AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದಿದ್ದರೆ ಬೀದಿಗಿಳಿದು ಹೋರಾಟ -ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ

ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ. ಈ ಹಿಂದೆ ಅನೇಕ ಸರ್ಕಾರ ಕೈ ಬಿಟ್ಟ ಮೊಟ್ಟೆ ಯೋಜನೆ ಜಾರಿಗೆ ತಂದಿದೆ. ಲಿಂಗಾಯತ ಸಿಎಂ ಆಗಿದ್ದರೂ ಯೋಜನೆ ಜಾರಿಗೊಳಿಸಿದ್ದು ತಪ್ಪು...

ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದಿದ್ದರೆ ಬೀದಿಗಿಳಿದು ಹೋರಾಟ -ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ
ಮೊಟ್ಟೆ ಹಿಡಿದಿರುವ ಮಕ್ಕಳು
TV9 Web
| Edited By: |

Updated on: Dec 08, 2021 | 3:23 PM

Share

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಸಂಬಂಧಿಸಿ ಮತ್ತಷ್ಟು ವಿರೋಧ ಹೆಚ್ಚಾಗಿದೆ. ಮೊಟ್ಟೆ ಯೋಜನೆ ಕೈಬಿಡದೆ ಹೋದ್ರೆ ಹೋರಾಟ ಮಾಡುತ್ತೇವೆ ಎಂದು ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟದ ಸಂತರ ಸುದ್ದಿಗೋಷ್ಠಿ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ. ಈ ಹಿಂದೆ ಅನೇಕ ಸರ್ಕಾರ ಕೈ ಬಿಟ್ಟ ಮೊಟ್ಟೆ ಯೋಜನೆ ಜಾರಿಗೆ ತಂದಿದೆ. ಲಿಂಗಾಯತ ಸಿಎಂ ಆಗಿದ್ದರೂ ಯೋಜನೆ ಜಾರಿಗೊಳಿಸಿದ್ದು ತಪ್ಪು. ದೇಶವನ್ನೇ ಗುತ್ತಿಗೆ ತೆಗೆದುಕೊಂಡವರಂತೆ ಮಾತನಾಡೋ ಬಿಜೆಪಿ ನಾಯಕರೇ ಗಮನ ಕೊಡಿ. ಸಾಮರಸ್ಯ ಸಾರೋ ಆರ್ಎಸ್ಎಸ್ ನಾಯಕರೇ ಗಮನ ಕೊಡಿ. ಯೋಜನೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟದ ಸಂತರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಗಳಿಗಿಂತ ಮೊದಲು ಮಠಗಳು ಅಕ್ಷರ ದಾಸೋಹ ನೀಡಿವೆ. ಇನ್ಮೇಲೆ ಬೀದಿಗಿಳಿದು ಹೋರಾಡಲು ನಿರ್ಧಾರ ಮಾಡಿದ್ದೇವೆ. ನೀವು ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದೆ ಹೋದರೆ ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆ, ಅಂಗನವಾಡಿ ತೆರೆಯಿರಿ. ಡಿಸೆಂಬರ್ 20 ರಂದು ಬೆಳಗಾವಿಯಲ್ಲಿ ಸಂತ ಸಮಾವೇಶ ಮಾಡ್ತಿದ್ದೇವೆ. ಇದು ಕೇವಲ ಲಿಂಗಾಯತ ಸ್ವಾಮೀಜಿಗಳ ಹೋರಾಟವಲ್ಲ. ಎಲ್ಲ ಧರ್ಮದ ಸಸ್ಯಹಾರಿಗಳ ಹೋರಾಟ. ನಮ್ಮ ಹೋರಾಟ ಯಾವುದೇ ಮಾಂಸಹಾರಿಗಳ ವಿರುದ್ಧವಲ್ಲ. ಪೌಷ್ಟಿಕ ಆಹಾರ ಕೊಡಬೇಕು ಎನ್ನೋದಾದ್ರೆ. ಮೊಟ್ಟೆಗಿಂತಲೂ ಉತ್ತಮ ಪೌಷ್ಟಿಕಾಂಶ ಇರೋ ಆಹಾರ ನೀಡಿ. ಮೊಟ್ಟೆನೇ ಕೊಡೊದಾದ್ರೆ ಅವರ ಮನೆಗೆ ಕೊಡಿ. ಶಾಲೆಯಲ್ಲಿ ಬೇಡ, ಶಾಲೆ ಎಲ್ಲರ ಸ್ವತ್ತು ಎಂದು ಸರ್ಕಾರದ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸುದ್ದಿಗೋಷ್ಠಿಯಲ್ಲಿ ಬಸವಧರ್ಮಪೀಠದ ಮಾತೆ ಗಂಗಾದೇವಿ, ವಿಶ್ವಪ್ರಾಣಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ದಯಾನಂದ ಸ್ವಾಮೀಜಿ, ಚೆನ್ನಬಸವಾನಂದ ಸ್ವಾಮೀಜಿ ಭಾಗಿಯಾಗಿದ್ದರು.

ಇದನ್ನೂ ಓದಿ: Team India: ದಕ್ಷಿಣ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅನುಮಾನ

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ