AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ ಘೋಷಣೆ ಬೆನ್ನಲ್ಲೇ ಆಧಾರ್ ತಿದ್ದುಪಡಿಗೆ ಮುಗಿಬಿದ್ದ ಮಹಿಳೆಯರು

ಗೃಹ ಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯ ಹಿನ್ನೆಲೆ ಹುಬ್ಬಳ್ಳಿಯ ಆಧಾರ್ ಸೇವಾ ಕೇಂದ್ರಗಳು ತುಂಬಿ ತುಳುಕುತ್ತಿವೆ. ನೂಕುನುಗ್ಗಲು ನಿಯಂತ್ರಣಕ್ಕೆ ಸೇವಾ ಕೇಂದ್ರದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Gruha Lakshmi Scheme: ಗೃಹ ಲಕ್ಷ್ಮೀ ಯೋಜನೆ ಘೋಷಣೆ ಬೆನ್ನಲ್ಲೇ ಆಧಾರ್ ತಿದ್ದುಪಡಿಗೆ ಮುಗಿಬಿದ್ದ ಮಹಿಳೆಯರು
ಗೃಹ ಲಕ್ಷ್ಮೀ ಯೋಜನೆ ಘೋಷಣೆ ಬೆನ್ನಲ್ಲೇ ಆಧಾರ್ ತಿದ್ದುಪಡಿಗೆ ಮುಗಿಬಿದ್ದ ಮಹಿಳೆಯರು
TV9 Web
| Edited By: ಆಯೇಷಾ ಬಾನು|

Updated on: Jun 14, 2023 | 2:04 PM

Share

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ನೇತೃತ್ವದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲೊಂದಾದ(Congress Guarantee) ಗೃಹ ಲಕ್ಷ್ಮೀ ಯೋಜನೆಯನ್ನು(Gruha Lakshmi Scheme) ಘೋಷಣೆ ಮಾಡಲಾಗಿದ್ದು, ಆಧಾರ್ ತಿದ್ದುಪಡಿಗೆ ಮಹಿಳೆಯರು ಲಗ್ಗೆ ಇಟ್ಟಿದ್ದಾರೆ. ನೂಕುನುಗ್ಗಲು ನಿಯಂತ್ರಣಕ್ಕೆ ಸೇವಾ ಕೇಂದ್ರದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಗೃಹ ಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯ ಹಿನ್ನೆಲೆ ಹುಬ್ಬಳ್ಳಿಯ ಆಧಾರ್ ಸೇವಾ ಕೇಂದ್ರಗಳು ತುಂಬಿ ತುಳುಕುತ್ತಿವೆ. ಕೆಲ ದಿನಗಳ ಹಿಂದೆಯಷ್ಟೇ ಅಲ್ಲೊಬ್ಬರು, ಇಲ್ಲೊಬ್ಬರು ಕಾಣಿಸಿಕೊಳ್ಳುತ್ತಿದ್ದ ಆಧಾರ್ ಕೇಂದ್ರದಲ್ಲಿ ಇದೀಗ ಸಾವಿರಾರು ಜನರು ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಮಹಿಳೆಯರು ದಿಢೀರ್ ದಾಂಗುಡಿ ಇಟ್ಟಿದ್ದರಿಂದ ಆಧಾರ್ ಸೇವಾ ಕೇಂದ್ರದ ಎದುರು ನೂಕು ನುಗ್ಗಲು ಉಂಟಾಯಿತು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ 11ರಂದು ಉಚಿತ ಬಸ್ ಪ್ರಯಾಣದೊಂದಿಗೆ ಶುರುವಾಗುತ್ತಿದ್ದಂತೆ. ಎಚ್ಚೆತ್ತುಕೊಂಡಿರುವ ಮಹಿಳೆಯರು ಹಲವರು ಯೋಜನೆಗಳ ಲಾಭ ಪಡೆಯಲು ಆಧಾರ್ ಸೇವಾ ಕೇಂದ್ರದತ್ತ ಧಾವಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಡಿ ತಿಂಗಳಿಗೆ 2 ಸಾವಿರ ರೂ. ಪಡೆಯಲು ಆಧಾರ್ ಕಾರ್ಡ್ ನಿಗದಿಪಡಿಸಲಾಗಿದೆ. ಅದಕ್ಕಾಗಿ ಆಧಾರ್ ಕಾರ್ಡ್ ತಿದ್ದುಪಡಿಗಾಗಿ ನೂರಾರು ಮಹಿಳೆಯರು ಆಧಾರ್ ಸೇವಾ ಕೇಂದ್ರಕ್ಕೆ ಲಗ್ಗೆ ಇಟ್ಟಿದ್ದಾರೆ.

ಇದನ್ನೂ ಓದಿ: ರೆಸಾರ್ಟ್​ನಲ್ಲಿ ಶಾಮನೂರು ಶಿವಶಂಕರಪ್ಪ ಭೇಟಿಯಾಗಿದ್ಯಾಕೆ? ಕಾರಣ ಕೊಟ್ಟ ಬೊಮ್ಮಾಯಿ

After the announcement of Griha Lakshmi Yojana, the women who have completed Aadhaar amendment

ಆಧಾರ್ ತಿದ್ದುಪಡಿಗೆ ಮುಗಿಬಿದ್ದ ಮಹಿಳೆಯರು

ಸೇವಾ ಕೇಂದ್ರಕ್ಕೆ ಬಂದವರಲ್ಲಿ ಅಡ್ರೆಸ್ ಬದಲಾವಣೆ ಸಂಖ್ಯೆಯೇ ಹೆಚ್ಚಾಗಿದೆ. ಇನ್ನು ಕೆಲವರು ಮದುವೆಯಾಗಿ ಗಂಡನ ಮನೆಗೆ ಬಂದವರು ಸ್ಥಳ ಬದಲಾವಣೆ ಮಾಡಿಸುತ್ತಿದ್ದು ಇನ್ನೂ ಕೆಲವರು ಜನ್ಮದಿನಾಂಕ ತಿದ್ದುಪಡಿ ಮಾಡಿಸಲು ಆಗಮಿಸುತ್ತಿದ್ದಾರೆ. ಮತ್ತೆ ಹಲವರು ಪತಿ/ಪತ್ನಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಬಂದಿದ್ದಾರೆ. ಬಹಳಷ್ಟು ಆಧಾರ್ ಕಾರ್ಡ್‌ಗಳಲ್ಲಿ ಗಂಡನ ಹೆಸರು ಕೇರ್/ ಆಫ್ ಎಂದು ನಮೂದಿಸಲಾಗಿದೆ. ಇದು ಆಧಾರ್ ತಂತ್ರಾಂಶ ಲೋಪ ಎಂಬ ಮಾತುಗಳು ಕೇಳಿ ಬರುತ್ತಿವೆ. ಗ್ಯಾರಂಟಿ ಯೋಜನೆಯಡಿ ಎರಡು ಸಾವಿರ ರೂ.ಗಳನ್ನು ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ ನೇರ ಜಮಾ ಮಾಡುವುದಾಗಿ ಸರ್ಕಾರ ಸ್ಪಷ್ಟವಾಗಿ ಹೇಳಿದೆ. ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಜೋಡಣೆ ಕಡ್ಡಾಯವಾಗಿದೆ. ಇದುವರೆಗೂ ಬಹಳಷ್ಟು ಮಹಿಳೆಯರು ಖಾತೆಗೆ ಆಧಾರ್ ಅಪಡೇಟ್ ಮಾಡಿಲ್ಲ. ಹಾಗಾಗಿ ಮಹಿಳೆಯರು ಬ್ಯಾಂಕ್ ಖಾತೆಗೆ ಹೊಂದಾಣಿಕೆಯಾಗುವಂತೆ ಜನ್ಮದಿನಾಂಕ, ಅಡ್ರೆಸ್, ಹೆಸರು ಇತ್ಯಾದಿ ಸಂಗತಿಗಳ ತಿದ್ದುಪಡಿ ಮಾಡಿಸಲು ಸೇವಾ ಕೇಂದ್ರಗಳಿಗೆ ಓಡಾಟ ಆರಂಭಿಸಿದ್ದಾರೆ. ಪುಟ್ಟ ಮಕ್ಕಳ ಆಧಾರ ಕಾರ್ಡ್ ಮಾಡಿಸಲು ಮಹಿಳೆಯರು ಆಗಮಿಸುತ್ತಿರುವ ದೃಶ್ಯಗಳು ಹಬ್ಬಳ್ಳಿಯಲ್ಲಿ ಕಂಡುಬಂತು.

ಹುಬ್ಬಳ್ಳಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ