AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆ, ಖಾತೆಯಿಂದ 64 ಸಾವಿರ ರೂ. ಖಾಲಿ!

ಒಟಿಪಿ ಬಂದಿಲ್ಲ, ಹಣ ವರ್ಗಾವಣೆ ಸಂದೇಶವೂ ಬಂದಿಲ್ಲ. ಆದರೂ ಮಹಿಳೆಯ ಬ್ಯಾಂಕ್ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ಮಾಯವಾಗಿದೆ. ಇಂತಹ ಒಂದು ವಂಚನೆ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ, ತನ್ನ ಹಣ ವಾಪಸ್ ಕೊಡಿಸುವಂತೆ ನೊಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದು, ಕುಂದಗೋಳ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆ, ಖಾತೆಯಿಂದ 64 ಸಾವಿರ ರೂ. ಖಾಲಿ!
ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆಯ ಖಾತೆಯಲ್ಲಿದ್ದ 64 ಸಾವಿರ ರೂ. ವೈಬರ್ ವಂಚಕರ ಪಾಲು (ಸಾಂದರ್ಭಿಕ ಚಿತ್ರ)Image Credit source: iStock Photo
ಶಿವಕುಮಾರ್ ಪತ್ತಾರ್
| Edited By: Rakesh Nayak Manchi|

Updated on: Nov 28, 2023 | 4:59 PM

Share

ಹುಬ್ಬಳ್ಳಿ, ನ.28: ನೋಂದಣಿ ಕಚೇರಿಯಲ್ಲಿ ಹೆಬ್ಬೆಟ್ಟು ಒತ್ತಿದ ನಂತರ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ವಂಚಕರ ಪಾಲಾದ ಪ್ರಕರಣ ಹುಬ್ಬಳ್ಳಿಯ (Hubli) ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆಯು ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಯರಿನಾರಾಯಣಪುರದ ಮಲ್ಲವ್ವ ಮುಳ್ಳಹಳ್ಳಿ ಎಂಬವರು ಯರಗುಪ್ಪಿಯ ಕೆ.ವಿ.ಜಿ. ಬ್ಯಾಂಕ್​ ಖಾತೆಯಲ್ಲಿ ಉಳಿತಾಯದ ಹಣ ಹೊಂದಿದ್ದರು. ಆದರೆ, ಸ್ಥಳ ಖರೀದಿಗಾಗಿ ಕುಂದಗೋಳದ ನೋಂದಣಿ ಕಛೇರಿಯಲ್ಲಿ ಹೆಬ್ಬಟ್ಟು ಒತ್ತಿದ್ದಾರೆ. ಅದರ ನಂತರ ಒಟಿಪಿ, ಹಣ ವರ್ಗಾವಣೆ ಸಂದೇಶ ಯಾವುದು ಬಾರದೆ ಹಂತ ಹಂತವಾಗಿ ಮಹಿಳೆಯ ಖಾತೆಯಿಂದ ಹಣ ಮಾಯವಾಗಿದೆ.

ಇದನ್ನೂ ಓದಿ: ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ

ಸೈಬರ್ ವಂಚಕರು ಮಹಿಳೆಯ ಖಾತೆಯಿಂದ ಅಕ್ರೋಬರ್ 24 ರಿಂದ ನವೆಂಬರ್ 3 ರವರೆಗೆ ಏಳು ಬಾರಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇತ್ತ, 64 ಸಾವಿರ ಹಣ ಕಳೆದುಕೊಂಡು ಕಂಗಾಲಾಗಿರುವ ಮಹಿಳೆ, ತನ್ನ ಹಣ ವಾಪಸ್ ಕೊಡಿಸುವಂತೆ ಕುಂದಗೋಳ ಪೊಲಿಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?