AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆ, ಖಾತೆಯಿಂದ 64 ಸಾವಿರ ರೂ. ಖಾಲಿ!

ಒಟಿಪಿ ಬಂದಿಲ್ಲ, ಹಣ ವರ್ಗಾವಣೆ ಸಂದೇಶವೂ ಬಂದಿಲ್ಲ. ಆದರೂ ಮಹಿಳೆಯ ಬ್ಯಾಂಕ್ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ಮಾಯವಾಗಿದೆ. ಇಂತಹ ಒಂದು ವಂಚನೆ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ, ತನ್ನ ಹಣ ವಾಪಸ್ ಕೊಡಿಸುವಂತೆ ನೊಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದು, ಕುಂದಗೋಳ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆ, ಖಾತೆಯಿಂದ 64 ಸಾವಿರ ರೂ. ಖಾಲಿ!
ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆಯ ಖಾತೆಯಲ್ಲಿದ್ದ 64 ಸಾವಿರ ರೂ. ವೈಬರ್ ವಂಚಕರ ಪಾಲು (ಸಾಂದರ್ಭಿಕ ಚಿತ್ರ)Image Credit source: iStock Photo
Follow us
ಶಿವಕುಮಾರ್ ಪತ್ತಾರ್
| Updated By: Rakesh Nayak Manchi

Updated on: Nov 28, 2023 | 4:59 PM

ಹುಬ್ಬಳ್ಳಿ, ನ.28: ನೋಂದಣಿ ಕಚೇರಿಯಲ್ಲಿ ಹೆಬ್ಬೆಟ್ಟು ಒತ್ತಿದ ನಂತರ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ವಂಚಕರ ಪಾಲಾದ ಪ್ರಕರಣ ಹುಬ್ಬಳ್ಳಿಯ (Hubli) ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆಯು ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಯರಿನಾರಾಯಣಪುರದ ಮಲ್ಲವ್ವ ಮುಳ್ಳಹಳ್ಳಿ ಎಂಬವರು ಯರಗುಪ್ಪಿಯ ಕೆ.ವಿ.ಜಿ. ಬ್ಯಾಂಕ್​ ಖಾತೆಯಲ್ಲಿ ಉಳಿತಾಯದ ಹಣ ಹೊಂದಿದ್ದರು. ಆದರೆ, ಸ್ಥಳ ಖರೀದಿಗಾಗಿ ಕುಂದಗೋಳದ ನೋಂದಣಿ ಕಛೇರಿಯಲ್ಲಿ ಹೆಬ್ಬಟ್ಟು ಒತ್ತಿದ್ದಾರೆ. ಅದರ ನಂತರ ಒಟಿಪಿ, ಹಣ ವರ್ಗಾವಣೆ ಸಂದೇಶ ಯಾವುದು ಬಾರದೆ ಹಂತ ಹಂತವಾಗಿ ಮಹಿಳೆಯ ಖಾತೆಯಿಂದ ಹಣ ಮಾಯವಾಗಿದೆ.

ಇದನ್ನೂ ಓದಿ: ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ

ಸೈಬರ್ ವಂಚಕರು ಮಹಿಳೆಯ ಖಾತೆಯಿಂದ ಅಕ್ರೋಬರ್ 24 ರಿಂದ ನವೆಂಬರ್ 3 ರವರೆಗೆ ಏಳು ಬಾರಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇತ್ತ, 64 ಸಾವಿರ ಹಣ ಕಳೆದುಕೊಂಡು ಕಂಗಾಲಾಗಿರುವ ಮಹಿಳೆ, ತನ್ನ ಹಣ ವಾಪಸ್ ಕೊಡಿಸುವಂತೆ ಕುಂದಗೋಳ ಪೊಲಿಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!