AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದಿದ್ದರೆ ಬೀದಿಗಿಳಿದು ಹೋರಾಟ -ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ

ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ. ಈ ಹಿಂದೆ ಅನೇಕ ಸರ್ಕಾರ ಕೈ ಬಿಟ್ಟ ಮೊಟ್ಟೆ ಯೋಜನೆ ಜಾರಿಗೆ ತಂದಿದೆ. ಲಿಂಗಾಯತ ಸಿಎಂ ಆಗಿದ್ದರೂ ಯೋಜನೆ ಜಾರಿಗೊಳಿಸಿದ್ದು ತಪ್ಪು...

ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದಿದ್ದರೆ ಬೀದಿಗಿಳಿದು ಹೋರಾಟ -ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ
ಮೊಟ್ಟೆ ಹಿಡಿದಿರುವ ಮಕ್ಕಳು
TV9 Web
| Updated By: ಆಯೇಷಾ ಬಾನು|

Updated on: Dec 08, 2021 | 3:23 PM

Share

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಸಂಬಂಧಿಸಿ ಮತ್ತಷ್ಟು ವಿರೋಧ ಹೆಚ್ಚಾಗಿದೆ. ಮೊಟ್ಟೆ ಯೋಜನೆ ಕೈಬಿಡದೆ ಹೋದ್ರೆ ಹೋರಾಟ ಮಾಡುತ್ತೇವೆ ಎಂದು ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟದ ಸಂತರ ಸುದ್ದಿಗೋಷ್ಠಿ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ. ಈ ಹಿಂದೆ ಅನೇಕ ಸರ್ಕಾರ ಕೈ ಬಿಟ್ಟ ಮೊಟ್ಟೆ ಯೋಜನೆ ಜಾರಿಗೆ ತಂದಿದೆ. ಲಿಂಗಾಯತ ಸಿಎಂ ಆಗಿದ್ದರೂ ಯೋಜನೆ ಜಾರಿಗೊಳಿಸಿದ್ದು ತಪ್ಪು. ದೇಶವನ್ನೇ ಗುತ್ತಿಗೆ ತೆಗೆದುಕೊಂಡವರಂತೆ ಮಾತನಾಡೋ ಬಿಜೆಪಿ ನಾಯಕರೇ ಗಮನ ಕೊಡಿ. ಸಾಮರಸ್ಯ ಸಾರೋ ಆರ್ಎಸ್ಎಸ್ ನಾಯಕರೇ ಗಮನ ಕೊಡಿ. ಯೋಜನೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟದ ಸಂತರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಗಳಿಗಿಂತ ಮೊದಲು ಮಠಗಳು ಅಕ್ಷರ ದಾಸೋಹ ನೀಡಿವೆ. ಇನ್ಮೇಲೆ ಬೀದಿಗಿಳಿದು ಹೋರಾಡಲು ನಿರ್ಧಾರ ಮಾಡಿದ್ದೇವೆ. ನೀವು ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದೆ ಹೋದರೆ ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆ, ಅಂಗನವಾಡಿ ತೆರೆಯಿರಿ. ಡಿಸೆಂಬರ್ 20 ರಂದು ಬೆಳಗಾವಿಯಲ್ಲಿ ಸಂತ ಸಮಾವೇಶ ಮಾಡ್ತಿದ್ದೇವೆ. ಇದು ಕೇವಲ ಲಿಂಗಾಯತ ಸ್ವಾಮೀಜಿಗಳ ಹೋರಾಟವಲ್ಲ. ಎಲ್ಲ ಧರ್ಮದ ಸಸ್ಯಹಾರಿಗಳ ಹೋರಾಟ. ನಮ್ಮ ಹೋರಾಟ ಯಾವುದೇ ಮಾಂಸಹಾರಿಗಳ ವಿರುದ್ಧವಲ್ಲ. ಪೌಷ್ಟಿಕ ಆಹಾರ ಕೊಡಬೇಕು ಎನ್ನೋದಾದ್ರೆ. ಮೊಟ್ಟೆಗಿಂತಲೂ ಉತ್ತಮ ಪೌಷ್ಟಿಕಾಂಶ ಇರೋ ಆಹಾರ ನೀಡಿ. ಮೊಟ್ಟೆನೇ ಕೊಡೊದಾದ್ರೆ ಅವರ ಮನೆಗೆ ಕೊಡಿ. ಶಾಲೆಯಲ್ಲಿ ಬೇಡ, ಶಾಲೆ ಎಲ್ಲರ ಸ್ವತ್ತು ಎಂದು ಸರ್ಕಾರದ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸುದ್ದಿಗೋಷ್ಠಿಯಲ್ಲಿ ಬಸವಧರ್ಮಪೀಠದ ಮಾತೆ ಗಂಗಾದೇವಿ, ವಿಶ್ವಪ್ರಾಣಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ದಯಾನಂದ ಸ್ವಾಮೀಜಿ, ಚೆನ್ನಬಸವಾನಂದ ಸ್ವಾಮೀಜಿ ಭಾಗಿಯಾಗಿದ್ದರು.

ಇದನ್ನೂ ಓದಿ: Team India: ದಕ್ಷಿಣ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅನುಮಾನ

ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ದುರಹಂಕಾರ ಸಿದ್ದರಾಮಯ್ಯ ವಂಶವಾಹಿನಿಯಲ್ಲಿ ಹರಿಯುತ್ತಿದೆ: ವಿಶ್ವನಾಥ್
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
ಜಪಾನ್​ನಲ್ಲಿ ಹೇಗಿವೆ ಬನ್ನೇರುಘಟ್ಟದ ಆನೆಗಳು: ಇಲ್ಲಿದೆ ವಿಡಿಯೋ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
‘ಒಡಲಾಳ’ ನಾಟಕ; 21ನೇ ವಯಸ್ಸಿಗೆ ಹಣ್ಣಣ್ಣು ಅಜ್ಜಿಯ ಪಾತ್ರ ಮಾಡಿದ್ದ ಉಮಾಶ್ರೀ
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!
ತುಂಗಭದ್ರಾ ಏತ ನೀರಾವರಿ ಕಾಮಗಾರಿ ಪೈಪ್ ಒಡೆದು ಆಕಾಶದೆತ್ತರ ಚಿಮ್ಮಿದ ನೀರು!