AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ಮಧ್ಯೆ ಮಾರಾಮಾರಿ; ಸಲಗ ಚಿತ್ರ ನೋಡಿದ ಬಳಿಕ ಗಲಾಟೆ

ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದ ಬಳಿ ಈ ಘಟನೆ ನಡೆದಿದ್ದು, ಸಿನಿಮಾ ನೋಡಿಕೊಂಡು ಹೊರಬಂದ ಬಳಿಕ ಯುವಕರ ನಡುವೆ ಗಲಾಟೆ ನಡೆದಿದೆ. ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.

ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ಮಧ್ಯೆ ಮಾರಾಮಾರಿ; ಸಲಗ ಚಿತ್ರ ನೋಡಿದ ಬಳಿಕ ಗಲಾಟೆ
ಸ್ಥಳೀಯರ ಮೊಬೈಲ್ನಲ್ಲಿ ಗಲಾಟೆಯ ದೃಶ್ಯಗಳು ಸೆರೆ
TV9 Web
| Edited By: |

Updated on:Oct 15, 2021 | 11:23 AM

Share

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ 2 ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದೆ. ದುನಿಯಾ ವಿಜಯ್ ನಟನೆಯ ಸಲಗ ಚಿತ್ರ ನೋಡಿದ ಮೇಲೆ ಗಲಾಟೆ ನಡೆದಿದೆ. ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದ ಬಳಿ ಈ ಘಟನೆ ನಡೆದಿದ್ದು, ಸಿನಿಮಾ ನೋಡಿಕೊಂಡು ಹೊರಬಂದ ಬಳಿಕ ಯುವಕರ ನಡುವೆ ಗಲಾಟೆ ನಡೆದಿದೆ. ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕರ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯ ಪ್ರಾರಂಭಿಸಿದ್ದಾರೆ.

ಸಿನಿಮಾ ಮುಗಿಸಿ ಹೊರಬಂದ ಜನರಿಂದ ಮಾರಾಮಾರಿ ಚಿತ್ರಮಂದಿರದ ಎದುರುಗಡೆ ಎರಡು ಗುಂಪುಗಳಿಂದ ಗಲಾಟೆ ನಡೆದಿದೆ. ನಿನ್ನೆ(ಅಕ್ಟೋಬರ್​ 14) ಮಧ್ಯಾಹ್ನ ನಡೆದ ಘಟನೆ ತಡವಾಗಿ ಬೆಳಕಿಗೆ. ಮೊದಲ ಶೋ ಮುಕ್ತಾಯದ ಬಳಿಕ ಹೊರ ಬರುವ ವೇಳೆ ಗಲಾಟೆ ನಡೆದಿದ್ದು, ಸ್ಥಳೀಯರ ಮೊಬೈಲ್​ನಲ್ಲಿ ಗಲಾಟೆಯ ದೃಶ್ಯಗಳು ಸೆರೆಯಾಗಿವೆ. ಆದರೆ ಗಲಾಟೆಗೆ ಅಸಲಿ ಕಾರಣ ಏನು ಎನ್ನುವುದು ಮಾತ್ರ ಈವರೆಗೆ ತಿಳಿದು ಬಂದಿಲ್ಲ.

ಬಾಗಲಕೋಟೆ: ಕ್ರಿಕೆಟ್ ಬೆಟ್ಟಿಂಗ್‌ಗಾಗಿ ಸಾಲ ಮಾಡಿದ್ದ ವ್ಯಕ್ತಿ ಆತ್ಮಹತ್ಯೆ ಕ್ರಿಕೆಟ್ ಬೆಟ್ಟಿಂಗ್‌ಗಾಗಿ ಸಾಲ ಮಾಡಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಕಾತರಕಿಯಲ್ಲಿ ನಡೆದಿದೆ. ಘಟಪ್ರಭಾ ನದಿಗೆ ಹಾರಿ ಹಣ್ಣಿನ ವ್ಯಾಪಾರಿ ಸೈಯದ್ ವಾಳದ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾತರಕಿ ಗ್ರಾಮದ ಬಳಿ ಸೈಯದ್ ಶವ ಪತ್ತೆಯಾಗಿದೆ.

ಐಪಿಎಲ್ ಬೆಟ್ಟಿಂಗ್ ನಿಂದ ಲಕ್ಷ ಲಕ್ಷ ಸಾಲ ಮಾಡಿದ್ದ ಸೈಯದ್(38) ಅದನ್ನು ತಿರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೈಯದ್​ಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ, ಮೀನುಗಾರರು ನಿನ್ನೆ(ಅಕ್ಟೋಬರ್ 14) ಇಡೀ ದಿನ ಶೋಧ ನಡೆಸಿದ್ದು, ಇಂದು ಶವ ಪತ್ತೆಯಾಗಿದೆ.

ಇದನ್ನೂ ಓದಿ: ಟ್ಯೂಷನ್‌ ಕ್ಲಾಸ್​ನಲ್ಲಿ ಅನ್ಯ ಧರ್ಮದ ಟೋಪಿ ಧರಿಸಿದಕ್ಕೆ ಗಲಾಟೆ; ಐವರ ಮೇಲೆ ಹಲ್ಲೆ

Salaga Movie: ‘ಸಲಗ’ ಚಿತ್ರದ ಫಸ್ಟ್​ ಹಾಫ್​ ರಿಪೋರ್ಟ್​; ದುನಿಯಾ ವಿಜಯ್​ ಸಿನಿಮಾದಲ್ಲಿ ಇಂಟರ್​ವಲ್​ ತನಕ ಏನುಂಟು ಏನಿಲ್ಲ?

Published On - 9:29 am, Fri, 15 October 21

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!