Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು: ಧಾರವಾಡ ಹೈಕೋರ್ಟ್​​

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು. ಅತ್ಯಗತ್ಯ ಸಂದರ್ಭಗಳಲ್ಲಿ ಮಾತ್ರ ಕೈಕೋಳ ಹಾಕಬೇಕು ಎಂದು ಧಾರವಾಡ ಹೈಕೋರ್ಟ್​​ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ.

ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ ಕೈಕೋಳ ಹಾಕಬಾರದು: ಧಾರವಾಡ ಹೈಕೋರ್ಟ್​​
ಕೈಕೋಳ ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 29, 2022 | 5:28 PM

ಧಾರವಾಡ: ಬಂಧಿತರಾಗುವ ಸಾಮಾನ್ಯ ಕೈದಿಗಳಿಗೆ (Accused) ಕೈಕೋಳ (Handcuffs) ಹಾಕಬಾರದು. ಅತ್ಯಗತ್ಯ ಸಂದರ್ಭಗಳಲ್ಲಿ ಮಾತ್ರ ಕೈಕೋಳ ಹಾಕಬೇಕು ಎಂದು ಧಾರವಾಡ (Dharwad) ಹೈಕೋರ್ಟ್​​ನ (Highcourt) ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ತೀರ್ಪು ನೀಡಿದೆ. ಕಾನೂನು ವಿದ್ಯಾರ್ಥಿ (Law Student) ಸುಪ್ರೀತ್ ಈಶ್ವರ್ ದಿವಾಟೆ  ಅವರಿಗೆ ಕೈಕೋಳ ಹಾಕಲಾಗಿತ್ತು. ಈ ಸಂಬಂಧ ವಿದ್ಯಾರ್ಥಿ ಸುಪ್ರೀತ್ ಈಶ್ವರ್ ದಿವಾಟೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದೆ ನ್ಯಾಯಾಲಯ ತೀರ್ಪು ನೀಡಿ, ಕೈಕೋಳ ಹಾಕಲಾಗಿದ್ದ ಕಾನೂನು ವಿದ್ಯಾರ್ಥಿಗೆ 2 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದೆ.

ಇದನ್ನು ಓದಿ: ಬೀದಿ ನಾಯಿಗಳಿಂದ ನಾಗರಿಕರಿಗೆ ರಕ್ಷಣೆ ಒದಗಿಸುವುದು ಸ್ಥಳೀಯ ಆಡಳಿತ ಸಂಸ್ಥೆಗಳ ಕರ್ತವ್ಯ: ಹೈಕೋರ್ಟ್​

ಕೈದಿ ತಪ್ಪಿಸಿಕೊಳ್ಳುವ ಅಥವಾ ತೊಂದರೆ ಮಾಡುವಂತಿದ್ದರೆ ಮಾತ್ರ ಕೈಕೋಳ ಹಾಕಬೇಕು.  ಕೈದಿಗೆ ಕೈಕೋಳ ಹಾಕಲು ಕೇಸ್ ಡೈರಿಯಲ್ಲಿ ಕಾರಣ ಬರೆಯಬೇಕು. ಕೋರ್ಟ್​ಗೆ ಹಾಜರುಪಡಿಸುವ ಕೈದಿಯನ್ನು ಜಡ್ಜ್​ ಕೈಕೋಳ ಹಾಕಲಾಗಿತ್ತೇ ಎಂಬುದನ್ನು ವಿಚಾರಿಸಬೇಕು. ಕೈಕೋಳ ಹಾಕಿದ್ದರೆ ಅದಕ್ಕೆ ಅಧಿಕಾರಿಗಳು ಕಾರಣ ನೀಡಬೇಕು. ಸಾಧ್ಯವಾದಷ್ಟು ವಿಡಿಯೊ ಕಾನ್ಫರೆನ್ಸ್​ನಲ್ಲೇ ಕೈದಿಗಳನ್ನು ಹಾಜರುಪಡಿಸಬೇಕು. ಆದಷ್ಟೂ ಕೈಕೋಳ ಹಾಕಲು ಕೋರ್ಟ್​ನಿಂದಲೇ ಆದೇಶ ಪಡೆಯಬೇಕು. ಇಲ್ಲವಾದರೆ ಅಧಿಕಾರಿಗೆ ತೊಂದರೆ ಎದುರಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಇದನ್ನು ಓದಿ: ಕೇವಲ ಡಾಕ್ಯುಮೆಂಟ್ ಗೋಸ್ಕರ ವಾಹನ ತಡೆಯೋದು ಬೇಡ; 10 ಜನಕ್ಕಾಗಿ 100 ಜನರಿಗೆ ಸಮಸ್ಯೆ‌ ಆಗ‌ಬಾರದು – ಡಿಜಿ & ಐಜಿಪಿ ಪ್ರವೀಣ್ ಸೂದ್ ಪುನರುಚ್ಚಾರ

ಪೊಲೀಸ್ ಠಾಣೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡಬೇಕು. ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಬಾಡಿ ಕ್ಯಾಮರಾ ನೀಡಬೇಕು. ಬಾಡಿ ಕ್ಯಾಮರಾಗಳಲ್ಲಿ ಮೈಕ್ರೋ ಫೋನ್ ವ್ಯವಸ್ಥೆ ಇರಬೇಕು. ಆ ರೆಕಾರ್ಡಿಂಗ್​ಗಳನ್ನು ಒಂದು ವರ್ಷ ಸಂರಕ್ಷಿಸಿಡಬೇಕು. ಪೊಲೀಸ್ ಸಿಬ್ಬಂದಿಗೆ ಮಾರ್ಗಸೂಚಿ ನಿಗದಿಪಡಿಸಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ