AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆ, ಖಾತೆಯಿಂದ 64 ಸಾವಿರ ರೂ. ಖಾಲಿ!

ಒಟಿಪಿ ಬಂದಿಲ್ಲ, ಹಣ ವರ್ಗಾವಣೆ ಸಂದೇಶವೂ ಬಂದಿಲ್ಲ. ಆದರೂ ಮಹಿಳೆಯ ಬ್ಯಾಂಕ್ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ಮಾಯವಾಗಿದೆ. ಇಂತಹ ಒಂದು ವಂಚನೆ ಪ್ರಕರಣ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ, ತನ್ನ ಹಣ ವಾಪಸ್ ಕೊಡಿಸುವಂತೆ ನೊಂದ ಮಹಿಳೆ ಪೊಲೀಸರ ಮೊರೆ ಹೋಗಿದ್ದು, ಕುಂದಗೋಳ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆ, ಖಾತೆಯಿಂದ 64 ಸಾವಿರ ರೂ. ಖಾಲಿ!
ನೋಂದಣಿ ಕಛೇರಿಯಲ್ಲಿ ಹೆಬ್ಬೆಟ್ಟು ಒತ್ತಿದ್ದ ಮಹಿಳೆಯ ಖಾತೆಯಲ್ಲಿದ್ದ 64 ಸಾವಿರ ರೂ. ವೈಬರ್ ವಂಚಕರ ಪಾಲು (ಸಾಂದರ್ಭಿಕ ಚಿತ್ರ)Image Credit source: iStock Photo
ಶಿವಕುಮಾರ್ ಪತ್ತಾರ್
| Updated By: Rakesh Nayak Manchi|

Updated on: Nov 28, 2023 | 4:59 PM

Share

ಹುಬ್ಬಳ್ಳಿ, ನ.28: ನೋಂದಣಿ ಕಚೇರಿಯಲ್ಲಿ ಹೆಬ್ಬೆಟ್ಟು ಒತ್ತಿದ ನಂತರ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಲ್ಲಿದ್ದ ಸಾವಿರಾರು ರೂಪಾಯಿ ವಂಚಕರ ಪಾಲಾದ ಪ್ರಕರಣ ಹುಬ್ಬಳ್ಳಿಯ (Hubli) ಕುಂದಗೋಳ ತಾಲೂಕಿನ ಯರಗುಪ್ಪಿಯಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆಯು ಹಣ ವಾಪಸ್ ಕೊಡಿಸುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಯರಿನಾರಾಯಣಪುರದ ಮಲ್ಲವ್ವ ಮುಳ್ಳಹಳ್ಳಿ ಎಂಬವರು ಯರಗುಪ್ಪಿಯ ಕೆ.ವಿ.ಜಿ. ಬ್ಯಾಂಕ್​ ಖಾತೆಯಲ್ಲಿ ಉಳಿತಾಯದ ಹಣ ಹೊಂದಿದ್ದರು. ಆದರೆ, ಸ್ಥಳ ಖರೀದಿಗಾಗಿ ಕುಂದಗೋಳದ ನೋಂದಣಿ ಕಛೇರಿಯಲ್ಲಿ ಹೆಬ್ಬಟ್ಟು ಒತ್ತಿದ್ದಾರೆ. ಅದರ ನಂತರ ಒಟಿಪಿ, ಹಣ ವರ್ಗಾವಣೆ ಸಂದೇಶ ಯಾವುದು ಬಾರದೆ ಹಂತ ಹಂತವಾಗಿ ಮಹಿಳೆಯ ಖಾತೆಯಿಂದ ಹಣ ಮಾಯವಾಗಿದೆ.

ಇದನ್ನೂ ಓದಿ: ಸೈಬರ್ ವಂಚನೆ ಪ್ರಕರಣಗಳ ಬಗ್ಗೆ ಚರ್ಚಿಸಲು ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ಸಭೆ ಕರೆದ ಸರ್ಕಾರ

ಸೈಬರ್ ವಂಚಕರು ಮಹಿಳೆಯ ಖಾತೆಯಿಂದ ಅಕ್ರೋಬರ್ 24 ರಿಂದ ನವೆಂಬರ್ 3 ರವರೆಗೆ ಏಳು ಬಾರಿ ಹಣ ವರ್ಗಾವಣೆ ಮಾಡಿಕೊಂಡಿದ್ದಾರೆ. ಇತ್ತ, 64 ಸಾವಿರ ಹಣ ಕಳೆದುಕೊಂಡು ಕಂಗಾಲಾಗಿರುವ ಮಹಿಳೆ, ತನ್ನ ಹಣ ವಾಪಸ್ ಕೊಡಿಸುವಂತೆ ಕುಂದಗೋಳ ಪೊಲಿಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಶರಣಗೌಡ ಕಂದ್ಕೂರ್ ನೆರವಿಗೆ ಧಾವಿಸಿದ ಜೆಡಿಎಸ್ ಮತ್ತು ಬಿಜೆಪಿ ಶಾಸಕರು
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ವಿಷ್ಣುವರ್ಧನ್ ಸ್ಮಾರಕ ವಿಚಾರದಲ್ಲಿ ತಾವು ಮಾಡಿದ ಶಪಥ ರಿವೀಲ್ ಮಾಡಿದ ವೀರಕಪು
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಫಾಲ್ಸ್, ವಿಡಿಯೋ ನೋಡಿ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ತಿಮರೋಡಿಯನ್ನು ಬಂಧಿಸುವ ಮುನ್ನ ಪೊಲೀಸ್ ಮತ್ತು ವಕೀಲರ ನಡುವೆ ವಾಗ್ವಾದ
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ಮಹೇಶ್ ತಿಮರೋಡಿ ಮನೇಲಿ 4 ದಿನ ಇದ್ದೆ, ಊಟ ಮಾತ್ರ ಹಾಕಿದ್ದು: ಸುಜಾತ ಭಟ್
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
ವೈಷ್ಣೋದೇವಿ ಯಾತ್ರಿಕರ ಕರೆದೊಯ್ಯುತ್ತಿದ್ದ ಬಸ್ ಅಪಘಾತ, ಓರ್ವ ಸಾವು
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ