟೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದೆ ನ್ಯಾಯಾಲಯ ತೀರ್ಪು ನೀಡಿ, ಕೈಕೋಳ ಹಾಕಲಾಗಿದ್ದ ಕಾನೂನು ವಿದ್ಯಾರ್ಥಿಗೆ 2 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದೆ.

ಇದನ್ನು ಓದಿ: ಬೀದಿ ನಾಯಿಗಳಿಂದ ನಾಗರಿಕರಿಗೆ ರಕ್ಷಣೆ ಒದಗಿಸುವುದು ಸ್ಥಳೀಯ ಆಡಳಿತ ಸಂಸ್ಥೆಗಳ ಕರ್ತವ್ಯ: ಹೈಕೋರ್ಟ್​

ಕೈದಿ ತಪ್ಪಿಸಿಕೊಳ್ಳುವ ಅಥವಾ ತೊಂದರೆ ಮಾಡುವಂತಿದ್ದರೆ ಮಾತ್ರ ಕೈಕೋಳ ಹಾಕಬೇಕು.  ಕೈದಿಗೆ ಕೈಕೋಳ ಹಾಕಲು ಕೇಸ್ ಡೈರಿಯಲ್ಲಿ ಕಾರಣ ಬರೆಯಬೇಕು. ಕೋರ್ಟ್​ಗೆ ಹಾಜರುಪಡಿಸುವ ಕೈದಿಯನ್ನು ಜಡ್ಜ್​ ಕೈಕೋಳ ಹಾಕಲಾಗಿತ್ತೇ ಎಂಬುದನ್ನು ವಿಚಾರಿಸಬೇಕು. ಕೈಕೋಳ ಹಾಕಿದ್ದರೆ ಅದಕ್ಕೆ ಅಧಿಕಾರಿಗಳು ಕಾರಣ ನೀಡಬೇಕು. ಸಾಧ್ಯವಾದಷ್ಟು ವಿಡಿಯೊ ಕಾನ್ಫರೆನ್ಸ್​ನಲ್ಲೇ ಕೈದಿಗಳನ್ನು ಹಾಜರುಪಡಿಸಬೇಕು. ಆದಷ್ಟೂ ಕೈಕೋಳ ಹಾಕಲು ಕೋರ್ಟ್​ನಿಂದಲೇ ಆದೇಶ ಪಡೆಯಬೇಕು. ಇಲ್ಲವಾದರೆ ಅಧಿಕಾರಿಗೆ ತೊಂದರೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಇದನ್ನು ಓದಿ: ಕೇವಲ ಡಾಕ್ಯುಮೆಂಟ್ ಗೋಸ್ಕರ ವಾಹನ ತಡೆಯೋದು ಬೇಡ; 10 ಜನಕ್ಕಾಗಿ 100 ಜನರಿಗೆ ಸಮಸ್ಯೆ‌ ಆಗ‌ಬಾರದು – ಡಿಜಿ & ಐಜಿಪಿ ಪ್ರವೀಣ್ ಸೂದ್ ಪುನರುಚ್ಚಾರ

ಪೊಲೀಸ್ ಠಾಣೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡಬೇಕು. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಬಾಡಿ ಕ್ಯಾಮರಾ ನೀಡಬೇಕು. ಬಾಡಿ ಕ್ಯಾಮರಾಗಳಲ್ಲಿ ಮೈಕ್ರೋ ಫೋನ್ ವ್ಯವಸ್ಥೆ ಇರಬೇಕು. ಆ ರೆಕಾರ್ಡಿಂಗ್​ಗಳನ್ನು ಒಂದು ವರ್ಷ ಸಂರಕ್ಷಿಸಿಡಬೇಕು. ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿ ನಿಗದಿಪಡಿಸಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.

Follow Us
TV9 Web
TV9 Web

TV9 Kannada

Read More
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ವಿಜಯ್ ನೋಡಲು ಟಿವಿಕೆ ಬಾವುಟ ಹಿಡಿದು ಕಾಯುತ್ತಿರುವ ಫ್ಯಾನ್ಸ್
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು