ಧಾರವಾಡ: ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ

| Updated By: preethi shettigar

Updated on: Oct 12, 2021 | 10:50 AM

ಅಳ್ನಾವರ ಮತ್ತು ಸುತ್ತಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಧಾರವಾಡ: ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ
ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ
Follow us on

ಧಾರವಾಡ: ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ದಯಾಸಾಗರ ಎಂಬುವವರ ಮನೆ ಮೇಲೆ ಭಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರನ್ನು ಕಾರ್ಯಕರ್ತರು ಹೊರಕಳಿಸಿದ್ದಾರೆ.

ಅಳ್ನಾವರ ಮತ್ತು ಸುತ್ತಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಮತಾಂತರಕ್ಕೆ ಸಂಬಂಧಪಟ್ಟಂತೆ ಅನೇಕ ಆರೋಪಗಳು ಕೇಳಿ ಬಂದಿವೆ.

ಚಿತ್ರದುರ್ಗ:ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ
ಇತ್ತೀಚೆಗೆ ರಾಜ್ಯದ ಹಲವೆಡೆ ಮತಾಂತರದ ಆರೋಪ ಕೇಳಿಬರುತ್ತಿದೆ. ಅಂತೆಯೇ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಲವಂತವಾಗಿ ಮತಾಂತರ ಮಾಡಿ‌ ದೇಶದ್ರೋಹ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಸ್ಥಳೀಯ ಯುವಕರು, ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತಾಂತರ ನಡೆಸುತ್ತಿದ್ದಾರೆ ಎಂದು 2 ಗುಂಪಿನ ಮಧ್ಯೆ ವಾಗ್ವಾದವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​ ಹಾಕಿ ದೂರಿದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್
ಅಕ್ಟೋಬರ್ 1  ರಂದು ಚಿತ್ರದುರ್ಗದಲ್ಲಿಯೂ ಮತಾಂತರದ ಆರೋಪಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು. ಇದಕ್ಕೆ ಮುಖ್ಯ ಕಾರಣ ಚಿತ್ರದುರ್ಗ ಜಿಲ್ಲೆಯ ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರ ನಡೆದಿರುವ ಬಗ್ಗೆ ಶಾಸಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಆರೋಪಿಸಿರುವುದೇ ಆಗಿದೆ.

ಹೊಸದುರ್ಗ ಕ್ಷೇತ್ರದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್, ಮತಾಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸುಡುಗಾಡು ಸಿದ್ಧ ಸಮುದಾಯದ ಜನರನ್ನು ಮತಾಂತರ ಮಾಡಲಾಗುತ್ತಿದೆ. ಕ್ರಿಶ್ಚಿಯನ್ ಧರ್ಮಕ್ಕೆ 40-50 ಕುಟುಂಬಗಳನ್ನು ಮತಾಂತರ ಮಾಡಲಾಗಿದೆ. ಜನರಿಂದ ಈ ಬಗ್ಗೆ ದೂರು ಕೂಡ ಬಂದಿದೆ ಎಂದು ಶಾಸಕ ಗೂಳಿಹಟ್ಟಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

ಇದನ್ನೂ ಓದಿ:
ಮತಾಂತರ ಆರೋಪಿಸಿ ರೂರ್ಕಿ ಚರ್ಚ್ ಮೇಲೆ ದಾಳಿ: 200 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ ಉತ್ತರಾಖಂಡ್ ಪೊಲೀಸರು

ಬಲ್ಲಾಳಸಮುದ್ರ ಗ್ರಾಮದಲ್ಲಿ ಮತಾಂತರದ ಆರೋಪ; ಕ್ರೈಸ್ತ ಪ್ರಾರ್ಥನಾ ಮಂದಿರದ ಬಳಿ 2 ಗುಂಪಿನ ಮಧ್ಯೆ ವಾಗ್ವಾದ

Published On - 10:47 am, Tue, 12 October 21