ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದಿದ್ದರೆ ಬೀದಿಗಿಳಿದು ಹೋರಾಟ -ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ

ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ. ಈ ಹಿಂದೆ ಅನೇಕ ಸರ್ಕಾರ ಕೈ ಬಿಟ್ಟ ಮೊಟ್ಟೆ ಯೋಜನೆ ಜಾರಿಗೆ ತಂದಿದೆ. ಲಿಂಗಾಯತ ಸಿಎಂ ಆಗಿದ್ದರೂ ಯೋಜನೆ ಜಾರಿಗೊಳಿಸಿದ್ದು ತಪ್ಪು...

ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದಿದ್ದರೆ ಬೀದಿಗಿಳಿದು ಹೋರಾಟ -ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟ
ಮೊಟ್ಟೆ ಹಿಡಿದಿರುವ ಮಕ್ಕಳು
Follow us
| Updated By: ಆಯೇಷಾ ಬಾನು

Updated on: Dec 08, 2021 | 3:23 PM

ಹುಬ್ಬಳ್ಳಿ: ಸರ್ಕಾರಿ ಶಾಲೆಗಳಲ್ಲಿ ಮೊಟ್ಟೆ ನೀಡುವ ಯೋಜನೆಗೆ ಸಂಬಂಧಿಸಿ ಮತ್ತಷ್ಟು ವಿರೋಧ ಹೆಚ್ಚಾಗಿದೆ. ಮೊಟ್ಟೆ ಯೋಜನೆ ಕೈಬಿಡದೆ ಹೋದ್ರೆ ಹೋರಾಟ ಮಾಡುತ್ತೇವೆ ಎಂದು ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟದ ಸಂತರ ಸುದ್ದಿಗೋಷ್ಠಿ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಜನರಲ್ಲಿ ಏಕರೂಪ ರೂಪಿಸಬೇಕಾದ ಸರ್ಕಾರವೇ ಮೊಟ್ಟೆ ಕೊಡುವುದರ ಮೂಲಕ ವೈಮನಸ್ಸು ತಂದಿಟ್ಡಿದೆ. ಈ ಹಿಂದೆ ಅನೇಕ ಸರ್ಕಾರ ಕೈ ಬಿಟ್ಟ ಮೊಟ್ಟೆ ಯೋಜನೆ ಜಾರಿಗೆ ತಂದಿದೆ. ಲಿಂಗಾಯತ ಸಿಎಂ ಆಗಿದ್ದರೂ ಯೋಜನೆ ಜಾರಿಗೊಳಿಸಿದ್ದು ತಪ್ಪು. ದೇಶವನ್ನೇ ಗುತ್ತಿಗೆ ತೆಗೆದುಕೊಂಡವರಂತೆ ಮಾತನಾಡೋ ಬಿಜೆಪಿ ನಾಯಕರೇ ಗಮನ ಕೊಡಿ. ಸಾಮರಸ್ಯ ಸಾರೋ ಆರ್ಎಸ್ಎಸ್ ನಾಯಕರೇ ಗಮನ ಕೊಡಿ. ಯೋಜನೆ ಹಿಂಪಡೆಯದಿದ್ದರೆ ಪರಿಣಾಮ ಎದುರಿಸಬೇಕಾಗುತ್ತೆ ಎಂದು ಅಖಿಲ ಭಾರತ ಸಸ್ಯಹಾರಿಗಳ ಒಕ್ಕೂಟದ ಸಂತರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.

ಸರ್ಕಾರಗಳಿಗಿಂತ ಮೊದಲು ಮಠಗಳು ಅಕ್ಷರ ದಾಸೋಹ ನೀಡಿವೆ. ಇನ್ಮೇಲೆ ಬೀದಿಗಿಳಿದು ಹೋರಾಡಲು ನಿರ್ಧಾರ ಮಾಡಿದ್ದೇವೆ. ನೀವು ಶಾಲೆಗಳಲ್ಲಿ ಮೊಟ್ಟೆ ಯೋಜನೆ ಕೈಬಿಡದೆ ಹೋದರೆ ಸಸ್ಯಹಾರಿಗಳಿಗೆ ಪ್ರತ್ಯೇಕ ಶಾಲೆ, ಅಂಗನವಾಡಿ ತೆರೆಯಿರಿ. ಡಿಸೆಂಬರ್ 20 ರಂದು ಬೆಳಗಾವಿಯಲ್ಲಿ ಸಂತ ಸಮಾವೇಶ ಮಾಡ್ತಿದ್ದೇವೆ. ಇದು ಕೇವಲ ಲಿಂಗಾಯತ ಸ್ವಾಮೀಜಿಗಳ ಹೋರಾಟವಲ್ಲ. ಎಲ್ಲ ಧರ್ಮದ ಸಸ್ಯಹಾರಿಗಳ ಹೋರಾಟ. ನಮ್ಮ ಹೋರಾಟ ಯಾವುದೇ ಮಾಂಸಹಾರಿಗಳ ವಿರುದ್ಧವಲ್ಲ. ಪೌಷ್ಟಿಕ ಆಹಾರ ಕೊಡಬೇಕು ಎನ್ನೋದಾದ್ರೆ. ಮೊಟ್ಟೆಗಿಂತಲೂ ಉತ್ತಮ ಪೌಷ್ಟಿಕಾಂಶ ಇರೋ ಆಹಾರ ನೀಡಿ. ಮೊಟ್ಟೆನೇ ಕೊಡೊದಾದ್ರೆ ಅವರ ಮನೆಗೆ ಕೊಡಿ. ಶಾಲೆಯಲ್ಲಿ ಬೇಡ, ಶಾಲೆ ಎಲ್ಲರ ಸ್ವತ್ತು ಎಂದು ಸರ್ಕಾರದ ಯೋಜನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸುದ್ದಿಗೋಷ್ಠಿಯಲ್ಲಿ ಬಸವಧರ್ಮಪೀಠದ ಮಾತೆ ಗಂಗಾದೇವಿ, ವಿಶ್ವಪ್ರಾಣಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ದಯಾನಂದ ಸ್ವಾಮೀಜಿ, ಚೆನ್ನಬಸವಾನಂದ ಸ್ವಾಮೀಜಿ ಭಾಗಿಯಾಗಿದ್ದರು.

ಇದನ್ನೂ ಓದಿ: Team India: ದಕ್ಷಿಣ ಆಫ್ರಿಕಾ ಸರಣಿಗೆ ಟೀಮ್ ಇಂಡಿಯಾದ ನಾಲ್ವರು ಆಟಗಾರರು ಅನುಮಾನ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ